AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್

ಬಯೋಪಿಕ್​ನಲ್ಲಿ ಸೌರವ್ ಗಂಗೂಲಿ ಪಾತ್ರವನ್ನು ಯಾರು ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜ್​ಕುಮಾರ್​ ರಾವ್​ ಅವರಿಗೆ ಆ ಅವಕಾಶ ಒಲಿದಿದೆ. ಆದರೆ ಡೇಟ್ಸ್​ ಹೊಂದಾಣಿಕೆ ಆಗದ ಕಾರಣ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಈ ಕುರಿತು ಸೌರವ್ ಗಂಗೂಲಿ ಅವರು ಗುರುವಾರ (ಫೆ.20) ಮಾಹಿತಿ ನೀಡಿದ್ದಾರೆ.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್
Rajkummar Rao, Sourav Ganguly
ಮದನ್​ ಕುಮಾರ್​
|

Updated on: Feb 21, 2025 | 5:54 PM

Share

ಸಚಿನ್ ತೆಂಡುಲ್ಕರ್​, ಮಹೇಂದ್ರ ಸಿಂಗ್ ಧೋನಿ, ಕಪಿಲ್ ದೇವ್ ಮುಂತಾದ ಸಾಧಕರ ಬಗ್ಗೆ ಈಗಾಗಲೇ ಸಿನಿಮಾಗಳು ಬಂದಿವೆ. ಅದೇ ರೀತಿ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಬಯೋಪಿಕ್ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈ ಬಹುನಿರೀಕ್ಷಿತ ಪ್ರಾಜೆಕ್ಟ್​ ಬಗ್ಗೆ ಬಹಳ ಹಿಂದಿನಿಂದಲೂ ಸುದ್ದಿ ಕೇಳಿಬರುತ್ತಲೇ ಇವೆ. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರುವುದು ತಡವಾಗುತ್ತಿದೆ. ಈಗ ತಮ್ಮ ಬಯೋಪಿಕ್ ಬಗ್ಗೆ ಸ್ವತಃ ಸೌರವ್ ಗಂಗೂಲಿ ಅವರು ಒಂದು ಸುದ್ದಿ ನೀಡಿದ್ದಾರೆ. ತಮ್ಮ ಪಾತ್ರದಲ್ಲಿ ಬಾಲಿವುಡ್ ನಟ ರಾಜ್​ಕುಮಾರ್​ ರಾವ್ ನಟಿಸಲಿದ್ದಾರೆ ಎಂಬುದನ್ನು ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೌರವ್ ಗಂಗೂಲಿ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ನನಗೆ ತಿಳಿದಿರುವಂತೆ ನಟ ರಾಜ್​ಕುಮಾರ್​ ರಾವ್​ ಅವರು ನನ್ನ ಪಾತ್ರ ಮಾಡಲಿದ್ದಾರೆ. ಆದರೆ ಡೇಟ್ಸ್​ ಸಮಸ್ಯೆ ಎದುರಾಗಿದೆ. ಹಾಗಾಗಿ ಆ ಸಿನಿಮಾ ಬಿಡುಗಡೆ ಆಗಲು ಒಂದು ವರ್ಷಕ್ಕಿಂತಲೂ ಅಧಿಕ ಸಮಯ ಬೇಕಾಗಲಿದೆ’ ಎಂದು ಸೌರವ್ ಗಂಗೂಲಿ ಅವರು ಹೇಳಿದ್ದಾರೆ.

ಬಾಲಿವುಡ್​ನಲ್ಲಿ ನಟ ರಾಜ್​ಕುಮಾರ್​ ರಾವ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ ಬಗ್ಗೆ ಯಾರಿಗೂ ಅನುಮಾನ ಇಲ್ಲ. ಯಾವ ಪಾತ್ರ ಕೊಟ್ಟರೂ ಅವರು ಅತ್ಯುತ್ತಮವಾಗಿ ನಿಭಾಯಿಸುತ್ತಾರೆ. ಅವರ ಖಾತೆಯಲ್ಲಿ ಹಲವು ಸೂಪರ್​ ಹಿಟ್ ಸಿನಿಮಾಗಳಿವೆ. ಈಗ ಅವರು ಸೌರವ್ ಗಂಗೂಲಿ ಪಾತ್ರವನ್ನು ಹೇಗೆ ಮಾಡಲಿದ್ದಾರೆ ಎಂದು ತಿಳಿಯುವ ಕೌತುಕ ಎಲ್ಲರಲ್ಲೂ ಮೂಡಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ, ಬೆಂಗಾವಲು ಪಡೆ ವಾನಹಗಳು ಡಿಕ್ಕಿ

ಭಾರತೀಯ ಕ್ರಿಕೆಟ್​ಗೆ ಸೌರವ್ ಗಂಗೂಲಿ ನೀಡಿದ ಕೊಡುಗೆ ಅಪಾರ. ಟೀಮ್ ಇಂಡಿಯಾವನ್ನು ವಿಶ್ವಮಟ್ಟದಲ್ಲಿ ಮಿಂಚುವಂತೆ ಮಾಡಿದವರಲ್ಲಿ ಗಂಗೂಲಿ ಕೂಡ ಪ್ರಮುಖರು. ಅವರ ಬಯೋಪಿಕ್​ನಲ್ಲಿ ಆ ಎಲ್ಲ ವಿವರಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಅವರ ವೈಯಕ್ತಿಕ ಬದುಕಿನ ಬಗ್ಗೆಯೂ ಬಯೋಪಿಕ್​ನಲ್ಲಿ ತೋರಿಸಲಾಗುವುದು. ಆದರೆ ಈ ಸಿನಿಮಾ ಬರಲು ಇನ್ನೂ ಬಹಳ ಸಮಯ ಹಿಡಿಯಲಿದೆ. ಇನ್ನುಳಿದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಕೂಡ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು