ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​

|

Updated on: Sep 27, 2023 | 10:44 AM

ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಅವರು ಹೇಳಿದ್ದಾರೆ.

ರಾಖಿ ಸಾವಂತ್​ ಬಯೋಪಿಕ್​ಗೆ ರಿಷಬ್​ ಶೆಟ್ಟಿ ನಿರ್ದೇಶನ? ಮೈಸೂರಿನಿಂದ ಹೊಸ ನ್ಯೂಸ್​
ರಾಖಿ ಸಾವಂತ್​, ರಿಷಬ್​ ಶೆಟ್ಟಿ
Follow us on

ನಟಿ ರಾಖಿ ಸಾವಂತ್​ (Rakhi Sawant) ಅವರು ಸಿನಿಮಾ ಮಾಡಿದ್ದಕ್ಕಿಂತ ವಿವಾದ ಮಾಡಿಕೊಂಡಿದ್ದೇ ಹೆಚ್ಚು. ಆ ವಿವಾದಗಳಿಂದಲೇ ಅವರು ಹೆಚ್ಚು ಪ್ರಚಾರ ಪಡೆದಿದ್ದಾರೆ. ಪ್ರತಿ ದಿನವೂ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ರಾಖಿ ಸಾವಂತ್​ ಅವರ ವೈಯಕ್ತಿಕ ಜೀವನದ ವಿಚಾರಗಳು ಬೀದಿಗೆ ಬಂದಿವೆ. ಪತಿ ಆದಿಲ್​ ಖಾನ್​ ಜೊತೆ ಅವರು ಕಿರಿಕ್​ ಮಾಡಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಈಗ ಅವರು ತಮ್ಮ ಬಯೋಪಿಕ್​ (Rakhi Sawant Biopic) ಬಗ್ಗೆ ಒಂದು ಆಸೆ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಹೇಳಿದ್ದಾರೆ. ಅವರ ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಇದಕ್ಕೆ ರಿಷಬ್​ ಶೆಟ್ಟಿ (Rishab Shetty) ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ‘ನಿಮ್ಮ ಪಾತ್ರವನ್ನು ನೀವೇ ಮಾಡಬಹುದಲ್ಲ’ ಎಂದು ನಿರ್ಮಾಪಕರು ರಾಖಿಗೆ ಹೇಳಿದ್ದಾರಂತೆ. ‘ಆ ಬಗ್ಗೆ ನಾನು ಯೋಚಿಸಿಲ್ಲ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಯಾರು ನಿರ್ದೇಶನ ಮಾಡಬೇಕು ಎಂದು ಕೇಳಿದ್ದಕ್ಕೆ ರಿಷಬ್​ ಶೆಟ್ಟಿಯ ಹೆಸರನ್ನು ರಾಖಿ ಸಾವಂತ್​ ಹೇಳಿದ್ದಾರೆ.

ಇದನ್ನೂ ಓದಿ: ರಾಖಿ ಸಾವಂತ್​-ಆದಿಲ್​ ಖಾನ್​ಗೆ ನಿಖಾ ಮಾಡಿಸಿದ್ದು ನಕಲಿ ಮೌಲಾನಾ?

‘ಯಾರು ನಿರ್ದೇಶನ ಮಾಡಬೇಕು ಎಂಬುದರ ಚರ್ಚೆ ನಡೆಯುತ್ತಿದೆ. ಕಥೆ, ಚಿತ್ರಕಥೆ, ಸಂಗೀತ, ನಿರ್ದೇಶನ ಎಲ್ಲ ವಿಭಾಗದಲ್ಲೂ ದೊಡ್ಡ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್​ ಶೆಟ್ಟಿ ಹೆಚ್ಚು ಇಷ್ಟ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರ ಹೇಳಿದ್ದಾರೆ. ಸದ್ಯ ರಿಷಬ್​ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ‘ಗಂಡಸರು ನನ್ನನ್ನು ಮುಟ್ಟಬೇಡಿ, ನಾನು ಪವಿತ್ರಳಾಗಿದ್ದೇನೆ’: ಮೆಕ್ಕಾದಿಂದ ಬಂದು ಎಚ್ಚರಿಕೆ ನೀಡಿದ ರಾಖಿ ಸಾವಂತ್​

ರಾಖಿ ಸಾವಂತ್​ ಅವರ ಪತಿ ಆದಿಲ್​ ಖಾನ್​ ಮೈಸೂರಿನವರು. ಮೈಸೂರಿನಲ್ಲಿ ಇರುವ ಆದಿಲ್​ ಖಾನ್​ ಮನೆ ಮುಂದೆ ಬುಲ್ಡೋಜರ್​ ತಂದು ನಿಲ್ಲಿಸಿದ್ದಾರೆ ರಾಖಿ. ಈ ಎಲ್ಲ ಡ್ರಾಮಾಗಳು ಪ್ರತಿದಿನ ನಡೆಯುತ್ತಿವೆ. ಮದುವೆ ಬಳಿಕ ತಾವು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದಾಗಿ ಈಗಾಗಲೇ ರಾಖಿ ಸಾವಂತ್ ಹೇಳಿದ್ದಾರೆ. ಅವರು ಫಾತಿಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಮೆಕ್ಕಾ ಮದೀನಾಗೂ ಅವರು ಹೋಗಿ ಬಂದಿದ್ದಾರೆ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರಿಗೆ ಹೆಚ್ಚು ಪ್ರಚಾರ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.