AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

Rajat Bedi: ಅಪಘಾತವಾದ ಕೂಡಲೇ ಗಾಯಾಳುವನ್ನು ಕೂಪರ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎನ್​ ನಗರ್​ ಪೊಲೀಸ್​ ಠಾಣೆಯಲ್ಲಿ ರಜತ್​ ಬೇಡಿ ವಿರುದ್ಧ ಕೇಸ್​ ದಾಖಲಾಗಿದೆ. ಇದುವರೆಗೂ ಪೊಲೀಸರು ರಜತ್​ ಬೇಡಿಯನ್ನು ಬಂಧಿಸಿಲ್ಲ.

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ
ರಜತ್ ಬೇಡಿ
TV9 Web
| Edited By: |

Updated on: Sep 09, 2021 | 8:15 AM

Share

ಇತ್ತೀಚೆಗಷ್ಟೇ ರಾಜೇಶ್​ ಎಂಬ ಪಾದಚಾರಿಗೆ ನಟ ರಜತ್​ ಬೇಡಿ ಅವರ ಕಾರು ಡಿಕ್ಕಿ ಹೊಡೆದಿತ್ತು. ಪರಿಣಾಮ ಗಾಯಾಳುವಿನ​ ಪರಿಸ್ಥಿತಿ ಚಿಂತಾಜನಕವಾಗಿತ್ತು. ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್​ ಮೃತರಾಗಿದ್ದಾರೆ. ಹಾಗಾಗಿ ರಜತ್​ ಬೇಡಿಗೆ ಸಂಕಷ್ಟ ಎದುರಾಗಿದೆ. ನಟನ ಮೇಲೆ ಹೊಸ ಕೇಸ್​ ದಾಖಲಿಸಲಾಗಿದೆ. ಅಪಘಾತವಾದ ಬಳಿಕ ನಟನಿಂದ ತಮಗೆ ಸೂಕ್ತ ನೆರವು ಸಿಕ್ಕಿಲ್ಲ ಎಂದು ರಾಜೇಶ್​ ಕುಟುಂಬದವರು ಆರೋಪಿಸಿದ್ದಾರೆ.

ರಾಜೇಶ್​ಗೆ 40 ವರ್ಷ ವಯಸ್ಸಾಗಿತ್ತು. ಅಪಘಾತವಾದ ಕೂಡಲೇ ಅವರನ್ನು ಕೂಪರ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎನ್​ ನಗರ್​ ಪೊಲೀಸ್​ ಠಾಣೆಯಲ್ಲಿ ರಜತ್​ ಬೇಡಿ ವಿರುದ್ಧ ಕೇಸ್​ ದಾಖಲಾಗಿದೆ. ಇದುವರೆಗೂ ಪೊಲೀಸರು ರಜತ್​ ಬೇಡಿಯನ್ನು ಬಂಧಿಸಿಲ್ಲ. ಮಡದಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ರಾಜೇಶ್​ ಅಗಲಿದ್ದಾರೆ.

ರಾಜೇಶ್​ ಕುಟುಂಬದವರ ಆರೋಪವನ್ನು ರಜತ್​ ಬೇಡಿ ಮ್ಯಾನೇಜರ್​ ತಳ್ಳಿಹಾಕಿದ್ದಾರೆ. ‘ಇದೊಂದು ದುರದೃಷ್ಟದ ಸಂಗತಿ. ರಜತ್​ ನಿಧಾನವಾಗಿಯೇ ಕಾರು ಓಡಿಸುತ್ತಿದ್ದರು. ಅವರ ಕಾರಿಗೆ ರಾಜೇಶ್ ಸಡನ್ ಆಗಿ​ ಅಡ್ಡ ಬಂದರು. ರಾಜೇಶ್ ತುಂಬ ಕುಡಿದಿದ್ದರು. ಅವರನ್ನು ಸ್ವತಃ ರಜತ್​ ಅವರೇ ಕೂಪರ್​ ಆಸ್ಪತ್ರೆಗೆ ಕರೆದುಕೊಂಡು ಹೋದರು. ತಮ್ಮ ಕೈಲಾದ ಸಹಾಯ ಮಾಡಿದರು. ಮಧ್ಯರಾತ್ರಿ ಕೂಡ ರಕ್ತದ ವ್ಯವಸ್ಥೆ ಮಾಡಿಸಿದ್ದರು. ರಾಜೇಶ್​ ಬೇಗ ಚೇತರಿಸಿಕೊಳ್ಳಲಿ ಅಂತ ಪ್ರಾರ್ಥಿಸಿದ್ದರು. ಆದರೆ ಅವರ ನಿಧನದಿಂದ ರಜತ್​ಗೆ ತೀವ್ರ ನೋವಾಗಿದೆ’ ಎಂದು ಮ್ಯಾನೇಜರ್​ ಹೇಳಿಕೆ ನೀಡಿದ್ದಾರೆ.

‘ಸ್ವಲ್ಪ ಹೊತ್ತಿನಲ್ಲಿ ವಾಪಸ್​ ಬರುತ್ತೇನೆ ಅಂತ ಹೇಳಿಹೋದ ರಜತ್​ ಬೇಡಿ ಅವರು ನಂತರ ಮರಳಿ ಬಂದಿಲ್ಲ. ಡಿಎನ್​ ನಗರ್​ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನನ್ನ ಗಂಡನಿಗೆ ಏನಾದರೂ ಆದರೆ ಅದಕ್ಕೆ ರಜತ್​ ಬೇಡಿಯೇ ಕಾರಣ’ ಎಂದು ರಾಜೇಶ್​ ಪತ್ನಿ ಅಳಲು ತೋಡಿಕೊಂಡಿದ್ದರು. ‘ಕೊಯಿ ಮಿಲ್​ ಗಯಾ’, ‘ಖಾಮೋಶ್​’, ‘ದಿ ಟ್ರೇನ್​’, ‘ಪಾರ್ಟ್ನರ್​’, ‘ಅಕ್ಸರ್​’ ಸೇರಿದಂತೆ 40ಕ್ಕೂ ಅಧಿಕ ಸಿನಿಮಾಗಳಲ್ಲಿ ರಜತ್​ ಬೇಡಿ ನಟಿಸಿದ್ದಾರೆ. ಕನ್ನಡದ ‘ಜಗ್ಗುದಾದ’ ಸಿನಿಮಾದಲ್ಲೂ ಅವರೊಂದು ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ:

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ; ಬೇರೆ ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಸ್ನೇಹಿತರು

Yashika Aanand: ಭೀಕರ ಅಪಘಾತದ ಇಂಚಿಂಚೂ ವಿವರ; ಹಾಸಿಗೆಯಲ್ಲೇ ನರಕ ನೋಡುತ್ತಿರುವ ನಟಿ ಯಶಿಕಾ ಆನಂದ್​

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ