AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ

Rakhi Sawant | Sherlyn Chopra: 2022ರ ನವೆಂಬರ್​ನಲ್ಲಿ ರಾಖಿ ಸಾವಂತ್​ ವಿರುದ್ಧ ಶೆರ್ಲಿನ್​ ಚೋಪ್ರಾ ದೂರು ದಾಖಲಿಸಿದ್ದರು. ಆ ಸಂಬಂಧ ಮುಂಬೈ ಪೊಲೀಸರು ಈಗ ರಾಖಿ ಸಾವಂತ್​ ಅವರನ್ನು ವಶಕ್ಕೆ ಪಡೆದಿದ್ದಾರೆ.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ
ರಾಖಿ ಸಾವಂತ್, ಶೆರ್ಲಿನ್ ಚೋಪ್ರಾ
TV9 Web
| Edited By: |

Updated on:Jan 19, 2023 | 3:02 PM

Share

ಬಾಲಿವುಡ್​ ನಟಿ ರಾಖಿ ಸಾವಂತ್​ (Rakhi Sawant) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಮುಂಬೈ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಶೆರ್ಲಿನ್​ ಚೋಪ್ರಾ (Sherlyn Chopra) ಅವರು ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್​ ಅವರ ಬಂಧನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರವನ್ನು ಶೆರ್ಲಿನ್​ ಚೋಪ್ರಾ ಅವರು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ರಾಖಿ ಸಾವಂತ್​ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಕೂಡ ಶೆರ್ಲಿನ್​ ಚೋಪ್ರಾ ಟ್ವೀಟ್​ ಮಾಡಿದ್ದಾರೆ. ರಾಖಿ ಸಾವಂತ್ ಅವರ ವೈಯಕ್ತಿಕ ಬದುಕಿನಲ್ಲಿ ಅನೇಕ ವಿವಾದಗಳು ಎದುರಾಗುತ್ತಿವೆ. ಆದಿಲ್​ ಖಾನ್​ ಜೊತೆಗಿನ ಮದುವೆ ಕುರಿತಂತೆ ಅವರು ಇತ್ತೀಚೆಗೆ ಕಣ್ಣೀರು ಹಾಕಿದ್ದರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರ ಬಂಧನವಾಗಿದೆ.

ಮೀ ಟೂ ಕೇಸ್​ನಲ್ಲಿ ಶೆರ್ಲಿನ್​ ಚೋಪ್ರಾ-ರಾಖಿ ಸಾವಂತ್​ ಕಿತ್ತಾಟ:

ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ಶೆರ್ಲಿನ್​ ಚೋಪ್ರಾ ಅವರು ತೊಡಗಿಕೊಂಡಿದ್ದರು ಎಂಬ ಆರೋಪ ಇದೆ. ಹಾಗೆಯೇ ಅವರು ಈ ಹಿಂದೆ ನಿರ್ದೇಶಕ ಸಾಜಿದ್​ ಖಾನ್​ ಮೇಲೆ ಮೀ ಟೂ ಆರೋಪ ಹೊರಿಸಿದ್ದರು. ಸಾಜಿದ್​ ಖಾನ್​ ಅವರನ್ನು ಸಲ್ಮಾನ್​ ಖಾನ್​ ರಕ್ಷಿಸುತ್ತಿದ್ದಾರೆ ಎಂದು ಶೆರ್ಲಿನ್​ ಚೋಪ್ರಾ ಹೇಳಿದ್ದರು. ಈ ವಿಚಾರದಲ್ಲಿ ತಲೆ ಹಾಕಿದ್ದ ರಾಖಿ ಸಾವಂತ್​ ಅವರು ಶೆರ್ಲಿನ್​ ವಿರುದ್ಧ ಮಾತನಾಡಿದ್ದರು. ಆಗ ರಾಖಿ ವಿರುದ್ಧ ಶೆರ್ಲಿನಾ ಚೋಪ್ರಾ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ: Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​

ಡಾನ್ಸ್​ ಅಕಾಡೆಮಿ ಶುರು ಮಾಡಲು ಹೊರಟಿದ್ದ ರಾಖಿ ಸಾವಂತ್:

ನಟಿ ರಾಖಿ ಸಾವಂತ್​ ಅವರು ಪ್ರಿಯಕರ ಆದಿಲ್​ ಖಾನ್​ ಜೊತೆ ಮದುವೆ ಆಗಿರುವ ವಿಚಾರ ಇತ್ತೀಚೆಗೆ ಬಹಿರಂಗ ಆಯಿತು. ಲೇಟೆಸ್ಟ್​ ನ್ಯೂಸ್​ ಏನೆಂದರೆ ಪತಿ ಜೊತೆ ಸೇರಿ ಅವರು ಒಂದು ಡ್ಯಾನ್ಸ್​ ಅಕಾಡೆಮಿ ಶುರು ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಜ.19ರ ಮಧ್ಯಾಹ್ನ 3 ಗಂಟೆ ಅದು ಉದ್ಘಾಟನೆಗೊಳ್ಳಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಅವರ ಬಂಧನ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:44 pm, Thu, 19 January 23

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು