Aamir Khan: ಬಯೋಪಿಕ್​ ಮಾಡಲು ತಯಾರಿ ನಡೆಸುತ್ತಿರುವ ಆಮಿರ್​ ಖಾನ್​-ರಾಜ್​ಕುಮಾರ್​ ಹಿರಾನಿ? ಕೇಳಿಬರ್ತಿದೆ ಹೊಸ ಸುದ್ದಿ

Aamir Khan Next Movie: ರಾಜ್​ಕುಮಾರ್​ ಹಿರಾನಿ ಜೊತೆ ಸಿನಿಮಾ ಮಾಡಿದರೆ ಗೆಲುವು ಸಿಗಲಿದೆ ಎಂದು ಆಮಿರ್​ ಖಾನ್​ ಅವರಿಗೆ ಅನಿಸಿದಂತಿದೆ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ.

Aamir Khan: ಬಯೋಪಿಕ್​ ಮಾಡಲು ತಯಾರಿ ನಡೆಸುತ್ತಿರುವ ಆಮಿರ್​ ಖಾನ್​-ರಾಜ್​ಕುಮಾರ್​ ಹಿರಾನಿ? ಕೇಳಿಬರ್ತಿದೆ ಹೊಸ ಸುದ್ದಿ
ಆಮಿರ್​ ಖಾನ್​, ರಾಜ್​ಕುಮಾರ್​ ಹಿರಾನಿ
Follow us
|

Updated on: Jul 05, 2023 | 4:58 PM

ನಟ ಆಮಿರ್ ಖಾನ್​ (Aamir Khan) ಅವರು ಒಂದು ಕಾಲದಲ್ಲಿ ಗಮನಾರ್ಹ ಸಿನಿಮಾಗಳನ್ನು ನೀಡಿದ್ದರು. ಆ ಪೈಕಿ ‘3 ಈಡಿಯಟ್ಸ್​’, ‘ಪಿಕೆ’ ಚಿತ್ರಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಆ ಎರಡೂ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದು ರಾಜ್​ಕುಮಾರ್​ ಹಿರಾನಿ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವಿಶೇಷ ಏನೆಂದರೆ, ಈಗ ಮತ್ತೆ ಆಮಿರ್​ ಖಾನ್​ ಮತ್ತು ರಾಜ್​ಕುಮಾರ್​ ಹಿರಾನಿ (Rajkumar Hirani) ಅವರು ಜೊತೆಯಾಗಿ ಒಂದು ಬಯೋಪಿಕ್​ (Biopic) ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬಾಲಿವುಡ್​ ಅಂಗಳಲ್ಲಿ ಗಾಸಿಪ್​ ಕೇಳಿಬರುತ್ತಿದೆ. ಆದರೆ ಯಾರೂ ಕೂಡ ಅಧಿಕೃತವಾಗಿ ಮಾತನಾಡಿಲ್ಲ. ಒಂದು ವೇಳೆ ಈ ಸಕ್ಸಸ್​ಫುಲ್​ ನಟ-ನಿರ್ದೇಶಕರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಬರುವುದು ನಿಜವೇ ಹೌದಾದರೆ ಅಭಿಮಾನಿಗಳಿಗೆ ಸಖತ್​ ಖುಷಿ ಆಗುವುದು ಗ್ಯಾರಂಟಿ.

ರಾಜ್​ಕುಮಾರ್​ ಹಿರಾನಿ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗಿದೆ. ‘ಮುನ್ನಾಭಾಯ್​ ಎಂಬಿಬಿಎಸ್​’, ‘ಲಗೇ ರಹೋ ಮುನ್ನಾಭಾಯ್​’, ‘3 ಈಡಿಯಟ್ಸ್​’, ‘ಪಿಕೆ’, ‘ಸಂಜು’ ಸಿನಿಮಾಗಳನ್ನು ನೀಡಿದ ಅವರು ಈಗ ಶಾರುಖ್​ ಖಾನ್​ ಜೊತೆ ‘ಡಂಕಿ’ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಮುಗಿದ ಬಳಿಕ ಅವರು ಆಮಿರ್​ ಖಾನ್​ ಜೊತೆ ಕೈ ಜೋಡಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Aamir Khan: ಎಲ್ಲರ ಎದುರು ಆಮಿರ್​ ಖಾನ್​ ಕಾಲಿಗೆ ನಮಸ್ಕರಿಸಿದ ಕಪಿಲ್​ ಶರ್ಮಾ; ಇಬ್ಬರ ನಡುವಿನ ಒಡನಾಟ ಹೇಗಿದೆ?

ಆಮಿರ್​ ಖಾನ್​ ಅವರು ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ಆ ಸಿನಿಮಾ ಮೂಡಿಬಂದಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಗೆಲ್ಲಲಿಲ್ಲ. ಆ ಸೋಲಿನ ಬಳಿಕ ಆಮಿರ್​ ಖಾನ್​ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್​ ಮಾಡಲಿಲ್ಲ. ನಟನೆಯಿಂದ ಅವರು ಬ್ರೇಕ್​ ಪಡೆದುಕೊಂಡಿದ್ದಾರೆ. ಮುಂದಿನ ಸಿನಿಮಾವನ್ನು ಬಹಳ ಲೆಕ್ಕಾಚಾರ ಹಾಕಿ ಒಪ್ಪಿಕೊಳ್ಳಲಿದ್ದಾರೆ.

ಇದನ್ನೂ ಓದಿ: Aamir Khan: ‘ಮಗಳ ವಯಸ್ಸಿನ ಫಾತಿಮಾ ಜತೆ ಆಮಿರ್​ ಖಾನ್​ ಮದುವೆ ಆಗ್ತಾರೆ’; ಬ್ರೇಕಿಂಗ್​ ನ್ಯೂಸ್​ ನೀಡಿದ ಕೆಆರ್​ಕೆ

ರಾಜ್​ಕುಮಾರ್​ ಹಿರಾನಿ ಜೊತೆ ಸಿನಿಮಾ ಮಾಡಿದರೆ ಗೆಲುವು ಸಿಗಲಿದೆ ಎಂದು ಆಮಿರ್​ ಖಾನ್​ ಅವರಿಗೆ ಅನಿಸಿದಂತಿದೆ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ಈಗ ಅವರು ವ್ಯಕ್ತಿಯೊಬ್ಬರ ಜೀವನದ ಕಥೆಯನ್ನು ಆಧರಿಸಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸಂಜಯ್​ ದತ್​ ಅವರ ಜೀವನಾಧಾರಿತ ‘ಸಂಜು’ ಚಿತ್ರವನ್ನು ರಾಜ್​ಕುಮಾರ್​ ಹಿರಾನಿ ನಿರ್ದೇಶಿಸಿದ್ದರು. ಈ ಬಾರಿ ಅವರು ಯಾರ ಕಥೆಯನ್ನು ಬೆಳ್ಳಿಪರದೆಗೆ ತರಲಿದ್ದಾರೆ ಎಂಬುದನ್ನು ಕಾದುನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ