AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​​ಕಿಡ್​ನಿಂದ ಆಫರ್ ಹೋಯ್ತು ಅನ್ನೋದು ಸುಳ್ಳು ಎಂದ ಕರಣ್; ಮುಟ್ಟಿ ನೋಡಿಕೊಳ್ಳುವ ಉತ್ತರ ಕೊಟ್ಟ ರಾಜ್​ಕುಮಾರ್ ರಾವ್

‘ಮಾಧ್ಯಮಗಳಲ್ಲಿ ಹೆಡ್​ಲೈನ್ ಆಗಬೇಕು ಎನ್ನುವ ಕಾರಣಕ್ಕೆ ಕೆಲವರು ಈ ರೀತಿಯ ತಂತ್ರ ಬಳಕೆ ಮಾಡಿಕೊಳ್ಳುತ್ತಾರೆ. ನನ್ನನ್ನು ಹೊರಗಿನವರಂತೆ ನೋಡಿದರು, ಸ್ಟಾರ್​ ಕಿಡ್​ಗಾಗಿ ಆಫರ್ ಕಳೆದುಕೊಂಡೆ ಎಂದು ಯಶಸ್ಸು ಕಂಡವರು ಹೇಳುತ್ತಾರೆ’ ಎಂದರು ಕರಣ್. ಇದಕ್ಕೆ ರಾಜ್​ಕುಮಾರ್ ರಾವ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ.

ಸ್ಟಾರ್​​ಕಿಡ್​ನಿಂದ ಆಫರ್ ಹೋಯ್ತು ಅನ್ನೋದು ಸುಳ್ಳು ಎಂದ ಕರಣ್; ಮುಟ್ಟಿ ನೋಡಿಕೊಳ್ಳುವ ಉತ್ತರ ಕೊಟ್ಟ ರಾಜ್​ಕುಮಾರ್ ರಾವ್
ರಾಜ್​ಕುಮಾರ್-ಕರಣ್
ರಾಜೇಶ್ ದುಗ್ಗುಮನೆ
|

Updated on: May 20, 2024 | 7:01 AM

Share

‘ಮಿಸ್ಟರ್ ಮಾಹಿ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾ (Mr And Ms Mahi) ರಿಲೀಸ್​ಗೆ ರೆಡಿ ಇದೆ. ರಾಜ್​ಕುಮಾರ್ ರಾವ್ ಹಾಗೂ ಜಾನ್ವಿ ಕಪೂರ್ ಇದರಲ್ಲಿ ನಟಿಸಿದ್ದು, ಕರಣ್ ಜೋಹರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡೋಕೆ ಜಾನ್ವಿ, ರಾಜ್​ಕುಮಾರ್ ರಾವ್​ ಹಾಗೂ ಕರಣ್ ಒಂದೆಡೆ ಸೇರಿದ್ದರು. ಈ ವೇಳೆ ರಾಜ್​ಕುಮಾರ್ ರಾವ್ ಅವರು ಬಾಲಿವುಡ್​​ನ ಕರಾಳ ಸತ್ಯಗಳ ಬಗ್ಗೆ ಹೇಳಿದ್ದಾರೆ.

ನೆಪೋಟಿಸಂ ಬಗ್ಗೆ ಮಾತನಾಡಿದರು ಕರಣ್. ‘ಮಾಧ್ಯಮಗಳಲ್ಲಿ ಹೆಡ್​ಲೈನ್ ಆಗಬೇಕು ಎನ್ನುವ ಕಾರಣಕ್ಕೆ ಕೆಲವರು ಈ ರೀತಿಯ ತಂತ್ರ ಬಳಕೆ ಮಾಡಿಕೊಳ್ಳುತ್ತಾರೆ. ನನ್ನನ್ನು ಹೊರಗಿನವರಂತೆ ನೋಡಿದರು, ಸ್ಟಾರ್​ ಕಿಡ್​ಗಾಗಿ ಆಫರ್ ಕಳೆದುಕೊಂಡೆ ಎಂದು ಯಶಸ್ಸು ಕಂಡವರು ಹೇಳುತ್ತಾರೆ. ನಾನು ಪಾರ್ಟಿ ಅಟೆಂಡ್ ಮಾಡಿಲ್ಲ ಹೀಗಾಗಿ, ಅವಕಾಶ ಸಿಗಲಿಲ್ಲ ಎನ್ನುತ್ತಾರೆ. ಯಾವ ಪಾರ್ಟಿಗಳಲ್ಲಿ ಸಿನಿಮಾ ಅವಕಾಶ ಸಿಗುತ್ತದೆ ಅನ್ನೋದು ನನಗಂತೂ ಗೊತ್ತಿಲ್ಲ’ ಎಂದರು ಕರಣ್.

ಕರಣ್ ಅವರ ಮಾತಿಗೆ ರಾಜ್​ಕುಮಾರ್ ಉತ್ತರಿಸಿದರು. ‘ಎಲ್ಲರ ಜೊತೆ ಸಂಪರ್ಕ ಬೆಳೆಸಿಕೊಳ್ಳೋದು ಸಮಸ್ಯೆ ಅಲ್ಲ. ಆದರೆ, ಪಾರ್ಟಿಗೆ ಅಟೆಂಡ್ ಆಗಿ ನಾನು ಇಲ್ಲಿ ಕಾಂಟ್ಯಾಕ್ಟ್ ಬೆಳೆಸಿಕೊಳ್ಳಲು ಬಂದಿದ್ದೇನೆ ಅನ್ನೋದು ಸಮಸ್ಯೆ. ನಾನು ಒಂದು ಸಿನಿಮಾ ಮಾಡಬೇಕಿತ್ತು. ಆದರೆ ರತ್ರೋರಾತ್ರಿ ಸಿನಿಮಾ ಆಫರ್ ಹೋಯಿತು. ಸ್ಟಾರ್​ ಕಿಡ್​ಗೆ ಆಫರ್ ಸಿಕ್ಕಿತು. ನನಗೇಕೋ ಅದು ಸರಿ ಎನಿಸಲಿಲ್ಲ. ನೀವು ಎಲ್ಲವನ್ನೂ ನಿಯಂತ್ರಿಸಬಹುದು, ನಿಮಗೆ ಎಲ್ಲರೂ ಗೊತ್ತು, ನೀವು ಕರೆ ಮಾಡಿ ಏನು ಬೇಕಾದರೂ ಹೇಳಿ ಬದಲಿಸಬಹುದು ಎನ್ನುವ ಕಾರಣಕ್ಕೆ ಈ ರೀತಿ ಮಾಡೋದು ಸರಿ ಅಲ್ಲ. ಹೊರಗಿನವರೂ ಕೂಡ ಬಂದು ಸಿನಿಮಾ ಮಾಡಿ ತಮ್ಮ ಕಲೆ ತೋರಿಸಬಹುದು’ ಎಂದಿದ್ದಾರೆ ರಾಜ್​ಕುಮಾರ್ ರಾವ್. ಅವರ ಉತ್ತರವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

ಮೊದಲಿನಿಂದಲೂ ಈ ಬಗ್ಗೆ ಚರ್ಚೆ ಜೋರಿದೆ. ಸ್ಟಾರ್ ಕಿಡ್​ಗಾಗಿ ಆಫರ್ ಕಳೆದುಕೊಂಡೆ ಎಂದು ಅನೇಕರು ಹೇಳಿದ್ದು ಇದೆ. ಇದಕ್ಕೆಲ್ಲ ಕರಣ್ ಜೋಹರ್ ತಲೆಕೆಡಿಸಿಕೊಂಡಿಲ್ಲ. ಅವರು ಮೊದಲಿನಿಂದಲೂ ಸೆಲೆಬ್ರಿಟಿಗಳ ಮಕ್ಕಳಿಗೆ ಮಣೆ ಹಾಕುತ್ತಲೇ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ