ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​

ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಅವರು ಹೇಳಿದ್ದಾರೆ.

ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​
ರಾಖಿ ಸಾವಂತ್​, ರಿಷಬ್​ ಶೆಟ್ಟಿ
Follow us
|

Updated on: Sep 27, 2023 | 10:44 AM

ನಟಿ ರಾಖಿ ಸಾವಂತ್​ (Rakhi Sawant) ಅವರು ಸಿನಿಮಾ ಮಾಡಿದ್ದಕ್ಕಿಂತ ವಿವಾದ ಮಾಡಿಕೊಂಡಿದ್ದೇ ಹೆಚ್ಚು. ಆ ವಿವಾದಗಳಿಂದಲೇ ಅವರು ಹೆಚ್ಚು ಪ್ರಚಾರ ಪಡೆದಿದ್ದಾರೆ. ಪ್ರತಿ ದಿನವೂ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ರಾಖಿ ಸಾವಂತ್​ ಅವರ ವೈಯಕ್ತಿಕ ಜೀವನದ ವಿಚಾರಗಳು ಬೀದಿಗೆ ಬಂದಿವೆ. ಪತಿ ಆದಿಲ್​ ಖಾನ್​ ಜೊತೆ ಅವರು ಕಿರಿಕ್​ ಮಾಡಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಈಗ ಅವರು ತಮ್ಮ ಬಯೋಪಿಕ್​ (Rakhi Sawant Biopic) ಬಗ್ಗೆ ಒಂದು ಆಸೆ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಹೇಳಿದ್ದಾರೆ. ಅವರ ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಇದಕ್ಕೆ ರಿಷಬ್​ ಶೆಟ್ಟಿ (Rishab Shetty) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ‘ನಿಮ್ಮ ಪಾತ್ರವನ್ನು ನೀವೇ ಮಾಡಬಹುದಲ್ಲ’ ಎಂದು ನಿರ್ಮಾಪಕರು ರಾಖಿಗೆ ಹೇಳಿದ್ದಾರಂತೆ. ‘ಆ ಬಗ್ಗೆ ನಾನು ಯೋಚಿಸಿಲ್ಲ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಯಾರು ನಿರ್ದೇಶನ ಮಾಡಬೇಕು ಎಂದು ಕೇಳಿದ್ದಕ್ಕೆ ರಿಷಬ್​ ಶೆಟ್ಟಿಯ ಹೆಸರನ್ನು ರಾಖಿ ಸಾವಂತ್​ ಹೇಳಿದ್ದಾರೆ.

ಇದನ್ನೂ ಓದಿ: ರಾಖಿ ಸಾವಂತ್​-ಆದಿಲ್​ ಖಾನ್​ಗೆ ನಿಖಾ ಮಾಡಿಸಿದ್ದು ನಕಲಿ ಮೌಲಾನಾ?

‘ಯಾರು ನಿರ್ದೇಶನ ಮಾಡಬೇಕು ಎಂಬುದರ ಚರ್ಚೆ ನಡೆಯುತ್ತಿದೆ. ಕಥೆ, ಚಿತ್ರಕಥೆ, ಸಂಗೀತ, ನಿರ್ದೇಶನ ಎಲ್ಲ ವಿಭಾಗದಲ್ಲೂ ದೊಡ್ಡ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್​ ಶೆಟ್ಟಿ ಹೆಚ್ಚು ಇಷ್ಟ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರ ಹೇಳಿದ್ದಾರೆ. ಸದ್ಯ ರಿಷಬ್​ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ‘ಗಂಡಸರು ನನ್ನನ್ನು ಮುಟ್ಟಬೇಡಿ, ನಾನು ಪವಿತ್ರಳಾಗಿದ್ದೇನೆ’: ಮೆಕ್ಕಾದಿಂದ ಬಂದು ಎಚ್ಚರಿಕೆ ನೀಡಿದ ರಾಖಿ ಸಾವಂತ್​

ರಾಖಿ ಸಾವಂತ್​ ಅವರ ಪತಿ ಆದಿಲ್​ ಖಾನ್​ ಮೈಸೂರಿನವರು. ಮೈಸೂರಿನಲ್ಲಿ ಇರುವ ಆದಿಲ್​ ಖಾನ್​ ಮನೆ ಮುಂದೆ ಬುಲ್ಡೋಜರ್​ ತಂದು ನಿಲ್ಲಿಸಿದ್ದಾರೆ ರಾಖಿ. ಈ ಎಲ್ಲ ಡ್ರಾಮಾಗಳು ಪ್ರತಿದಿನ ನಡೆಯುತ್ತಿವೆ. ಮದುವೆ ಬಳಿಕ ತಾವು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದಾಗಿ ಈಗಾಗಲೇ ರಾಖಿ ಸಾವಂತ್ ಹೇಳಿದ್ದಾರೆ. ಅವರು ಫಾತಿಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಮೆಕ್ಕಾ ಮದೀನಾಗೂ ಅವರು ಹೋಗಿ ಬಂದಿದ್ದಾರೆ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರಿಗೆ ಹೆಚ್ಚು ಪ್ರಚಾರ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ