Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು.

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​
ರಜನಿಕಾಂತ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 20, 2021 | 4:44 PM

‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಕರ್ನಾಟಕದ ಮೂಲದ ಅವರು ತಮಿಳುನಾಡಿಗೆ ತೆರಳಿ ಅಲ್ಲಿ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದರು. ವಯಸ್ಸು 70 ದಾಟಿದರೂ ಹದಿಹರೆಯದವರ ಎನರ್ಜಿಯಲ್ಲಿ ಸಿನಿಮಾ ಮಾಡುತ್ತಾರೆ. ಪ್ರತಿ ವರ್ಷ ಅವರ ಜನ್ಮದಿನದಂದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರುತ್ತಾರೆ. ರಜನಿಕಾಂತ್​ಗೂ ಅಷ್ಟೇ, ಅಭಿಮಾನಿಗಳನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಅವರ ಬಗ್ಗೆ ಹೆಚ್ಚು ಕಾಳಜಿ ತೋರುತ್ತಾರೆ. ಈಗ ಬೆಂಗಳೂರಿನ ಬಾಲಕಿ ಒಬ್ಬಳ ಆಸೆಯನ್ನು ಸೂಪರ್​ ಸ್ಟಾರ್​ ಈಡೇರಿಸಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಕಿಯ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಕೊನೆಯ ದಿನಗಳಲ್ಲಿ ರಜನಿ ಬಾಲಕಿಯ ಆಸೆ ಈಡೇರಿಸಿದ್ದಾರೆ.

ರಜನಿಕಾಂತ್​ ಬೆಂಗಳೂರಿಗೆ ಬಂದು ಸೌಮ್ಯ ಅವಳನ್ನು ಭೇಟಿ ಮಾಡುವವರಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಹೀಗಾಗಿ, ‘ಧೈರ್ಯವಾಗಿರಿ. ಆರೋಗ್ಯ ಸರಿಹೋಗಲು ಪ್ರಾರ್ಥಿಸುತ್ತೇವೆ’ ಎಂದು ರಜನಿಕಾಂತ್​ ವಿಡಿಯೋ ಕಾಲ್​ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್​ ಅವರಿಗೆ ಕರೆ ಮಾಡಿದ್ದ ಸೌಮ್ಯಾ ತಂದೆ ಮಗಳ ಆಸೆ ಬಗ್ಗೆ ವಿವರಿಸಿದ್ದರು. ನಂತರ ರಜನಿ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಷ್ಟೇ ಅಲ್ಲ, ಅವರ ಸಹೋದರ‌ ಸತ್ಯನಾರಾಯಣ್ ಅವರು ಸೌಮ್ಯಾ ಮನೆಗೆ ಭೇಟಿ ನೀಡಿ ರಜನಿ ‌ಪರವಾಗಿ ಧೈರ್ಯ ತುಂಬೋ ಕೆಲಸ‌ಮಾಡಿ ಬಂದಿದ್ದಾರೆ.

ರಕನಿ ಸಿನಿಮಾ ‘ಅಣ್ಣಾಥೆ’ ಇತ್ತೀಚೆಗೆ ತೆರೆಗೆಬಂದಿತ್ತು. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ಮೂರು ವಾರಗಳಲ್ಲಿ ಈ ಚಿತ್ರ ಬರೊಬ್ಬರಿ 239 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಿದೆ.

ಇದನ್ನೂ ಓದಿ: ರಜನಿಕಾಂತ್​, ಪ್ರಭಾಸ್ ಸಿನಿಮಾ ಮಾಡೋಕೆ ಕರೆದಿದ್ರು, ನಾನು ಹೋಗಿಲ್ಲ; ಜೋಗಿ ಪ್ರೇಮ್​

 Rajinikanth: ನೆಟ್​​ಫ್ಲಿಕ್ಸ್​​ನಲ್ಲೂ ರಜಿನಿ ಹವಾ; ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ತಲೈವಾ!

Published On - 4:40 pm, Mon, 20 December 21

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ