AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು.

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​
ರಜನಿಕಾಂತ್​
TV9 Web
| Edited By: |

Updated on:Dec 20, 2021 | 4:44 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಕರ್ನಾಟಕದ ಮೂಲದ ಅವರು ತಮಿಳುನಾಡಿಗೆ ತೆರಳಿ ಅಲ್ಲಿ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದರು. ವಯಸ್ಸು 70 ದಾಟಿದರೂ ಹದಿಹರೆಯದವರ ಎನರ್ಜಿಯಲ್ಲಿ ಸಿನಿಮಾ ಮಾಡುತ್ತಾರೆ. ಪ್ರತಿ ವರ್ಷ ಅವರ ಜನ್ಮದಿನದಂದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರುತ್ತಾರೆ. ರಜನಿಕಾಂತ್​ಗೂ ಅಷ್ಟೇ, ಅಭಿಮಾನಿಗಳನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಅವರ ಬಗ್ಗೆ ಹೆಚ್ಚು ಕಾಳಜಿ ತೋರುತ್ತಾರೆ. ಈಗ ಬೆಂಗಳೂರಿನ ಬಾಲಕಿ ಒಬ್ಬಳ ಆಸೆಯನ್ನು ಸೂಪರ್​ ಸ್ಟಾರ್​ ಈಡೇರಿಸಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಕಿಯ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಕೊನೆಯ ದಿನಗಳಲ್ಲಿ ರಜನಿ ಬಾಲಕಿಯ ಆಸೆ ಈಡೇರಿಸಿದ್ದಾರೆ.

ರಜನಿಕಾಂತ್​ ಬೆಂಗಳೂರಿಗೆ ಬಂದು ಸೌಮ್ಯ ಅವಳನ್ನು ಭೇಟಿ ಮಾಡುವವರಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಹೀಗಾಗಿ, ‘ಧೈರ್ಯವಾಗಿರಿ. ಆರೋಗ್ಯ ಸರಿಹೋಗಲು ಪ್ರಾರ್ಥಿಸುತ್ತೇವೆ’ ಎಂದು ರಜನಿಕಾಂತ್​ ವಿಡಿಯೋ ಕಾಲ್​ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್​ ಅವರಿಗೆ ಕರೆ ಮಾಡಿದ್ದ ಸೌಮ್ಯಾ ತಂದೆ ಮಗಳ ಆಸೆ ಬಗ್ಗೆ ವಿವರಿಸಿದ್ದರು. ನಂತರ ರಜನಿ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಷ್ಟೇ ಅಲ್ಲ, ಅವರ ಸಹೋದರ‌ ಸತ್ಯನಾರಾಯಣ್ ಅವರು ಸೌಮ್ಯಾ ಮನೆಗೆ ಭೇಟಿ ನೀಡಿ ರಜನಿ ‌ಪರವಾಗಿ ಧೈರ್ಯ ತುಂಬೋ ಕೆಲಸ‌ಮಾಡಿ ಬಂದಿದ್ದಾರೆ.

ರಕನಿ ಸಿನಿಮಾ ‘ಅಣ್ಣಾಥೆ’ ಇತ್ತೀಚೆಗೆ ತೆರೆಗೆಬಂದಿತ್ತು. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ಮೂರು ವಾರಗಳಲ್ಲಿ ಈ ಚಿತ್ರ ಬರೊಬ್ಬರಿ 239 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಿದೆ.

ಇದನ್ನೂ ಓದಿ: ರಜನಿಕಾಂತ್​, ಪ್ರಭಾಸ್ ಸಿನಿಮಾ ಮಾಡೋಕೆ ಕರೆದಿದ್ರು, ನಾನು ಹೋಗಿಲ್ಲ; ಜೋಗಿ ಪ್ರೇಮ್​

 Rajinikanth: ನೆಟ್​​ಫ್ಲಿಕ್ಸ್​​ನಲ್ಲೂ ರಜಿನಿ ಹವಾ; ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ತಲೈವಾ!

Published On - 4:40 pm, Mon, 20 December 21

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ