AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ತಲೆ ಕೂದಲು ಉದುರಿ ಹೋಗಿರುವ ರಜನಿಕಾಂತ್​ಗೆ ಐಶ್ವರ್ಯಾ ರೈ ಬಚ್ಚನ್​ ಹೀರೋಯಿನ್​ ಆಗಿದ್ದಾರೆ ಎಂದಾಗ ರಾಜಸ್ಥಾನಿ ವ್ಯಕ್ತಿಗೆ ನಂಬೋಕೆ ಸಾಧ್ಯವಾಗಲಿಲ್ಲ. ಆ ಘಟನೆಯನ್ನು ರಜನಿಕಾಂತ್​ ಅವರು ತುಂಬ ತಮಾಷೆಯಾಗಿ ವಿವರಿಸಿದ್ದರು. ತಮ್ಮ ಮಾತಿನಲ್ಲಿ ಯಾವುದೇ ವೈಭವಿಕರಣ ಇಲ್ಲ ಎಂದು ಅವರು ಹೇಳಿದ್ದರು.

ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ
ಐಶ್ವರ್ಯಾ ರೈ, ರಜನಿಕಾಂತ್​
ಮದನ್​ ಕುಮಾರ್​
|

Updated on: May 05, 2024 | 12:06 PM

Share

ತಮಿಳು ಚಿತ್ರರಂಗದ ಸೂಪರ್​ ಸ್ಟಾರ್ ನಟ​ ರಜನಿಕಾಂತ್ (Rajinikanth) ಅವರಿಗೆ ಈಗ 73 ವರ್ಷ ವಯಸ್ಸು. ಈಗಲೂ ಅವರು ಚಾರ್ಮ್​ ಉಳಿಸಿಕೊಂಡಿದ್ದಾರೆ. ಅವರ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡುತ್ತವೆ. 2023ರಲ್ಲಿ ಬ್ಲಾಕ್​ ಬಸ್ಟರ್​ ಆದ ‘ಜೈಲರ್​’ ಚಿತ್ರವೇ ಅದಕ್ಕೆ ಸಾಕ್ಷಿ. ಆದರೆ 14 ವರ್ಷಗಳ ಹಿಂದೆಯೇ ರಜನಿಕಾಂತ್​ ಅವರನ್ನು ಹೀರೋ ಅಲ್ಲ ಎಂಬಂತೆ ಕೆಲವರು ನೋಡಿದ್ದರು. ಆ ಘಟನೆಯನ್ನು ವೇದಿಕೆಯಲ್ಲಿ ರಜನಿಕಾಂತ್​ ಅವರು ಹಂಚಿಕೊಂಡಿದ್ದರು. ರಜನಿಕಾಂತ್​ಗೆ ಐಶ್ವರ್ಯಾ ರೈ (Aishwarya Rai) ಜೋಡಿ ಎಂದು ಹೇಳಿದಾಗ ರಾಜಸ್ಥಾನಿ ವ್ಯಕ್ತಿಯೊಬ್ಬರು ನಂಬಲೇ ಇಲ್ಲ. ಅಲ್ಲದೇ ಆ ವಿಷಯ ಕೇಳಿ ಅವರು ಕಕ್ಕಾಬಿಕ್ಕಿ ಆಗಿದ್ದರು. ಈ ವಿಷಯವನ್ನು ವೇದಿಕೆಯಲ್ಲಿ ಸ್ವತಃ ರಜನಿಕಾಂತ್ ವಿವರಿಸಿದ್ದರು.

‘ನನ್ನ ಜೊತೆ ಹೀರೋಯಿನ್​ ಆಗಿ ನಟಿಸಲು ಒಪ್ಪಿಕೊಂಡಿದ್ದಕ್ಕೆ ಐಶ್ವರ್ಯಾ ರೈ ಅವರಿಗೆ ಧನ್ಯವಾದಗಳು. ನಾನು ಯಾವುದನ್ನೂ ವೈಭವೀಕರಿಸುತ್ತಿಲ್ಲ. ಬೆಂಗಳೂರಿನಲ್ಲಿ ನನ್ನ ಸಹೋದರನ ಮನೆ ಇದೆ. ನಾನು ಅಲ್ಲಿಗೆ ಹೋಗಿದ್ದೆ. ಹತ್ತಿರದಲ್ಲೇ ಇದ್ದ ರಾಜಸ್ಥಾನಿ ಕುಟುಂಬದವರು ನನ್ನನ್ನು ನೋಡಲು ಬಂದರು. ನಂದುಲಾಲ್​ ಎಂಬ ವ್ಯಕ್ತಿ ಬಂದು ನನ್ನನ್ನು ಮಾತಾಡಿಸಿದರು’ ಎಂದು ಆ ಘಟನೆಯನ್ನು ರಜನಿಕಾಂತ್​ ನೆನಪಿಸಿಕೊಂಡಿದ್ದರು.

‘ನಂದುಲಾಲ್​ಗೆ 60 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ರಜನಿ ಸರ್​, ನಿಮ್ಮ ಕೂದಲಿಗೆ ಏನಾಯಿತು ಅಂತ ಕೇಳಿದರು. ಜಾಸ್ತಿ ಉದುರಿಹೋಗಿದೆ ಬಿಡಿ ಅಂದೆ. ನಿವೃತ್ತಿ ಜೀವನದಲ್ಲಿ ಮಜಾ ಮಾಡುತ್ತಿದ್ದೀರಾ ಅಂತ ಕೇಳಿದರು. ಇಲ್ಲ, ಈಗ ಒಂದು ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದೇನೆ. ಅದರಲ್ಲಿ ಐಶ್ವರ್ಯಾ ರೈ ಹೀರೋಯಿನ್​ ಅಂತ ನಾನು ಹೇಳಿದೆ. ವಾವ್​ ವಾವ್​.. ಐಶ್ವರ್ಯಾ ತುಂಬ ಒಳ್ಳೆಯ ನಟಿ, ಹಾಗಾದರೆ ಹೀರೋ ಯಾರು ಅಂತ ಆ ವ್ಯಕ್ತಿ ಪ್ರಶ್ನೆ ಮಾಡಿದರು. ನಾನೇ ಹೀರೋ ಎಂದೆ. ಅವರಿಗೆ ನಂಬೋಕೆ ಆಗಲ್ಲಿಲ್ಲ’ ಎಂದರು ರಜನಿಕಾಂತ್​.

ಇದನ್ನೂ ಓದಿ: ರಜನಿಕಾಂತ್​ ನಟನೆಯ 171ನೇ ಚಿತ್ರದ ಹೆಸರು ‘ಕೂಲಿ’; ಬಂತು ಭರ್ಜರಿ ಟೀಸರ್​

‘ಹೌದು ಡ್ಯಾಡಿ, ಇವರೇ ಹೀರೋ ಎಂದು ನಂದುಲಾಲ್​ ಮಕ್ಕಳು ಅವರಿಗೆ ತಿಳಿಸಿ ಹೇಳಿದರು. ನಂತರ ಅವರು 10 ನಿಮಿಷ ಅಲ್ಲೇ ಇದ್ದರು. ಅವರು ಒಂದು ಮಾತು ಕೂಡ ಆಡಲಿಲ್ಲ. ನನ್ನನ್ನೇ ದಿಟ್ಟಿಸಿ ನೋಡುತ್ತಿದ್ದರು. ನಂತರ ಬೈ ಬೈ ಎಂದು ಹೇಳಿ ಹೊರಟರು. ಬಳಿಕ ಪಕ್ಕದ ರೂಮಿನಿಂದ ಧ್ವನಿ ಕೇಳಿಸುತ್ತಿತ್ತು. ಐಶ್ವರ್ಯಾ ರೈಗೆ ಏನಾಯಿತೋ ಮಾರಾಯಾ? ಅಭಿಷೇಕ್​ ಬಚ್ಚನ್​ಗೆ ಏನಾಯಿತು? ಅಮಿತಾಭ್​ ಬಚ್ಚನ್​ಗಾದರೂ ಏನಾಗಿದೆ. ಇವನ ಜೊತೆ ಹೀರೋಯಿನ್ ಆಗೋಕೆ ಬಿಟ್ಟಿದ್ದಾರಲ್ಲ ಅಂತ ಅವರು ಮಾತನಾಡಿಕೊಳ್ಳುತ್ತಿದ್ದರು’ ಎಂದು ಆ ಘಟನೆಯನ್ನು ‘ಎಂಧಿರನ್​’ ಸಿನಿಮಾದ ವೇದಿಕೆಯಲ್ಲಿ ರಜನಿಕಾಂತ್​ ಮೆಲುಕು ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್