AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​

ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಅವರು ಹೇಳಿದ್ದಾರೆ.

ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​
ರಾಖಿ ಸಾವಂತ್​, ರಿಷಬ್​ ಶೆಟ್ಟಿ
ಮದನ್​ ಕುಮಾರ್​
|

Updated on: Sep 27, 2023 | 10:44 AM

Share

ನಟಿ ರಾಖಿ ಸಾವಂತ್​ (Rakhi Sawant) ಅವರು ಸಿನಿಮಾ ಮಾಡಿದ್ದಕ್ಕಿಂತ ವಿವಾದ ಮಾಡಿಕೊಂಡಿದ್ದೇ ಹೆಚ್ಚು. ಆ ವಿವಾದಗಳಿಂದಲೇ ಅವರು ಹೆಚ್ಚು ಪ್ರಚಾರ ಪಡೆದಿದ್ದಾರೆ. ಪ್ರತಿ ದಿನವೂ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ರಾಖಿ ಸಾವಂತ್​ ಅವರ ವೈಯಕ್ತಿಕ ಜೀವನದ ವಿಚಾರಗಳು ಬೀದಿಗೆ ಬಂದಿವೆ. ಪತಿ ಆದಿಲ್​ ಖಾನ್​ ಜೊತೆ ಅವರು ಕಿರಿಕ್​ ಮಾಡಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಈಗ ಅವರು ತಮ್ಮ ಬಯೋಪಿಕ್​ (Rakhi Sawant Biopic) ಬಗ್ಗೆ ಒಂದು ಆಸೆ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಹೇಳಿದ್ದಾರೆ. ಅವರ ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಇದಕ್ಕೆ ರಿಷಬ್​ ಶೆಟ್ಟಿ (Rishab Shetty) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ‘ನಿಮ್ಮ ಪಾತ್ರವನ್ನು ನೀವೇ ಮಾಡಬಹುದಲ್ಲ’ ಎಂದು ನಿರ್ಮಾಪಕರು ರಾಖಿಗೆ ಹೇಳಿದ್ದಾರಂತೆ. ‘ಆ ಬಗ್ಗೆ ನಾನು ಯೋಚಿಸಿಲ್ಲ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಯಾರು ನಿರ್ದೇಶನ ಮಾಡಬೇಕು ಎಂದು ಕೇಳಿದ್ದಕ್ಕೆ ರಿಷಬ್​ ಶೆಟ್ಟಿಯ ಹೆಸರನ್ನು ರಾಖಿ ಸಾವಂತ್​ ಹೇಳಿದ್ದಾರೆ.

ಇದನ್ನೂ ಓದಿ: ರಾಖಿ ಸಾವಂತ್​-ಆದಿಲ್​ ಖಾನ್​ಗೆ ನಿಖಾ ಮಾಡಿಸಿದ್ದು ನಕಲಿ ಮೌಲಾನಾ?

‘ಯಾರು ನಿರ್ದೇಶನ ಮಾಡಬೇಕು ಎಂಬುದರ ಚರ್ಚೆ ನಡೆಯುತ್ತಿದೆ. ಕಥೆ, ಚಿತ್ರಕಥೆ, ಸಂಗೀತ, ನಿರ್ದೇಶನ ಎಲ್ಲ ವಿಭಾಗದಲ್ಲೂ ದೊಡ್ಡ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್​ ಶೆಟ್ಟಿ ಹೆಚ್ಚು ಇಷ್ಟ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರ ಹೇಳಿದ್ದಾರೆ. ಸದ್ಯ ರಿಷಬ್​ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ‘ಗಂಡಸರು ನನ್ನನ್ನು ಮುಟ್ಟಬೇಡಿ, ನಾನು ಪವಿತ್ರಳಾಗಿದ್ದೇನೆ’: ಮೆಕ್ಕಾದಿಂದ ಬಂದು ಎಚ್ಚರಿಕೆ ನೀಡಿದ ರಾಖಿ ಸಾವಂತ್​

ರಾಖಿ ಸಾವಂತ್​ ಅವರ ಪತಿ ಆದಿಲ್​ ಖಾನ್​ ಮೈಸೂರಿನವರು. ಮೈಸೂರಿನಲ್ಲಿ ಇರುವ ಆದಿಲ್​ ಖಾನ್​ ಮನೆ ಮುಂದೆ ಬುಲ್ಡೋಜರ್​ ತಂದು ನಿಲ್ಲಿಸಿದ್ದಾರೆ ರಾಖಿ. ಈ ಎಲ್ಲ ಡ್ರಾಮಾಗಳು ಪ್ರತಿದಿನ ನಡೆಯುತ್ತಿವೆ. ಮದುವೆ ಬಳಿಕ ತಾವು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದಾಗಿ ಈಗಾಗಲೇ ರಾಖಿ ಸಾವಂತ್ ಹೇಳಿದ್ದಾರೆ. ಅವರು ಫಾತಿಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಮೆಕ್ಕಾ ಮದೀನಾಗೂ ಅವರು ಹೋಗಿ ಬಂದಿದ್ದಾರೆ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರಿಗೆ ಹೆಚ್ಚು ಪ್ರಚಾರ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ