AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು.

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​
ರಜನಿಕಾಂತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 20, 2021 | 4:44 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಕರ್ನಾಟಕದ ಮೂಲದ ಅವರು ತಮಿಳುನಾಡಿಗೆ ತೆರಳಿ ಅಲ್ಲಿ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದರು. ವಯಸ್ಸು 70 ದಾಟಿದರೂ ಹದಿಹರೆಯದವರ ಎನರ್ಜಿಯಲ್ಲಿ ಸಿನಿಮಾ ಮಾಡುತ್ತಾರೆ. ಪ್ರತಿ ವರ್ಷ ಅವರ ಜನ್ಮದಿನದಂದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರುತ್ತಾರೆ. ರಜನಿಕಾಂತ್​ಗೂ ಅಷ್ಟೇ, ಅಭಿಮಾನಿಗಳನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಅವರ ಬಗ್ಗೆ ಹೆಚ್ಚು ಕಾಳಜಿ ತೋರುತ್ತಾರೆ. ಈಗ ಬೆಂಗಳೂರಿನ ಬಾಲಕಿ ಒಬ್ಬಳ ಆಸೆಯನ್ನು ಸೂಪರ್​ ಸ್ಟಾರ್​ ಈಡೇರಿಸಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಕಿಯ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಕೊನೆಯ ದಿನಗಳಲ್ಲಿ ರಜನಿ ಬಾಲಕಿಯ ಆಸೆ ಈಡೇರಿಸಿದ್ದಾರೆ.

ರಜನಿಕಾಂತ್​ ಬೆಂಗಳೂರಿಗೆ ಬಂದು ಸೌಮ್ಯ ಅವಳನ್ನು ಭೇಟಿ ಮಾಡುವವರಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಹೀಗಾಗಿ, ‘ಧೈರ್ಯವಾಗಿರಿ. ಆರೋಗ್ಯ ಸರಿಹೋಗಲು ಪ್ರಾರ್ಥಿಸುತ್ತೇವೆ’ ಎಂದು ರಜನಿಕಾಂತ್​ ವಿಡಿಯೋ ಕಾಲ್​ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್​ ಅವರಿಗೆ ಕರೆ ಮಾಡಿದ್ದ ಸೌಮ್ಯಾ ತಂದೆ ಮಗಳ ಆಸೆ ಬಗ್ಗೆ ವಿವರಿಸಿದ್ದರು. ನಂತರ ರಜನಿ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಷ್ಟೇ ಅಲ್ಲ, ಅವರ ಸಹೋದರ‌ ಸತ್ಯನಾರಾಯಣ್ ಅವರು ಸೌಮ್ಯಾ ಮನೆಗೆ ಭೇಟಿ ನೀಡಿ ರಜನಿ ‌ಪರವಾಗಿ ಧೈರ್ಯ ತುಂಬೋ ಕೆಲಸ‌ಮಾಡಿ ಬಂದಿದ್ದಾರೆ.

ರಕನಿ ಸಿನಿಮಾ ‘ಅಣ್ಣಾಥೆ’ ಇತ್ತೀಚೆಗೆ ತೆರೆಗೆಬಂದಿತ್ತು. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ಮೂರು ವಾರಗಳಲ್ಲಿ ಈ ಚಿತ್ರ ಬರೊಬ್ಬರಿ 239 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಿದೆ.

ಇದನ್ನೂ ಓದಿ: ರಜನಿಕಾಂತ್​, ಪ್ರಭಾಸ್ ಸಿನಿಮಾ ಮಾಡೋಕೆ ಕರೆದಿದ್ರು, ನಾನು ಹೋಗಿಲ್ಲ; ಜೋಗಿ ಪ್ರೇಮ್​

 Rajinikanth: ನೆಟ್​​ಫ್ಲಿಕ್ಸ್​​ನಲ್ಲೂ ರಜಿನಿ ಹವಾ; ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ತಲೈವಾ!

Published On - 4:40 pm, Mon, 20 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ