AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raju Srivastava: ರಾಜು ಶ್ರೀವಾಸ್ತವ ಸಾವಿನ ಬಗ್ಗೆ ಕೆಟ್ಟ ಕಮೆಂಟ್​ ಮಾಡಿದ ಇನ್ನೋರ್ವ ಕಾಮಿಡಿಯನ್​

Raju Srivastava Death | Rohan Joshi: ರಾಜು ಶ್ರೀವಾಸ್ತವ ನಿಧನದ ಬಗ್ಗೆ ರೋಹನ್​ ಜೋಶಿ ಕಟುವಾಗಿ ಕಮೆಂಟ್​ ಮಾಡಿದ್ದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ಬಳಿಕ ಅವರು ತಮ್ಮ ಕಮೆಂಟ್​ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Raju Srivastava: ರಾಜು ಶ್ರೀವಾಸ್ತವ ಸಾವಿನ ಬಗ್ಗೆ ಕೆಟ್ಟ ಕಮೆಂಟ್​ ಮಾಡಿದ ಇನ್ನೋರ್ವ ಕಾಮಿಡಿಯನ್​
ರಾಜು ಶ್ರೀವಾಸ್ತವ ಶೋ, ರೋಹನ್ ಜೋಶಿ
Follow us
TV9 Web
| Updated By: ಮದನ್​ ಕುಮಾರ್​

Updated on:Sep 22, 2022 | 7:38 AM

ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ (Raju Srivastava) ಅವರು ಬುಧವಾರ (ಸೆ.21) ಇಹಲೋಕ ತ್ಯಜಿಸಿದರು. ಅವರ ನಿಧನದಿಂದಾಗಿ ಅಭಿಮಾನಿಗಳಿಗೆ, ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ತೀವ್ರ ನೋವಾಗಿದೆ. ಸಾವಿನ (Raju Srivastava Death) ಸಂದರ್ಭದಲ್ಲಿ ಸಾಮಾನ್ಯವಾಗಿ ಯಾರೂ ಕೂಡ ಕೆಟ್ಟದಾಗಿ ಮಾತನಾಡುವುದಿಲ್ಲ. ಆದರೆ ಅದೇಕೋ ಗೊತ್ತಿಲ್ಲ ಕಾಮಿಡಿಯನ್​ ರೋಹನ್​ ಜೋಶಿ (Rohan Joshi) ಅವರು ರಾಜು ಶ್ರೀವಾಸ್ತವ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ. ತುಂಬ ಕೆಟ್ಟ ಪದಗಳನ್ನು ಬಳಸಿ ಅವರು ನಿಂದಿಸಿದ್ದಾರೆ. ಅವರ ಈ ವರ್ತನೆಗೆ ನೆಟ್ಟಿಗರು ಛಾಟಿ ಬೀಸಿದ್ದಾರೆ. ನಿಮಗೆ ಕನಿಷ್ಠ ಸೌಜನ್ಯವೂ ಇಲ್ಲವಲ್ಲ ಎಂದು ಜನರು ಕಿಡಿಕಾರಿದ್ದಾರೆ. ಬಳಿಕ ತಮ್ಮ ಕಮೆಂಟ್​ ಬಗ್ಗೆ ರೋಹನ್​ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಅವರು ತುಂಬ ಫೇಮಸ್​ ಆಗಿದ್ದರು. ಆದರೆ ಅವರು ಹೊಸ ಕಲಾವಿದರ ಬಗ್ಗೆ ಉತ್ತಮ ಭಾವನೆ ಹೊಂದಿರಲಿಲ್ಲ ಎಂಬುದು ರೋಹನ್​ ಜೋಶಿ ಅವರ ತಕರಾರು. ‘ಹೊಸ ಅಲೆಯ ಸ್ಟ್ಯಾಂಡಪ್​ ಕಾಮಿಡಿ ಬಗ್ಗೆ ಅವರಿಗೆ ಅರ್ಥ ಆಗುತ್ತಿರಲಿಲ್ಲ. ಹಾಗಾಗಿ ಅವಹೇಳನ ಮಾಡುತ್ತಿದ್ದರು. ಅವರು ಕೆಲವು ಒಳ್ಳೆಯ ಜೋಕ್​ಗಳನ್ನು ಹೇಳಿರಬಹುದು. ಆದರೆ ಹಾಸ್ಯದ ಸ್ಪಿರಿಟ್​ ಏನೆಂಬುದು ಅವರಿಗೆ ಅರ್ಥ ಆಗಲಿಲ್ಲ. ಅವರು ತೊಲಗಲಿ’ ಎಂದು ರೋಹನ್​ ಜೋಶಿ ಕಮೆಂಟ್​ ಮಾಡಿದ್ದರು.

ಸಾವಿನ ಸಂದರ್ಭದಲ್ಲಿ ಈ ರೀತಿ ಕಟುವಾಗಿ ಕಮೆಂಟ್​ ಮಾಡಿದ್ದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ಬಳಿಕ ಆ ಕಮೆಂಟ್​ ಅನ್ನು ರೋಹನ್​ ಜೋಶಿ ಡಿಲಿಟ್​ ಮಾಡಿದ್ದಾರೆ. ‘ಒಂದು ನಿಮಿಷದ ಕೋಪದ ನಂತರ ಇದು ನನ್ನ ವೈಯಕ್ತಿಕ ಭಾವನೆಯ ದಿನ ಅಲ್ಲ ಎಂಬುದನ್ನು ತಿಳಿದುಕೊಂಡು ಕಮೆಂಟ್ ಡಿಲಿಟ್​ ಮಾಡಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ’ ಎಂದು ರೋಹನ್​ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
Raju Srivastava Death: ಎಲ್ಲರನ್ನೂ ನಗಿಸಿ, ಸಾವಿನಲ್ಲಿ ಕಣ್ಣೀರು ಹಾಕಿಸಿದ ರಾಜು ಶ್ರೀವಾಸ್ತವ ಹೆಜ್ಜೆ ಗುರುತುಗಳು ಇಲ್ಲಿವೆ
Image
Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ
Image
ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ; ಪವಾಡ ನಡೆದರಷ್ಟೇ ಬಚಾವ್​?
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ರಾಜು ಶ್ರೀವಾಸ್ತವ ನಿಧನಕ್ಕೆ ಕಾರಣ:

ಆಗಸ್ಟ್ 10ರಂದು ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜುಗೆ ಹೃದಯಾಘಾತ ಆಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಒಟ್ಟು 41 ದಿನಗಳ ಕಾಲ ರಾಜು ಶ್ರೀವಾಸ್ತವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ದಾಖಲಾದ ತಕ್ಷಣವೇ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಕೆಲವು ದಿನಗಳ ಬಳಿಕ ಅವರ ಮಿದುಳು ನಿಷ್ಕ್ರಿಯವಾಗಿದೆ ಎಂಬುದು ತಿಳಿದುಬಂದಿತು. ಆ ಬಳಿಕ ಅಭಿಮಾನಿಗಳಲ್ಲಿ ಮತ್ತು ಕುಟುಂಬದವರಲ್ಲಿ ಚಿಂತೆ ಹೆಚ್ಚಿತ್ತು. ಕಡೆಗೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:38 am, Thu, 22 September 22

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು