AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಘೋಷಿಸಿದ ರಾಕೇಶ್ ರೋಷನ್; ‘ಕ್ರಿಶ್ 4’ ಗತಿ ಏನು?

ರಾಕೇಶ್ ರೋಷನ್ ಅವರು ನಿರ್ದೇಶನದಿಂದ ನಿವೃತ್ತಿ ಘೋಷಿಸಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ವಯಸ್ಸಿನ ಕಾರಣ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ‘ಕ್ರಿಶ್ 4’ ಚಿತ್ರವನ್ನು ಅವರು ನಿರ್ಮಾಣ ಮಾಡಲಿದ್ದಾರೆ ಆದರೆ ನಿರ್ದೇಶನ ಮಾಡುವುದಿಲ್ಲ

ನಿವೃತ್ತಿ ಘೋಷಿಸಿದ ರಾಕೇಶ್ ರೋಷನ್; ‘ಕ್ರಿಶ್ 4’ ಗತಿ ಏನು?
ರಾಕೇಶ್-ಹೃತಿಕ್
ರಾಜೇಶ್ ದುಗ್ಗುಮನೆ
|

Updated on: Nov 19, 2024 | 2:25 PM

Share

‘ಕಹೋ ನಾ ಪ್ಯಾರ್ ಹೇ’, ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ರೀತಿಯ ಸಿನಿಮಾಗಳನ್ನು ಮಾಡಿದ ರಾಕೇಶ್ ರೋಷನ್ ಅವರು ಈಗ ನಿರ್ದೇಶನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಅವರಿ ‘ಕ್ರಿಶ್ 4 ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎಂದು ಹೇಳಲಾಗಿತ್ತು. ಈಗ ಅವರು ನಿವೃತ್ತಿ ಪಡೆದಿರುವುದರಿಂದ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ. ಆ ಪ್ರಶ್ನೆಗೆ ಉತ್ತರ ಕೊಟ್ಟೇ ಅವರು ನಿವೃತ್ತಿ ಪಡೆದಿದ್ದಾರೆ.

ರಾಕೇಶ್ ರೋಷನ್ ಈ ಮೊದಲು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಅದನ್ನು ಗೆದ್ದು ಬಂದಿದ್ದಾರೆ. ಈಗ ಅವರಿಗೆ ವಯಸ್ಸಾಗಿದೆ. ಬಿಸಿಲಿನಲ್ಲಿ ನಿಂತು, ರಾತ್ರಿ-ಹಗಲು ಎನ್ನದೆ ನಿರ್ದೇಶನ ಮಾಡುತ್ತೇನೆ ಎಂದರೆ ಅದು ಸಾಧ್ಯವಿಲ್ಲ. ಇದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಈ ಕಾರಣಕ್ಕೆ ರಾಕೇಶ್ ಅವರು ನಿರ್ದೇಶನಕ್ಕೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಬಾಲಿವುಡ್ ಹಂಗಾಮ ಜೊತೆ ಮಾತನಾಡಿದ್ದಾರೆ.

‘ನಾನು ಇನ್ನುಮುಂದೆ ನಿರ್ದೇಶನ ಮಾಡುತ್ತೇನೆ ಎಂದು ಅನಿಸುವುದಿಲ್ಲ. ಆದರೆ ನಾನು ಕ್ರಿಶ್ ಫ್ರ್ಯಾಂಚೈಸ್​ನ ನಾಲ್ಕನೇ ಚಿತ್ರವನ್ನು ಘೋಷಣೆ ಮಾಡುತ್ತೇನೆ’ ಎಂದಿದ್ದಾರೆ ಅವರು. ‘ಕ್ರಿಶ್’ ಫ್ರ್ಯಾಂಚೈಸ್​ನಲ್ಲಿ ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ಹಾಗೂ ‘ಕ್ರಿಶ್ 3’ ಸಿನಿಮಾಗಳು ಇವೆ. ಎಲ್ಲವೂ ರಾಕೇಶ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ಮಾಣ ಇತ್ತು. ಈಗ ‘ಕ್ರಿಶ್ 4’ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಮಾತ್ರ ಅವರು ಹೊತ್ತಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ರಾಕೇಶ್ ರೋಶನ್ 1970ರಲ್ಲಿ ಕಲಾವಿದನಾಗಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಘರ್ ಘರ್ ಕಿ ಕಹಾನಿ’ ಸಿನಿಮಾದಲ್ಲಿ ಅವರು ಮೊದಲ ಬಾರಿಗೆ ನಟಿಸಿದರು. ‘ಆಪ್​ ಕೆ ದೀವಾನೆ’ ಅವರ ನಿರ್ಮಾಣದ ಮೊದಲ ಸಿನಿಮಾ. 1987ರಲ್ಲಿ ನಿರ್ದೇಶನಕ್ಕೆ ಕಾಲಿಟ್ಟರು. 2013ರಲ್ಲಿ ರಿಲೀಸ್ ಆದ ‘ಕ್ರಿಶ್ 3’ ಅವರ ನಿರ್ದೇಶನದ ಕೊನೆಯ ಚಿತ್ರ. ಈಗ ‘ಕ್ರಿಶ್ 4’ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ