‘ನನ್ನ ಗುರು ಜೊತೆ ಮತ್ತೆ ಕೆಲಸ ಮಾಡುತ್ತಿದ್ದೇನೆ’: ಅಮಿತಾಭ್​ ಬಗ್ಗೆ ರಜನಿಕಾಂತ್​ ಗೌರವದ ಮಾತು

Thalaivar 170: ದೊಡ್ಡ ಬಜೆಟ್​ನಲ್ಲಿ ‘ತಲೈವರ್​ 170’ ಸಿನಿಮಾ ನಿರ್ಮಾಣ ಆಗುತ್ತಿದೆ. ರಜನಿಕಾಂತ್​, ಅಮಿತಾಭ್​ ಬಚ್ಚನ್​, ಫಹಾದ್ ಫಾಸಿಲ್​, ಮಂಜು ವಾರಿಯರ್​, ರಾಣಾ ದಗ್ಗುಬಾಟಿ ಮುಂತಾದವರು ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಮಿತಾಭ್​ ಮತ್ತು ರಜನಿಕಾಂತ್​ ಜೊತೆಯಾಗಿ ಇರುವ ಫೋಟೋ ಸಖತ್​ ವೈರಲ್​ ಆಗಿದೆ.

‘ನನ್ನ ಗುರು ಜೊತೆ ಮತ್ತೆ ಕೆಲಸ ಮಾಡುತ್ತಿದ್ದೇನೆ’: ಅಮಿತಾಭ್​ ಬಗ್ಗೆ ರಜನಿಕಾಂತ್​ ಗೌರವದ ಮಾತು
ಅಮಿತಾಭ್​ ಬಚ್ಚನ್​, ರಜನಿಕಾಂತ್​
Follow us
|

Updated on: Oct 25, 2023 | 2:46 PM

ಕಾಲಿವುಡ್​ ನಟ ರಜನಿಕಾಂತ್ (Rajinikanth)​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಈಗ ಅವರಿಗೆ 72 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರಿಗೆ ಸಿನಿಮಾ ಮೇಲಿನ ಆಸಕ್ತಿ ಕಡಿಮೆ ಆಗಿಲ್ಲ. ಇತ್ತೀಚೆಗೆ ನಟ ಅಮಿತಾಭ್​ ಬಚ್ಚನ್​ ಜೊತೆ ಅವರ ಹೊಸ ಸಿನಿಮಾ ಅನೌನ್ಸ್​ ಆಗಿತ್ತು. ಈಗ ಆ ಸಿನಿಮಾದ ಶೂಟಿಂಗ್​ ಆರಂಭ ಆಗಿದೆ. ಈ ಖುಷಿಯ ಸಂದರ್ಭದಲ್ಲಿ ಅಮಿತಾಭ್​ ಬಚ್ಚನ್ (Amitabh Bachchan)​ ಮತ್ತು ರಜನಿಕಾಂತ್​ ಅವರು ಜೊತೆಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿರುವ ರಜನಿಕಾಂತ್​ ಅವರು ‘ನನ್ನ ಹೃದಯ ಖುಷಿಯಿಂದ ಬಡಿದುಕೊಳ್ಳುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗುತ್ತಿದೆ.

ಈ ವರ್ಷ ಬಿಡುಗಡೆ ಆದ ‘ಜೈಲರ್​’ ಸಿನಿಮಾದಿಂದ ರಜನಿಕಾಂತ್ ಅವರು ಭರ್ಜರಿ ಸಕ್ಸಸ್​ ಪಡೆದಿದ್ದಾರೆ. ಅವರಿಗೆ ಇರುವ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆ ಬಂದಿವೆ. ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್​’ ಮೂಲಕ ರಜನಿಕಾಂತ್​ ಅವರ 170ನೇ ಸಿನಿಮಾ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ನಟಿಸುತ್ತಿದ್ದಾರೆ. ಶೂಟಿಂಗ್​ ಆರಂಭ ಆಗಿರುವ ಹಿನ್ನೆಲೆಯಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಜನಿಕಾಂತ್​ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ‘ಹಮ್​’, ‘ಅಂದಾ ಕಾನೂನ್​’, ‘ಗಿರಫ್ತಾರ್​’ ಸಿನಿಮಾಗಳಲ್ಲೂ ಈ ಸ್ಟಾರ್​ ನಟರು ತೆರೆಹಂಚಿಕೊಂಡಿದ್ದರು.

‘33 ವರ್ಷಗಳ ಬಳಿಕ ನಾನು ನನ್ನ ಗುರು ಜೊತೆ ಕೆಲಸ ಮಾಡುತ್ತಿದ್ದೇನೆ’ ಎಂಬ ಕ್ಯಾಪ್ಷನ್​ ಜೊತೆಯಲ್ಲಿ ರಜನಿಕಾಂತ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ತಮಗಿಂತ 9 ವರ್ಷ ಹಿರಿಯರಾದ ಅಮಿತಾಭ್​ ಬಚ್ಚನ್​ಗೆ ರಜನಿಕಾಂತ್ ನೀಡಿದ ಗೌರವ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಈ ಸಿನಿಮಾ ಮೇಲೆ ಸಿನಿಪ್ರಿಯರಿಗೆ ಸಖತ್​ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ಇದನ್ನು ‘ತಲೈವರ್​ 170’ ಎಂದು ಕರೆಯಲಾಗುತ್ತಿದೆ. ಈ ಬಹುನಿರೀಕ್ಷಿತ ಪ್ರಾಜೆಕ್ಟ್​ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: Thalaivar 170: ‘ತಲೈವರ್​ 170’ ಚಿತ್ರತಂಡದಿಂದ ರಜನಿಕಾಂತ್​ ಫಸ್ಟ್​ ಲುಕ್​ ಬಿಡುಗಡೆ

ದೊಡ್ಡ ಬಜೆಟ್​ನಲ್ಲಿ ‘ತಲೈವರ್​ 170’ ಸಿನಿಮಾ ನಿರ್ಮಾಣ ಆಗುತ್ತಿದೆ. ರಜನಿಕಾಂತ್​, ಅಮಿತಾಭ್​ ಬಚ್ಚನ್​, ಫಹಾದ್ ಫಾಸಿಲ್​, ಮಂಜು ವಾರಿಯರ್​, ರಾಣಾ ದಗ್ಗುಬಾಟಿ ಮುಂತಾದವರು ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಬಹುತಾರಾಗಣದ ಕಾರಣದಿಂದ ಅಭಿಮಾನಿಗಳ ಮನದಲ್ಲಿ ಕೌತುಕ ಹೆಚ್ಚಿದೆ. ‘ಜೈ ಭೀಮ್​’ ಚಿತ್ರದ ಖ್ಯಾತಿಯ ಟಿ.ಜೆ. ಜ್ಞಾನವೇಲ್​ ಅವರ ನಿರ್ದೇಶನದಲ್ಲಿ ‘ತಲೈವರ್​ 170’ ಸಿನಿಮಾ ಮೂಡಿಬರುತ್ತಿದೆ. ಅನಿರುದ್ಧ್​ ರವಿಚಂದರ್​ ಸಂಗೀತ ನಿರ್ದೇಶನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ