AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್

ಬಯೋಪಿಕ್​ನಲ್ಲಿ ಸೌರವ್ ಗಂಗೂಲಿ ಪಾತ್ರವನ್ನು ಯಾರು ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜ್​ಕುಮಾರ್​ ರಾವ್​ ಅವರಿಗೆ ಆ ಅವಕಾಶ ಒಲಿದಿದೆ. ಆದರೆ ಡೇಟ್ಸ್​ ಹೊಂದಾಣಿಕೆ ಆಗದ ಕಾರಣ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಈ ಕುರಿತು ಸೌರವ್ ಗಂಗೂಲಿ ಅವರು ಗುರುವಾರ (ಫೆ.20) ಮಾಹಿತಿ ನೀಡಿದ್ದಾರೆ.

ಸೌರವ್ ಗಂಗೂಲಿ ಬಯೋಪಿಕ್​; ಮುಖ್ಯ ಪಾತ್ರ ಮಾಡಲಿರುವ ನಟ ರಾಜ್​ಕುಮಾರ್ ರಾವ್
Rajkummar Rao, Sourav Ganguly
Follow us
ಮದನ್​ ಕುಮಾರ್​
|

Updated on: Feb 21, 2025 | 5:54 PM

ಸಚಿನ್ ತೆಂಡುಲ್ಕರ್​, ಮಹೇಂದ್ರ ಸಿಂಗ್ ಧೋನಿ, ಕಪಿಲ್ ದೇವ್ ಮುಂತಾದ ಸಾಧಕರ ಬಗ್ಗೆ ಈಗಾಗಲೇ ಸಿನಿಮಾಗಳು ಬಂದಿವೆ. ಅದೇ ರೀತಿ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಬಯೋಪಿಕ್ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈ ಬಹುನಿರೀಕ್ಷಿತ ಪ್ರಾಜೆಕ್ಟ್​ ಬಗ್ಗೆ ಬಹಳ ಹಿಂದಿನಿಂದಲೂ ಸುದ್ದಿ ಕೇಳಿಬರುತ್ತಲೇ ಇವೆ. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರುವುದು ತಡವಾಗುತ್ತಿದೆ. ಈಗ ತಮ್ಮ ಬಯೋಪಿಕ್ ಬಗ್ಗೆ ಸ್ವತಃ ಸೌರವ್ ಗಂಗೂಲಿ ಅವರು ಒಂದು ಸುದ್ದಿ ನೀಡಿದ್ದಾರೆ. ತಮ್ಮ ಪಾತ್ರದಲ್ಲಿ ಬಾಲಿವುಡ್ ನಟ ರಾಜ್​ಕುಮಾರ್​ ರಾವ್ ನಟಿಸಲಿದ್ದಾರೆ ಎಂಬುದನ್ನು ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೌರವ್ ಗಂಗೂಲಿ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ನನಗೆ ತಿಳಿದಿರುವಂತೆ ನಟ ರಾಜ್​ಕುಮಾರ್​ ರಾವ್​ ಅವರು ನನ್ನ ಪಾತ್ರ ಮಾಡಲಿದ್ದಾರೆ. ಆದರೆ ಡೇಟ್ಸ್​ ಸಮಸ್ಯೆ ಎದುರಾಗಿದೆ. ಹಾಗಾಗಿ ಆ ಸಿನಿಮಾ ಬಿಡುಗಡೆ ಆಗಲು ಒಂದು ವರ್ಷಕ್ಕಿಂತಲೂ ಅಧಿಕ ಸಮಯ ಬೇಕಾಗಲಿದೆ’ ಎಂದು ಸೌರವ್ ಗಂಗೂಲಿ ಅವರು ಹೇಳಿದ್ದಾರೆ.

ಬಾಲಿವುಡ್​ನಲ್ಲಿ ನಟ ರಾಜ್​ಕುಮಾರ್​ ರಾವ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ನಟನೆ ಬಗ್ಗೆ ಯಾರಿಗೂ ಅನುಮಾನ ಇಲ್ಲ. ಯಾವ ಪಾತ್ರ ಕೊಟ್ಟರೂ ಅವರು ಅತ್ಯುತ್ತಮವಾಗಿ ನಿಭಾಯಿಸುತ್ತಾರೆ. ಅವರ ಖಾತೆಯಲ್ಲಿ ಹಲವು ಸೂಪರ್​ ಹಿಟ್ ಸಿನಿಮಾಗಳಿವೆ. ಈಗ ಅವರು ಸೌರವ್ ಗಂಗೂಲಿ ಪಾತ್ರವನ್ನು ಹೇಗೆ ಮಾಡಲಿದ್ದಾರೆ ಎಂದು ತಿಳಿಯುವ ಕೌತುಕ ಎಲ್ಲರಲ್ಲೂ ಮೂಡಿದೆ.

ಇದನ್ನೂ ಓದಿ: ಸೌರವ್ ಗಂಗೂಲಿ ಕಾರು ಭೀಕರ ಅಪಘಾತ: ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ, ಬೆಂಗಾವಲು ಪಡೆ ವಾನಹಗಳು ಡಿಕ್ಕಿ

ಭಾರತೀಯ ಕ್ರಿಕೆಟ್​ಗೆ ಸೌರವ್ ಗಂಗೂಲಿ ನೀಡಿದ ಕೊಡುಗೆ ಅಪಾರ. ಟೀಮ್ ಇಂಡಿಯಾವನ್ನು ವಿಶ್ವಮಟ್ಟದಲ್ಲಿ ಮಿಂಚುವಂತೆ ಮಾಡಿದವರಲ್ಲಿ ಗಂಗೂಲಿ ಕೂಡ ಪ್ರಮುಖರು. ಅವರ ಬಯೋಪಿಕ್​ನಲ್ಲಿ ಆ ಎಲ್ಲ ವಿವರಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಜೊತೆಗೆ ಸೌರವ್ ಗಂಗೂಲಿ ಅವರ ವೈಯಕ್ತಿಕ ಬದುಕಿನ ಬಗ್ಗೆಯೂ ಬಯೋಪಿಕ್​ನಲ್ಲಿ ತೋರಿಸಲಾಗುವುದು. ಆದರೆ ಈ ಸಿನಿಮಾ ಬರಲು ಇನ್ನೂ ಬಹಳ ಸಮಯ ಹಿಡಿಯಲಿದೆ. ಇನ್ನುಳಿದ ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಕೂಡ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್