AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raju Srivastava: ರಾಜು ಶ್ರೀವಾಸ್ತವ ಸಾವಿನ ಬಗ್ಗೆ ಕೆಟ್ಟ ಕಮೆಂಟ್​ ಮಾಡಿದ ಇನ್ನೋರ್ವ ಕಾಮಿಡಿಯನ್​

Raju Srivastava Death | Rohan Joshi: ರಾಜು ಶ್ರೀವಾಸ್ತವ ನಿಧನದ ಬಗ್ಗೆ ರೋಹನ್​ ಜೋಶಿ ಕಟುವಾಗಿ ಕಮೆಂಟ್​ ಮಾಡಿದ್ದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ಬಳಿಕ ಅವರು ತಮ್ಮ ಕಮೆಂಟ್​ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Raju Srivastava: ರಾಜು ಶ್ರೀವಾಸ್ತವ ಸಾವಿನ ಬಗ್ಗೆ ಕೆಟ್ಟ ಕಮೆಂಟ್​ ಮಾಡಿದ ಇನ್ನೋರ್ವ ಕಾಮಿಡಿಯನ್​
ರಾಜು ಶ್ರೀವಾಸ್ತವ ಶೋ, ರೋಹನ್ ಜೋಶಿ
TV9 Web
| Updated By: ಮದನ್​ ಕುಮಾರ್​|

Updated on:Sep 22, 2022 | 7:38 AM

Share

ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ (Raju Srivastava) ಅವರು ಬುಧವಾರ (ಸೆ.21) ಇಹಲೋಕ ತ್ಯಜಿಸಿದರು. ಅವರ ನಿಧನದಿಂದಾಗಿ ಅಭಿಮಾನಿಗಳಿಗೆ, ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ತೀವ್ರ ನೋವಾಗಿದೆ. ಸಾವಿನ (Raju Srivastava Death) ಸಂದರ್ಭದಲ್ಲಿ ಸಾಮಾನ್ಯವಾಗಿ ಯಾರೂ ಕೂಡ ಕೆಟ್ಟದಾಗಿ ಮಾತನಾಡುವುದಿಲ್ಲ. ಆದರೆ ಅದೇಕೋ ಗೊತ್ತಿಲ್ಲ ಕಾಮಿಡಿಯನ್​ ರೋಹನ್​ ಜೋಶಿ (Rohan Joshi) ಅವರು ರಾಜು ಶ್ರೀವಾಸ್ತವ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ. ತುಂಬ ಕೆಟ್ಟ ಪದಗಳನ್ನು ಬಳಸಿ ಅವರು ನಿಂದಿಸಿದ್ದಾರೆ. ಅವರ ಈ ವರ್ತನೆಗೆ ನೆಟ್ಟಿಗರು ಛಾಟಿ ಬೀಸಿದ್ದಾರೆ. ನಿಮಗೆ ಕನಿಷ್ಠ ಸೌಜನ್ಯವೂ ಇಲ್ಲವಲ್ಲ ಎಂದು ಜನರು ಕಿಡಿಕಾರಿದ್ದಾರೆ. ಬಳಿಕ ತಮ್ಮ ಕಮೆಂಟ್​ ಬಗ್ಗೆ ರೋಹನ್​ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಅವರು ತುಂಬ ಫೇಮಸ್​ ಆಗಿದ್ದರು. ಆದರೆ ಅವರು ಹೊಸ ಕಲಾವಿದರ ಬಗ್ಗೆ ಉತ್ತಮ ಭಾವನೆ ಹೊಂದಿರಲಿಲ್ಲ ಎಂಬುದು ರೋಹನ್​ ಜೋಶಿ ಅವರ ತಕರಾರು. ‘ಹೊಸ ಅಲೆಯ ಸ್ಟ್ಯಾಂಡಪ್​ ಕಾಮಿಡಿ ಬಗ್ಗೆ ಅವರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅವಹೇಳನ ಮಾಡುತ್ತಿದ್ದರು. ಅವರು ಕೆಲವು ಒಳ್ಳೆಯ ಜೋಕ್​ಗಳನ್ನು ಹೇಳಿರಬಹುದು. ಆದರೆ ಹಾಸ್ಯದ ಸ್ಪಿರಿಟ್​ ಏನೆಂಬುದು ಅವರಿಗೆ ಅರ್ಥ ಆಗಲಿಲ್ಲ. ಅವರು ತೊಲಗಲಿ’ ಎಂದು ರೋಹನ್​ ಜೋಶಿ ಕಮೆಂಟ್​ ಮಾಡಿದ್ದರು.

ಸಾವಿನ ಸಂದರ್ಭದಲ್ಲಿ ಈ ರೀತಿ ಕಟುವಾಗಿ ಕಮೆಂಟ್​ ಮಾಡಿದ್ದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ಬಳಿಕ ಆ ಕಮೆಂಟ್​ ಅನ್ನು ರೋಹನ್​ ಜೋಶಿ ಡಿಲಿಟ್​ ಮಾಡಿದ್ದಾರೆ. ‘ಒಂದು ನಿಮಿಷದ ಕೋಪದ ನಂತರ ಇದು ನನ್ನ ವೈಯಕ್ತಿಕ ಭಾವನೆಯ ದಿನ ಅಲ್ಲ ಎಂಬುದನ್ನು ತಿಳಿದುಕೊಂಡು ಕಮೆಂಟ್ ಡಿಲಿಟ್​ ಮಾಡಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ’ ಎಂದು ರೋಹನ್​ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
Raju Srivastava Death: ಎಲ್ಲರನ್ನೂ ನಗಿಸಿ, ಸಾವಿನಲ್ಲಿ ಕಣ್ಣೀರು ಹಾಕಿಸಿದ ರಾಜು ಶ್ರೀವಾಸ್ತವ ಹೆಜ್ಜೆ ಗುರುತುಗಳು ಇಲ್ಲಿವೆ
Image
Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ
Image
ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ; ಪವಾಡ ನಡೆದರಷ್ಟೇ ಬಚಾವ್​?
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ರಾಜು ಶ್ರೀವಾಸ್ತವ ನಿಧನಕ್ಕೆ ಕಾರಣ:

ಆಗಸ್ಟ್ 10ರಂದು ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜುಗೆ ಹೃದಯಾಘಾತ ಆಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಒಟ್ಟು 41 ದಿನಗಳ ಕಾಲ ರಾಜು ಶ್ರೀವಾಸ್ತವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ದಾಖಲಾದ ತಕ್ಷಣವೇ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಕೆಲವು ದಿನಗಳ ಬಳಿಕ ಅವರ ಮಿದುಳು ನಿಷ್ಕ್ರಿಯವಾಗಿದೆ ಎಂಬುದು ತಿಳಿದುಬಂದಿತು. ಆ ಬಳಿಕ ಅಭಿಮಾನಿಗಳಲ್ಲಿ ಮತ್ತು ಕುಟುಂಬದವರಲ್ಲಿ ಚಿಂತೆ ಹೆಚ್ಚಿತ್ತು. ಕಡೆಗೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:38 am, Thu, 22 September 22

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು