AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಘೋಷಿಸಿದ ರಾಕೇಶ್ ರೋಷನ್; ‘ಕ್ರಿಶ್ 4’ ಗತಿ ಏನು?

ರಾಕೇಶ್ ರೋಷನ್ ಅವರು ನಿರ್ದೇಶನದಿಂದ ನಿವೃತ್ತಿ ಘೋಷಿಸಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ವಯಸ್ಸಿನ ಕಾರಣ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ‘ಕ್ರಿಶ್ 4’ ಚಿತ್ರವನ್ನು ಅವರು ನಿರ್ಮಾಣ ಮಾಡಲಿದ್ದಾರೆ ಆದರೆ ನಿರ್ದೇಶನ ಮಾಡುವುದಿಲ್ಲ

ನಿವೃತ್ತಿ ಘೋಷಿಸಿದ ರಾಕೇಶ್ ರೋಷನ್; ‘ಕ್ರಿಶ್ 4’ ಗತಿ ಏನು?
ರಾಕೇಶ್-ಹೃತಿಕ್
ರಾಜೇಶ್ ದುಗ್ಗುಮನೆ
|

Updated on: Nov 19, 2024 | 2:25 PM

Share

‘ಕಹೋ ನಾ ಪ್ಯಾರ್ ಹೇ’, ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ರೀತಿಯ ಸಿನಿಮಾಗಳನ್ನು ಮಾಡಿದ ರಾಕೇಶ್ ರೋಷನ್ ಅವರು ಈಗ ನಿರ್ದೇಶನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಅವರಿ ‘ಕ್ರಿಶ್ 4 ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎಂದು ಹೇಳಲಾಗಿತ್ತು. ಈಗ ಅವರು ನಿವೃತ್ತಿ ಪಡೆದಿರುವುದರಿಂದ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ. ಆ ಪ್ರಶ್ನೆಗೆ ಉತ್ತರ ಕೊಟ್ಟೇ ಅವರು ನಿವೃತ್ತಿ ಪಡೆದಿದ್ದಾರೆ.

ರಾಕೇಶ್ ರೋಷನ್ ಈ ಮೊದಲು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಅದನ್ನು ಗೆದ್ದು ಬಂದಿದ್ದಾರೆ. ಈಗ ಅವರಿಗೆ ವಯಸ್ಸಾಗಿದೆ. ಬಿಸಿಲಿನಲ್ಲಿ ನಿಂತು, ರಾತ್ರಿ-ಹಗಲು ಎನ್ನದೆ ನಿರ್ದೇಶನ ಮಾಡುತ್ತೇನೆ ಎಂದರೆ ಅದು ಸಾಧ್ಯವಿಲ್ಲ. ಇದಕ್ಕೆ ಅವರ ದೇಹ ಸ್ಪಂದಿಸುವುದಿಲ್ಲ. ಈ ಕಾರಣಕ್ಕೆ ರಾಕೇಶ್ ಅವರು ನಿರ್ದೇಶನಕ್ಕೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಬಾಲಿವುಡ್ ಹಂಗಾಮ ಜೊತೆ ಮಾತನಾಡಿದ್ದಾರೆ.

‘ನಾನು ಇನ್ನುಮುಂದೆ ನಿರ್ದೇಶನ ಮಾಡುತ್ತೇನೆ ಎಂದು ಅನಿಸುವುದಿಲ್ಲ. ಆದರೆ ನಾನು ಕ್ರಿಶ್ ಫ್ರ್ಯಾಂಚೈಸ್​ನ ನಾಲ್ಕನೇ ಚಿತ್ರವನ್ನು ಘೋಷಣೆ ಮಾಡುತ್ತೇನೆ’ ಎಂದಿದ್ದಾರೆ ಅವರು. ‘ಕ್ರಿಶ್’ ಫ್ರ್ಯಾಂಚೈಸ್​ನಲ್ಲಿ ‘ಕೊಯಿ ಮಿಲ್ ಗಯಾ’, ‘ಕ್ರಿಶ್’ ಹಾಗೂ ‘ಕ್ರಿಶ್ 3’ ಸಿನಿಮಾಗಳು ಇವೆ. ಎಲ್ಲವೂ ರಾಕೇಶ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ಮಾಣ ಇತ್ತು. ಈಗ ‘ಕ್ರಿಶ್ 4’ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಮಾತ್ರ ಅವರು ಹೊತ್ತಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ರಾಕೇಶ್ ರೋಶನ್ 1970ರಲ್ಲಿ ಕಲಾವಿದನಾಗಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಘರ್ ಘರ್ ಕಿ ಕಹಾನಿ’ ಸಿನಿಮಾದಲ್ಲಿ ಅವರು ಮೊದಲ ಬಾರಿಗೆ ನಟಿಸಿದರು. ‘ಆಪ್​ ಕೆ ದೀವಾನೆ’ ಅವರ ನಿರ್ಮಾಣದ ಮೊದಲ ಸಿನಿಮಾ. 1987ರಲ್ಲಿ ನಿರ್ದೇಶನಕ್ಕೆ ಕಾಲಿಟ್ಟರು. 2013ರಲ್ಲಿ ರಿಲೀಸ್ ಆದ ‘ಕ್ರಿಶ್ 3’ ಅವರ ನಿರ್ದೇಶನದ ಕೊನೆಯ ಚಿತ್ರ. ಈಗ ‘ಕ್ರಿಶ್ 4’ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು