AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajat Bedi: ಬಾಲಿವುಡ್​ ನಟ ರಜತ್​ ಬೇಡಿ ಕಾರು ಡಿಕ್ಕಿ; ಚಿಂತಾಜನಕ ಸ್ಥಿತಿಯಲ್ಲಿ ಪಾದಚಾರಿ: ಕೇಸ್​ ದಾಖಲು

Rajat Bedi | Car Accident: ರಾಜೇಶ್​ ಎಂಬ ಪಾದಚಾರಿಗೆ ನಟ ರಜತ್​ ಬೇಡಿ ಕಾರು ಡಿಕ್ಕಿ ಹೊಡೆದಿದೆ. ರಾಜೇಶ್​ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

Rajat Bedi: ಬಾಲಿವುಡ್​ ನಟ ರಜತ್​ ಬೇಡಿ ಕಾರು ಡಿಕ್ಕಿ; ಚಿಂತಾಜನಕ ಸ್ಥಿತಿಯಲ್ಲಿ ಪಾದಚಾರಿ: ಕೇಸ್​ ದಾಖಲು
ರಜತ್ ಬೇಡಿ
TV9 Web
| Edited By: |

Updated on: Sep 07, 2021 | 1:30 PM

Share

ಬಾಲಿವುಡ್​ನ ಖ್ಯಾತ ನಟ ರಜತ್​ ಬೇಡಿ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಮುಂಬೈನಲ್ಲಿ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ 40ರ ಪ್ರಾಯದ ವ್ಯಕ್ತಿಯ ಸ್ಥಿತಿ ಚಿಂತಾಜನಕ ಆಗಿದೆ. ಕೂಡಲೇ ಅವರನ್ನು ಕೂಪರ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎನ್​ ನಗರ್​ ಪೊಲೀಸ್​ ಠಾಣೆಯಲ್ಲಿ ರಜತ್​ ಬೇಡಿ ವಿರುದ್ಧ ಕೇಸ್​ ದಾಖಲಾಗಿದೆ. ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ನಟಿಸಿರುವ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಾಜೇಶ್​ ಎಂದು ಗುರುತಿಸಲಾಗಿದೆ. ಇದುವರೆಗೂ ಪೊಲೀಸರು ರಜತ್​ ಬೇಡಿಯನ್ನು ಬಂಧಿಸಿಲ್ಲ.

ಅಪಘಾತ ನಡೆದ ತಕ್ಷಣ ಗಾಯಾಳುವನ್ನು ರಜತ್​ ಬೇಡಿಯವರೇ ಕೂಪರ್​ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಡಿಎನ್​ ನಗರ್​ ಪೊಲೀಸ್​ ಠಾಣೆಗೆ ಬಂದು ಪೊಲೀಸರಿಗೆ ವಿಷಯ ತಿಳಿಸಿದರು ಎನ್ನಲಾಗಿದೆ. ಅಪಘಾತಕ್ಕೆ ಒಳಗಾಗಿರುವ ರಾಜೇಶ್​ ಕುಟುಂಬಕ್ಕೆ ಸಹಾಯ ಮಾಡುವುದಾಗಿ ರಜತ್​ ಬೇಡಿ ಭರವಸೆ ನೀಡಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸಿ ಹೋದ ಬಳಿಕ ಅವರು ಮತ್ತೆ ಆಸ್ಪತ್ರೆಯ ಕಡೆಗೆ ತಲೆ ಹಾಕಿಲ್ಲ ಎಂದು ಕುಟುಂಬದವರು ದೂರಿದ್ದಾರೆ.

‘ಸದ್ಯ ಗಾಯಾಳು ರಾಜೇಶ್​ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕ್ಸಿಜನ್​ ಸಪೋರ್ಟ್​ನಲ್ಲಿ ಇದ್ದಾರೆ. ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದೆ’ ಎಂದು ಕೂಪರ್​ ಆಸ್ಪತ್ರೆಯ ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ಸ್ವಲ್ಪ ಹೊತ್ತಿನಲ್ಲಿ ವಾಪಸ್​ ಬರುತ್ತೇನೆ ಅಂತ ಹೇಳಿಹೋದ ರಜತ್​ ಬೇಡಿ ಅವರು ನಂತರ ಮರಳಿ ಬಂದಿಲ್ಲ’ ಎಂದು ರಾಜೇಶ್​ ಪತ್ನಿ ಹೇಳಿದ್ದಾರೆ. ರಾಜೇಶ್​ ಅವರಿಗೆ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ.

‘ಡಿಎನ್​ ನಗರ್​ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆದರೆ ಇನ್ನೂ ಅವರು ರಜತ್​ ಬೇಡಿಯನ್ನು ಬಂಧಿಸಿಲ್ಲ. ನನ್ನ ಗಂಡನಿಗೆ ಏನಾದರೂ ಆದರೆ ಅದಕ್ಕೆ ರಜತ್​ ಬೇಡಿಯೇ ಕಾರಣ’ ಎಂದು ರಾಜೇಶ್​ ಪತ್ನಿ ಅಳಲು ತೋಡಿಕೊಂಡಿದ್ದಾರೆ. ‘ಕೊಯಿ ಮಿಲ್​ ಗಯಾ’, ‘ಖಾಮೋಶ್​’, ‘ದಿ ಟ್ರೇನ್​’, ‘ಪಾರ್ಟ್ನರ್​’, ‘ಅಕ್ಸರ್​’ ಸೇರಿದಂತೆ 40ಕ್ಕೂ ಅಧಿಕ ಸಿನಿಮಾಗಳಲ್ಲಿ ರಜತ್​ ಬೇಡಿ ನಟಿಸಿದ್ದಾರೆ. ಕನ್ನಡದ ‘ಜಗ್ಗುದಾದ’ ಸಿನಿಮಾದಲ್ಲೂ ಅವರೊಂದು ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ:

ಖ್ಯಾತ ನಟಿ ಯಶಿಕಾ ಆನಂದ್​ ಭೀಕರ ಕಾರು ಅಪಘಾತ; ಸ್ನೇಹಿತೆ ಸ್ಥಳದಲ್ಲೇ ಸಾವು

ಭೀಕರ ಅಪಘಾತದ ಇಂಚಿಂಚೂ ವಿವರ; ಹಾಸಿಗೆಯಲ್ಲೇ ನರಕ ನೋಡುತ್ತಿರುವ ನಟಿ ಯಶಿಕಾ ಆನಂದ್​

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು