AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಬಯೋಪಿಕ್​ ಮಾಡಲು ತಯಾರಿ ನಡೆಸುತ್ತಿರುವ ಆಮಿರ್​ ಖಾನ್​-ರಾಜ್​ಕುಮಾರ್​ ಹಿರಾನಿ? ಕೇಳಿಬರ್ತಿದೆ ಹೊಸ ಸುದ್ದಿ

Aamir Khan Next Movie: ರಾಜ್​ಕುಮಾರ್​ ಹಿರಾನಿ ಜೊತೆ ಸಿನಿಮಾ ಮಾಡಿದರೆ ಗೆಲುವು ಸಿಗಲಿದೆ ಎಂದು ಆಮಿರ್​ ಖಾನ್​ ಅವರಿಗೆ ಅನಿಸಿದಂತಿದೆ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ.

Aamir Khan: ಬಯೋಪಿಕ್​ ಮಾಡಲು ತಯಾರಿ ನಡೆಸುತ್ತಿರುವ ಆಮಿರ್​ ಖಾನ್​-ರಾಜ್​ಕುಮಾರ್​ ಹಿರಾನಿ? ಕೇಳಿಬರ್ತಿದೆ ಹೊಸ ಸುದ್ದಿ
ಆಮಿರ್​ ಖಾನ್​, ರಾಜ್​ಕುಮಾರ್​ ಹಿರಾನಿ
ಮದನ್​ ಕುಮಾರ್​
|

Updated on: Jul 05, 2023 | 4:58 PM

Share

ನಟ ಆಮಿರ್ ಖಾನ್​ (Aamir Khan) ಅವರು ಒಂದು ಕಾಲದಲ್ಲಿ ಗಮನಾರ್ಹ ಸಿನಿಮಾಗಳನ್ನು ನೀಡಿದ್ದರು. ಆ ಪೈಕಿ ‘3 ಈಡಿಯಟ್ಸ್​’, ‘ಪಿಕೆ’ ಚಿತ್ರಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಆ ಎರಡೂ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದು ರಾಜ್​ಕುಮಾರ್​ ಹಿರಾನಿ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವಿಶೇಷ ಏನೆಂದರೆ, ಈಗ ಮತ್ತೆ ಆಮಿರ್​ ಖಾನ್​ ಮತ್ತು ರಾಜ್​ಕುಮಾರ್​ ಹಿರಾನಿ (Rajkumar Hirani) ಅವರು ಜೊತೆಯಾಗಿ ಒಂದು ಬಯೋಪಿಕ್​ (Biopic) ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬಾಲಿವುಡ್​ ಅಂಗಳಲ್ಲಿ ಗಾಸಿಪ್​ ಕೇಳಿಬರುತ್ತಿದೆ. ಆದರೆ ಯಾರೂ ಕೂಡ ಅಧಿಕೃತವಾಗಿ ಮಾತನಾಡಿಲ್ಲ. ಒಂದು ವೇಳೆ ಈ ಸಕ್ಸಸ್​ಫುಲ್​ ನಟ-ನಿರ್ದೇಶಕರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಬರುವುದು ನಿಜವೇ ಹೌದಾದರೆ ಅಭಿಮಾನಿಗಳಿಗೆ ಸಖತ್​ ಖುಷಿ ಆಗುವುದು ಗ್ಯಾರಂಟಿ.

ರಾಜ್​ಕುಮಾರ್​ ಹಿರಾನಿ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗಿದೆ. ‘ಮುನ್ನಾಭಾಯ್​ ಎಂಬಿಬಿಎಸ್​’, ‘ಲಗೇ ರಹೋ ಮುನ್ನಾಭಾಯ್​’, ‘3 ಈಡಿಯಟ್ಸ್​’, ‘ಪಿಕೆ’, ‘ಸಂಜು’ ಸಿನಿಮಾಗಳನ್ನು ನೀಡಿದ ಅವರು ಈಗ ಶಾರುಖ್​ ಖಾನ್​ ಜೊತೆ ‘ಡಂಕಿ’ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಮುಗಿದ ಬಳಿಕ ಅವರು ಆಮಿರ್​ ಖಾನ್​ ಜೊತೆ ಕೈ ಜೋಡಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Aamir Khan: ಎಲ್ಲರ ಎದುರು ಆಮಿರ್​ ಖಾನ್​ ಕಾಲಿಗೆ ನಮಸ್ಕರಿಸಿದ ಕಪಿಲ್​ ಶರ್ಮಾ; ಇಬ್ಬರ ನಡುವಿನ ಒಡನಾಟ ಹೇಗಿದೆ?

ಆಮಿರ್​ ಖಾನ್​ ಅವರು ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ಆ ಸಿನಿಮಾ ಮೂಡಿಬಂದಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಗೆಲ್ಲಲಿಲ್ಲ. ಆ ಸೋಲಿನ ಬಳಿಕ ಆಮಿರ್​ ಖಾನ್​ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್​ ಮಾಡಲಿಲ್ಲ. ನಟನೆಯಿಂದ ಅವರು ಬ್ರೇಕ್​ ಪಡೆದುಕೊಂಡಿದ್ದಾರೆ. ಮುಂದಿನ ಸಿನಿಮಾವನ್ನು ಬಹಳ ಲೆಕ್ಕಾಚಾರ ಹಾಕಿ ಒಪ್ಪಿಕೊಳ್ಳಲಿದ್ದಾರೆ.

ಇದನ್ನೂ ಓದಿ: Aamir Khan: ‘ಮಗಳ ವಯಸ್ಸಿನ ಫಾತಿಮಾ ಜತೆ ಆಮಿರ್​ ಖಾನ್​ ಮದುವೆ ಆಗ್ತಾರೆ’; ಬ್ರೇಕಿಂಗ್​ ನ್ಯೂಸ್​ ನೀಡಿದ ಕೆಆರ್​ಕೆ

ರಾಜ್​ಕುಮಾರ್​ ಹಿರಾನಿ ಜೊತೆ ಸಿನಿಮಾ ಮಾಡಿದರೆ ಗೆಲುವು ಸಿಗಲಿದೆ ಎಂದು ಆಮಿರ್​ ಖಾನ್​ ಅವರಿಗೆ ಅನಿಸಿದಂತಿದೆ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ಈಗ ಅವರು ವ್ಯಕ್ತಿಯೊಬ್ಬರ ಜೀವನದ ಕಥೆಯನ್ನು ಆಧರಿಸಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸಂಜಯ್​ ದತ್​ ಅವರ ಜೀವನಾಧಾರಿತ ‘ಸಂಜು’ ಚಿತ್ರವನ್ನು ರಾಜ್​ಕುಮಾರ್​ ಹಿರಾನಿ ನಿರ್ದೇಶಿಸಿದ್ದರು. ಈ ಬಾರಿ ಅವರು ಯಾರ ಕಥೆಯನ್ನು ಬೆಳ್ಳಿಪರದೆಗೆ ತರಲಿದ್ದಾರೆ ಎಂಬುದನ್ನು ಕಾದುನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್