AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಮೃಗ ಹತ್ಯೆ ಪ್ರಕರಣ; ಸಲ್ಮಾನ್ ಜೊತೆ ಸೈಫ್, ತಬುಗೂ ಶುರುವಾಯ್ತು ಭಯ  

1998ರ ಕೃಷ್ಣಮೃಗ ಹತ್ಯಾ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅಪರಾಧಿ ಎಂದು ತೀರ್ಪು ನೀಡಲಾಗಿತ್ತು. ಆದರೆ, ಸೈಫ್ ಅಲಿ ಖಾನ್, ತಬು, ಸೋನಾಲಿ ಬೇಂದ್ರೆ ಮತ್ತು ನೀಲಂ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. ಈಗ ರಾಜಸ್ಥಾನ ಸರ್ಕಾರ ಈ ದೋಷಮುಕ್ತತೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 28ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಕೃಷ್ಣಮೃಗ ಹತ್ಯೆ ಪ್ರಕರಣ; ಸಲ್ಮಾನ್ ಜೊತೆ ಸೈಫ್, ತಬುಗೂ ಶುರುವಾಯ್ತು ಭಯ  
ತಬು-ಸಲ್ಮಾನ್-ಸೈಫ್
ರಾಜೇಶ್ ದುಗ್ಗುಮನೆ
|

Updated on: May 21, 2025 | 2:58 PM

Share

1998ರಲ್ಲಿ ನಡೆದ ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಸಲ್ಮಾನ್ ಖಾನ್ (Salman Khan) ಅಪರಾಧಿ ಎಂದು ಸ್ಥಳೀಯ ಕೋರ್ಟ್ ತೀರ್ಪು ನೀಡಿದೆ. ಆ ಬಳಿಕ ತೀರ್ಪನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಲಾಗಿದೆ. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗಲೇ ಪ್ರಕರಣದಿಂದ ದೋಷಮುಕ್ತವಾಗಿದ್ದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ತಬು ಮತ್ತು ನೀಲಂಗೆ ಮತ್ತೆ ಕಂಟಕ ಶುರುವಾಗುವ ಸೂಚನೆ ಸಿಕ್ಕಿದೆ. ಇವರನ್ನು ಪ್ರಕರಣದಿಂದ ಕೈ ಬಿಟ್ಟ ವಿಚಾರದಲ್ಲಿ ರಾಜಸ್ಥಾನ ಸರ್ಕಾರ ಹೈಕೋರ್ಟ್ ಮೊರೆ ಹೋಗಿದೆ.

1998ರ ಅಕ್ಟೋಬರ್​ನಲ್ಲಿ ಸಲ್ಮಾನ್ ಖಾನ್, ಸೈಫ್, ತಬು, ಸೋನಾಲಿ ಬೇಂದ್ರ ಮೊದಲಾದವರು ‘ಹಮ್ ಸಾತ್ ಸಾತ್ ಹೇ’ ಚಿತ್ರೀಕರಣದ ಶೂಟ್​ಗೆ ಜೋಧ್​ಪುರ್​ ಸಮೀಪದ ಗ್ರಾಮ ಒಂದಕ್ಕೆ ತೆರಳಿದ್ದರು. ಶೂಟ್ ಪೂರ್ಣಗೊಂಡ ಬಳಿಕ ಸಲ್ಮಾನ್ ರಾತ್ರಿ ಬೇಟೆಗೆ ತೆರಳಿ ಕೃಷ್ಣಮೃಗ ಹತ್ಯೆ ಮಾಡಿದ್ದರು. ಈ ವೇಳೆ ಸಹಕಲಾವಿದರು ಜೊತೆಗಿದ್ದವರೂ ಸಾತ್ ನೀಡಿದ ಆರೋಪ ಇದೆ. ಈ ಪ್ರಕರಣದ ವಿಚಾರಣೆ ಬರೋಬ್ಬರಿ 20 ವರ್ಷಗಳ ಕಾಲ ನಡೆಯಿತು ಮತ್ತು 2018ರಲ್ಲಿ ಸಲ್ಮಾನ್ ಖಾನ್ ಅವರನ್ನು ಅಪರಾಧಿ ಎಂದು ತೀರ್ಪು ನೀಡಿತು. ಈ ವೇಳೆ ಸೈಫ್ ಅಲಿ ಖಾನ್, ತಬು, ಸೋನಾಲಿ ಬೇಂದ್ರೆ ಹಾಗೂ ನಿಲಂನ ನಿರಪರಾಧಿ ಎಂದು ಘೋಷಿಸಲಾಯಿತು.

ಈಗ ರಾಜಸ್ಥಾನ ಸರ್ಕಾರವು ಈ ತೀರ್ಪನ್ನು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಮನೋಜ್ ಕುಮಾರ್ ಗಾರ್ಗ್​ ಅವರು ಜುಲೈ 28ಕ್ಕೆ ಪ್ರಕರಣದ ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಇದಾದ ಬಳಿಕ ಈ ಕಲಾವಿದರ ಭವಿಷ್ಯ ನಿರ್ಧಾರ ಆಗಲಿದೆ.

ಇದನ್ನೂ ಓದಿ
Image
‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆಯಲು ಅಕ್ಷಯ್ ಕುಮಾರ್ ಕಾರಣ
Image
3.5 ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ
Image
ಹಿರಿಯ ನಟ ಪರೇಶ್ ರಾವಲ್ ವಿರುದ್ಧ ದೂರು, 25 ಕೋಟಿ ರೂ ಪರಿಹಾರಕ್ಕೆ ಒತ್ತಾಯ
Image
ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಇದನ್ನೂ ಓದಿ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೇಳೋದೇನು?

ದೂರು ದಾಖಲು ಮಾಡಿದ್ದು ಬಿಷ್ಣೋಯ್ ಕುಟುಂಬ

1998ರಲ್ಲಿ ಸಲ್ಮಾನ್ ಖಾನ್ ಅವರು ಎರಡು ಕೃಷ್ಣಮೃಗ ಹತ್ಯೆ ಮಾಡಿದ್ದರು. ಕೃಷ್ಣಮೃಗವನ್ನು ದೇವರು ಎಂದು ಆರಾಧಿಸುವ ಬಿಷ್ನೋಯ್ ಸಮುದಾಯಕ್ಕೆ ಈ ಘಟನೆ ತೀವ್ರ ನೋವು ತಂದಿತ್ತು. ಹೀಗಾಗಿ, ಇದೇ ಸಮುದಾಯದವರು ಸಲ್ಮಾನ್ ಹಾಗೂ ಇತರರ ವಿರುದ್ಧ ದೂರು ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ಸೈಫ್ ಹಾಗೂ ಮೊದಲಾದವರು ಕೈ ಬಿಟ್ಟ ಬಗ್ಗೆ ಅವರಿಗೆ ಬೇಸರ ಇದೆ.

ಕೊಲೆ ಬೆದರಿಕೆ

ಸಲ್ಮಾನ್ ಖಾನ್ ಅವರಿಗೆ ಸೆಷನ್ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಅವರು ಹೈಕೋರ್ಟ್​ಗೆ ಹೋಗಿ ಈ ಆದೇಶಕ್ಕೆ ತಡೆ ತಂದಿದ್ದರು. ಆದರೆ, ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಬೆಂಬಿಡದೆ ಕಾಡುತ್ತಿದ್ದಾರೆ. ಅವರಿಗೆ ಕೊಲೆ ಬೆದರಿಕೆಯೂ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ