AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಘೋಷಿಸಿದ ರಾಕೇಶ್ ರೋಷನ್; ‘ಕ್ರಿಶ್ 4’ ಗತಿ ಏನು?

ರಾಕೇಶ್ ರೋಷನ್ ಅವರು ನಿರ್ದೇಶನದಿಂದ ನಿವೃತ್ತಿ ಘೋಷಿಸಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ವಯಸ್ಸಿನ ಕಾರಣ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ‘ಕ್ರಿಶ್ 4’ ಚಿತ್ರವನ್ನು ಅವರು ನಿರ್ಮಾಣ ಮಾಡಲಿದ್ದಾರೆ ಆದರೆ ನಿರ್ದೇಶನ ಮಾಡುವುದಿಲ್ಲ

ನಿವೃತ್ತಿ ಘೋಷಿಸಿದ ರಾಕೇಶ್ ರೋಷನ್; ‘ಕ್ರಿಶ್ 4’ ಗತಿ ಏನು?
ರಾಕೇಶ್-ಹೃತಿಕ್
ರಾಜೇಶ್ ದುಗ್ಗುಮನೆ
|

Updated on: Nov 19, 2024 | 2:25 PM

Share

‘ಕಹೋ ನಾ ಪ್ಯಾರ್ ಹೇ’, ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ರೀತಿಯ ಸಿನಿಮಾಗಳನ್ನು ಮಾಡಿದ ರಾಕೇಶ್ ರೋಷನ್ ಅವರು ಈಗ ನಿರ್ದೇಶನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಅವರಿ ‘ಕ್ರಿಶ್ 4 ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎಂದು ಹೇಳಲಾಗಿತ್ತು. ಈಗ ಅವರು ನಿವೃತ್ತಿ ಪಡೆದಿರುವುದರಿಂದ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ. ಆ ಪ್ರಶ್ನೆಗೆ ಉತ್ತರ ಕೊಟ್ಟೇ ಅವರು ನಿವೃತ್ತಿ ಪಡೆದಿದ್ದಾರೆ.

ರಾಕೇಶ್ ರೋಷನ್ ಈ ಮೊದಲು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಅದನ್ನು ಗೆದ್ದು ಬಂದಿದ್ದಾರೆ. ಈಗ ಅವರಿಗೆ ವಯಸ್ಸಾಗಿದೆ. ಬಿಸಿಲಿನಲ್ಲಿ ನಿಂತು, ರಾತ್ರಿ-ಹಗಲು ಎನ್ನದೆ ನಿರ್ದೇಶನ ಮಾಡುತ್ತೇನೆ ಎಂದರೆ ಅದು ಸಾಧ್ಯವಿಲ್ಲ. ಇದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಈ ಕಾರಣಕ್ಕೆ ರಾಕೇಶ್ ಅವರು ನಿರ್ದೇಶನಕ್ಕೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಬಾಲಿವುಡ್ ಹಂಗಾಮ ಜೊತೆ ಮಾತನಾಡಿದ್ದಾರೆ.

‘ನಾನು ಇನ್ನುಮುಂದೆ ನಿರ್ದೇಶನ ಮಾಡುತ್ತೇನೆ ಎಂದು ಅನಿಸುವುದಿಲ್ಲ. ಆದರೆ ನಾನು ಕ್ರಿಶ್ ಫ್ರ್ಯಾಂಚೈಸ್​ನ ನಾಲ್ಕನೇ ಚಿತ್ರವನ್ನು ಘೋಷಣೆ ಮಾಡುತ್ತೇನೆ’ ಎಂದಿದ್ದಾರೆ ಅವರು. ‘ಕ್ರಿಶ್’ ಫ್ರ್ಯಾಂಚೈಸ್​ನಲ್ಲಿ ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ಹಾಗೂ ‘ಕ್ರಿಶ್ 3’ ಸಿನಿಮಾಗಳು ಇವೆ. ಎಲ್ಲವೂ ರಾಕೇಶ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ಮಾಣ ಇತ್ತು. ಈಗ ‘ಕ್ರಿಶ್ 4’ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಮಾತ್ರ ಅವರು ಹೊತ್ತಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ರಾಕೇಶ್ ರೋಶನ್ 1970ರಲ್ಲಿ ಕಲಾವಿದನಾಗಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಘರ್ ಘರ್ ಕಿ ಕಹಾನಿ’ ಸಿನಿಮಾದಲ್ಲಿ ಅವರು ಮೊದಲ ಬಾರಿಗೆ ನಟಿಸಿದರು. ‘ಆಪ್​ ಕೆ ದೀವಾನೆ’ ಅವರ ನಿರ್ಮಾಣದ ಮೊದಲ ಸಿನಿಮಾ. 1987ರಲ್ಲಿ ನಿರ್ದೇಶನಕ್ಕೆ ಕಾಲಿಟ್ಟರು. 2013ರಲ್ಲಿ ರಿಲೀಸ್ ಆದ ‘ಕ್ರಿಶ್ 3’ ಅವರ ನಿರ್ದೇಶನದ ಕೊನೆಯ ಚಿತ್ರ. ಈಗ ‘ಕ್ರಿಶ್ 4’ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ