AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್

ಬಯೋಪಿಕ್​ನಲ್ಲಿ ಸೌರವ್ ಗಂಗೂಲಿ ಪಾತ್ರವನ್ನು ಯಾರು ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜ್​ಕುಮಾರ್​ ರಾವ್​ ಅವರಿಗೆ ಆ ಅವಕಾಶ ಒಲಿದಿದೆ. ಆದರೆ ಡೇಟ್ಸ್​ ಹೊಂದಾಣಿಕೆ ಆಗದ ಕಾರಣ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಈ ಕುರಿತು ಸೌರವ್ ಗಂಗೂಲಿ ಅವರು ಗುರುವಾರ (ಫೆ.20) ಮಾಹಿತಿ ನೀಡಿದ್ದಾರೆ.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್
Rajkummar Rao, Sourav Ganguly
ಮದನ್​ ಕುಮಾರ್​
|

Updated on: Feb 21, 2025 | 5:54 PM

Share

ಸಚಿನ್ ತೆಂಡುಲ್ಕರ್​, ಮಹೇಂದ್ರ ಸಿಂಗ್ ಧೋನಿ, ಕಪಿಲ್ ದೇವ್ ಮುಂತಾದ ಸಾಧಕರ ಬಗ್ಗೆ ಈಗಾಗಲೇ ಸಿನಿಮಾಗಳು ಬಂದಿವೆ. ಅದೇ ರೀತಿ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಬಯೋಪಿಕ್ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈ ಬಹುನಿರೀಕ್ಷಿತ ಪ್ರಾಜೆಕ್ಟ್​ ಬಗ್ಗೆ ಬಹಳ ಹಿಂದಿನಿಂದಲೂ ಸುದ್ದಿ ಕೇಳಿಬರುತ್ತಲೇ ಇವೆ. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರುವುದು ತಡವಾಗುತ್ತಿದೆ. ಈಗ ತಮ್ಮ ಬಯೋಪಿಕ್ ಬಗ್ಗೆ ಸ್ವತಃ ಸೌರವ್ ಗಂಗೂಲಿ ಅವರು ಒಂದು ಸುದ್ದಿ ನೀಡಿದ್ದಾರೆ. ತಮ್ಮ ಪಾತ್ರದಲ್ಲಿ ಬಾಲಿವುಡ್ ನಟ ರಾಜ್​ಕುಮಾರ್​ ರಾವ್ ನಟಿಸಲಿದ್ದಾರೆ ಎಂಬುದನ್ನು ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೌರವ್ ಗಂಗೂಲಿ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ನನಗೆ ತಿಳಿದಿರುವಂತೆ ನಟ ರಾಜ್​ಕುಮಾರ್​ ರಾವ್​ ಅವರು ನನ್ನ ಪಾತ್ರ ಮಾಡಲಿದ್ದಾರೆ. ಆದರೆ ಡೇಟ್ಸ್​ ಸಮಸ್ಯೆ ಎದುರಾಗಿದೆ. ಹಾಗಾಗಿ ಆ ಸಿನಿಮಾ ಬಿಡುಗಡೆ ಆಗಲು ಒಂದು ವರ್ಷಕ್ಕಿಂತಲೂ ಅಧಿಕ ಸಮಯ ಬೇಕಾಗಲಿದೆ’ ಎಂದು ಸೌರವ್ ಗಂಗೂಲಿ ಅವರು ಹೇಳಿದ್ದಾರೆ.

ಬಾಲಿವುಡ್​ನಲ್ಲಿ ನಟ ರಾಜ್​ಕುಮಾರ್​ ರಾವ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ ಬಗ್ಗೆ ಯಾರಿಗೂ ಅನುಮಾನ ಇಲ್ಲ. ಯಾವ ಪಾತ್ರ ಕೊಟ್ಟರೂ ಅವರು ಅತ್ಯುತ್ತಮವಾಗಿ ನಿಭಾಯಿಸುತ್ತಾರೆ. ಅವರ ಖಾತೆಯಲ್ಲಿ ಹಲವು ಸೂಪರ್​ ಹಿಟ್ ಸಿನಿಮಾಗಳಿವೆ. ಈಗ ಅವರು ಸೌರವ್ ಗಂಗೂಲಿ ಪಾತ್ರವನ್ನು ಹೇಗೆ ಮಾಡಲಿದ್ದಾರೆ ಎಂದು ತಿಳಿಯುವ ಕೌತುಕ ಎಲ್ಲರಲ್ಲೂ ಮೂಡಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ, ಬೆಂಗಾವಲು ಪಡೆ ವಾನಹಗಳು ಡಿಕ್ಕಿ

ಭಾರತೀಯ ಕ್ರಿಕೆಟ್​ಗೆ ಸೌರವ್ ಗಂಗೂಲಿ ನೀಡಿದ ಕೊಡುಗೆ ಅಪಾರ. ಟೀಮ್ ಇಂಡಿಯಾವನ್ನು ವಿಶ್ವಮಟ್ಟದಲ್ಲಿ ಮಿಂಚುವಂತೆ ಮಾಡಿದವರಲ್ಲಿ ಗಂಗೂಲಿ ಕೂಡ ಪ್ರಮುಖರು. ಅವರ ಬಯೋಪಿಕ್​ನಲ್ಲಿ ಆ ಎಲ್ಲ ವಿವರಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಅವರ ವೈಯಕ್ತಿಕ ಬದುಕಿನ ಬಗ್ಗೆಯೂ ಬಯೋಪಿಕ್​ನಲ್ಲಿ ತೋರಿಸಲಾಗುವುದು. ಆದರೆ ಈ ಸಿನಿಮಾ ಬರಲು ಇನ್ನೂ ಬಹಳ ಸಮಯ ಹಿಡಿಯಲಿದೆ. ಇನ್ನುಳಿದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಕೂಡ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ