AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​​ಕಿಡ್​ನಿಂದ ಆಫರ್ ಹೋಯ್ತು ಅನ್ನೋದು ಸುಳ್ಳು ಎಂದ ಕರಣ್; ಮುಟ್ಟಿ ನೋಡಿಕೊಳ್ಳುವ ಉತ್ತರ ಕೊಟ್ಟ ರಾಜ್​ಕುಮಾರ್ ರಾವ್

‘ಮಾಧ್ಯಮಗಳಲ್ಲಿ ಹೆಡ್​ಲೈನ್ ಆಗಬೇಕು ಎನ್ನುವ ಕಾರಣಕ್ಕೆ ಕೆಲವರು ಈ ರೀತಿಯ ತಂತ್ರ ಬಳಕೆ ಮಾಡಿಕೊಳ್ಳುತ್ತಾರೆ. ನನ್ನನ್ನು ಹೊರಗಿನವರಂತೆ ನೋಡಿದರು, ಸ್ಟಾರ್​ ಕಿಡ್​ಗಾಗಿ ಆಫರ್ ಕಳೆದುಕೊಂಡೆ ಎಂದು ಯಶಸ್ಸು ಕಂಡವರು ಹೇಳುತ್ತಾರೆ’ ಎಂದರು ಕರಣ್. ಇದಕ್ಕೆ ರಾಜ್​ಕುಮಾರ್ ರಾವ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ.

ಸ್ಟಾರ್​​ಕಿಡ್​ನಿಂದ ಆಫರ್ ಹೋಯ್ತು ಅನ್ನೋದು ಸುಳ್ಳು ಎಂದ ಕರಣ್; ಮುಟ್ಟಿ ನೋಡಿಕೊಳ್ಳುವ ಉತ್ತರ ಕೊಟ್ಟ ರಾಜ್​ಕುಮಾರ್ ರಾವ್
ರಾಜ್​ಕುಮಾರ್-ಕರಣ್
ರಾಜೇಶ್ ದುಗ್ಗುಮನೆ
|

Updated on: May 20, 2024 | 7:01 AM

Share

‘ಮಿಸ್ಟರ್ ಮಾಹಿ ಆ್ಯಂಡ್ ಮಿಸಸ್ ಮಾಹಿ’ ಸಿನಿಮಾ (Mr And Ms Mahi) ರಿಲೀಸ್​ಗೆ ರೆಡಿ ಇದೆ. ರಾಜ್​ಕುಮಾರ್ ರಾವ್ ಹಾಗೂ ಜಾನ್ವಿ ಕಪೂರ್ ಇದರಲ್ಲಿ ನಟಿಸಿದ್ದು, ಕರಣ್ ಜೋಹರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡೋಕೆ ಜಾನ್ವಿ, ರಾಜ್​ಕುಮಾರ್ ರಾವ್​ ಹಾಗೂ ಕರಣ್ ಒಂದೆಡೆ ಸೇರಿದ್ದರು. ಈ ವೇಳೆ ರಾಜ್​ಕುಮಾರ್ ರಾವ್ ಅವರು ಬಾಲಿವುಡ್​​ನ ಕರಾಳ ಸತ್ಯಗಳ ಬಗ್ಗೆ ಹೇಳಿದ್ದಾರೆ.

ನೆಪೋಟಿಸಂ ಬಗ್ಗೆ ಮಾತನಾಡಿದರು ಕರಣ್. ‘ಮಾಧ್ಯಮಗಳಲ್ಲಿ ಹೆಡ್​ಲೈನ್ ಆಗಬೇಕು ಎನ್ನುವ ಕಾರಣಕ್ಕೆ ಕೆಲವರು ಈ ರೀತಿಯ ತಂತ್ರ ಬಳಕೆ ಮಾಡಿಕೊಳ್ಳುತ್ತಾರೆ. ನನ್ನನ್ನು ಹೊರಗಿನವರಂತೆ ನೋಡಿದರು, ಸ್ಟಾರ್​ ಕಿಡ್​ಗಾಗಿ ಆಫರ್ ಕಳೆದುಕೊಂಡೆ ಎಂದು ಯಶಸ್ಸು ಕಂಡವರು ಹೇಳುತ್ತಾರೆ. ನಾನು ಪಾರ್ಟಿ ಅಟೆಂಡ್ ಮಾಡಿಲ್ಲ ಹೀಗಾಗಿ, ಅವಕಾಶ ಸಿಗಲಿಲ್ಲ ಎನ್ನುತ್ತಾರೆ. ಯಾವ ಪಾರ್ಟಿಗಳಲ್ಲಿ ಸಿನಿಮಾ ಅವಕಾಶ ಸಿಗುತ್ತದೆ ಅನ್ನೋದು ನನಗಂತೂ ಗೊತ್ತಿಲ್ಲ’ ಎಂದರು ಕರಣ್.

ಕರಣ್ ಅವರ ಮಾತಿಗೆ ರಾಜ್​ಕುಮಾರ್ ಉತ್ತರಿಸಿದರು. ‘ಎಲ್ಲರ ಜೊತೆ ಸಂಪರ್ಕ ಬೆಳೆಸಿಕೊಳ್ಳೋದು ಸಮಸ್ಯೆ ಅಲ್ಲ. ಆದರೆ, ಪಾರ್ಟಿಗೆ ಅಟೆಂಡ್ ಆಗಿ ನಾನು ಇಲ್ಲಿ ಕಾಂಟ್ಯಾಕ್ಟ್ ಬೆಳೆಸಿಕೊಳ್ಳಲು ಬಂದಿದ್ದೇನೆ ಅನ್ನೋದು ಸಮಸ್ಯೆ. ನಾನು ಒಂದು ಸಿನಿಮಾ ಮಾಡಬೇಕಿತ್ತು. ಆದರೆ ರತ್ರೋರಾತ್ರಿ ಸಿನಿಮಾ ಆಫರ್ ಹೋಯಿತು. ಸ್ಟಾರ್​ ಕಿಡ್​ಗೆ ಆಫರ್ ಸಿಕ್ಕಿತು. ನನಗೇಕೋ ಅದು ಸರಿ ಎನಿಸಲಿಲ್ಲ. ನೀವು ಎಲ್ಲವನ್ನೂ ನಿಯಂತ್ರಿಸಬಹುದು, ನಿಮಗೆ ಎಲ್ಲರೂ ಗೊತ್ತು, ನೀವು ಕರೆ ಮಾಡಿ ಏನು ಬೇಕಾದರೂ ಹೇಳಿ ಬದಲಿಸಬಹುದು ಎನ್ನುವ ಕಾರಣಕ್ಕೆ ಈ ರೀತಿ ಮಾಡೋದು ಸರಿ ಅಲ್ಲ. ಹೊರಗಿನವರೂ ಕೂಡ ಬಂದು ಸಿನಿಮಾ ಮಾಡಿ ತಮ್ಮ ಕಲೆ ತೋರಿಸಬಹುದು’ ಎಂದಿದ್ದಾರೆ ರಾಜ್​ಕುಮಾರ್ ರಾವ್. ಅವರ ಉತ್ತರವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

ಮೊದಲಿನಿಂದಲೂ ಈ ಬಗ್ಗೆ ಚರ್ಚೆ ಜೋರಿದೆ. ಸ್ಟಾರ್ ಕಿಡ್​ಗಾಗಿ ಆಫರ್ ಕಳೆದುಕೊಂಡೆ ಎಂದು ಅನೇಕರು ಹೇಳಿದ್ದು ಇದೆ. ಇದಕ್ಕೆಲ್ಲ ಕರಣ್ ಜೋಹರ್ ತಲೆಕೆಡಿಸಿಕೊಂಡಿಲ್ಲ. ಅವರು ಮೊದಲಿನಿಂದಲೂ ಸೆಲೆಬ್ರಿಟಿಗಳ ಮಕ್ಕಳಿಗೆ ಮಣೆ ಹಾಕುತ್ತಲೇ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ