AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್

ಬಯೋಪಿಕ್​ನಲ್ಲಿ ಸೌರವ್ ಗಂಗೂಲಿ ಪಾತ್ರವನ್ನು ಯಾರು ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜ್​ಕುಮಾರ್​ ರಾವ್​ ಅವರಿಗೆ ಆ ಅವಕಾಶ ಒಲಿದಿದೆ. ಆದರೆ ಡೇಟ್ಸ್​ ಹೊಂದಾಣಿಕೆ ಆಗದ ಕಾರಣ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಈ ಕುರಿತು ಸೌರವ್ ಗಂಗೂಲಿ ಅವರು ಗುರುವಾರ (ಫೆ.20) ಮಾಹಿತಿ ನೀಡಿದ್ದಾರೆ.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್
Rajkummar Rao, Sourav Ganguly
ಮದನ್​ ಕುಮಾರ್​
|

Updated on: Feb 21, 2025 | 5:54 PM

Share

ಸಚಿನ್ ತೆಂಡುಲ್ಕರ್​, ಮಹೇಂದ್ರ ಸಿಂಗ್ ಧೋನಿ, ಕಪಿಲ್ ದೇವ್ ಮುಂತಾದ ಸಾಧಕರ ಬಗ್ಗೆ ಈಗಾಗಲೇ ಸಿನಿಮಾಗಳು ಬಂದಿವೆ. ಅದೇ ರೀತಿ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಬಯೋಪಿಕ್ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈ ಬಹುನಿರೀಕ್ಷಿತ ಪ್ರಾಜೆಕ್ಟ್​ ಬಗ್ಗೆ ಬಹಳ ಹಿಂದಿನಿಂದಲೂ ಸುದ್ದಿ ಕೇಳಿಬರುತ್ತಲೇ ಇವೆ. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರುವುದು ತಡವಾಗುತ್ತಿದೆ. ಈಗ ತಮ್ಮ ಬಯೋಪಿಕ್ ಬಗ್ಗೆ ಸ್ವತಃ ಸೌರವ್ ಗಂಗೂಲಿ ಅವರು ಒಂದು ಸುದ್ದಿ ನೀಡಿದ್ದಾರೆ. ತಮ್ಮ ಪಾತ್ರದಲ್ಲಿ ಬಾಲಿವುಡ್ ನಟ ರಾಜ್​ಕುಮಾರ್​ ರಾವ್ ನಟಿಸಲಿದ್ದಾರೆ ಎಂಬುದನ್ನು ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೌರವ್ ಗಂಗೂಲಿ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ನನಗೆ ತಿಳಿದಿರುವಂತೆ ನಟ ರಾಜ್​ಕುಮಾರ್​ ರಾವ್​ ಅವರು ನನ್ನ ಪಾತ್ರ ಮಾಡಲಿದ್ದಾರೆ. ಆದರೆ ಡೇಟ್ಸ್​ ಸಮಸ್ಯೆ ಎದುರಾಗಿದೆ. ಹಾಗಾಗಿ ಆ ಸಿನಿಮಾ ಬಿಡುಗಡೆ ಆಗಲು ಒಂದು ವರ್ಷಕ್ಕಿಂತಲೂ ಅಧಿಕ ಸಮಯ ಬೇಕಾಗಲಿದೆ’ ಎಂದು ಸೌರವ್ ಗಂಗೂಲಿ ಅವರು ಹೇಳಿದ್ದಾರೆ.

ಬಾಲಿವುಡ್​ನಲ್ಲಿ ನಟ ರಾಜ್​ಕುಮಾರ್​ ರಾವ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ ಬಗ್ಗೆ ಯಾರಿಗೂ ಅನುಮಾನ ಇಲ್ಲ. ಯಾವ ಪಾತ್ರ ಕೊಟ್ಟರೂ ಅವರು ಅತ್ಯುತ್ತಮವಾಗಿ ನಿಭಾಯಿಸುತ್ತಾರೆ. ಅವರ ಖಾತೆಯಲ್ಲಿ ಹಲವು ಸೂಪರ್​ ಹಿಟ್ ಸಿನಿಮಾಗಳಿವೆ. ಈಗ ಅವರು ಸೌರವ್ ಗಂಗೂಲಿ ಪಾತ್ರವನ್ನು ಹೇಗೆ ಮಾಡಲಿದ್ದಾರೆ ಎಂದು ತಿಳಿಯುವ ಕೌತುಕ ಎಲ್ಲರಲ್ಲೂ ಮೂಡಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ, ಬೆಂಗಾವಲು ಪಡೆ ವಾನಹಗಳು ಡಿಕ್ಕಿ

ಭಾರತೀಯ ಕ್ರಿಕೆಟ್​ಗೆ ಸೌರವ್ ಗಂಗೂಲಿ ನೀಡಿದ ಕೊಡುಗೆ ಅಪಾರ. ಟೀಮ್ ಇಂಡಿಯಾವನ್ನು ವಿಶ್ವಮಟ್ಟದಲ್ಲಿ ಮಿಂಚುವಂತೆ ಮಾಡಿದವರಲ್ಲಿ ಗಂಗೂಲಿ ಕೂಡ ಪ್ರಮುಖರು. ಅವರ ಬಯೋಪಿಕ್​ನಲ್ಲಿ ಆ ಎಲ್ಲ ವಿವರಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಅವರ ವೈಯಕ್ತಿಕ ಬದುಕಿನ ಬಗ್ಗೆಯೂ ಬಯೋಪಿಕ್​ನಲ್ಲಿ ತೋರಿಸಲಾಗುವುದು. ಆದರೆ ಈ ಸಿನಿಮಾ ಬರಲು ಇನ್ನೂ ಬಹಳ ಸಮಯ ಹಿಡಿಯಲಿದೆ. ಇನ್ನುಳಿದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಕೂಡ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!