AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ

Rakhi Sawant | Sherlyn Chopra: 2022ರ ನವೆಂಬರ್​ನಲ್ಲಿ ರಾಖಿ ಸಾವಂತ್​ ವಿರುದ್ಧ ಶೆರ್ಲಿನ್​ ಚೋಪ್ರಾ ದೂರು ದಾಖಲಿಸಿದ್ದರು. ಆ ಸಂಬಂಧ ಮುಂಬೈ ಪೊಲೀಸರು ಈಗ ರಾಖಿ ಸಾವಂತ್​ ಅವರನ್ನು ವಶಕ್ಕೆ ಪಡೆದಿದ್ದಾರೆ.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ
ರಾಖಿ ಸಾವಂತ್, ಶೆರ್ಲಿನ್ ಚೋಪ್ರಾ
TV9 Web
| Edited By: |

Updated on:Jan 19, 2023 | 3:02 PM

Share

ಬಾಲಿವುಡ್​ ನಟಿ ರಾಖಿ ಸಾವಂತ್​ (Rakhi Sawant) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಮುಂಬೈ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಶೆರ್ಲಿನ್​ ಚೋಪ್ರಾ (Sherlyn Chopra) ಅವರು ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್​ ಅವರ ಬಂಧನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರವನ್ನು ಶೆರ್ಲಿನ್​ ಚೋಪ್ರಾ ಅವರು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ರಾಖಿ ಸಾವಂತ್​ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಕೂಡ ಶೆರ್ಲಿನ್​ ಚೋಪ್ರಾ ಟ್ವೀಟ್​ ಮಾಡಿದ್ದಾರೆ. ರಾಖಿ ಸಾವಂತ್ ಅವರ ವೈಯಕ್ತಿಕ ಬದುಕಿನಲ್ಲಿ ಅನೇಕ ವಿವಾದಗಳು ಎದುರಾಗುತ್ತಿವೆ. ಆದಿಲ್​ ಖಾನ್​ ಜೊತೆಗಿನ ಮದುವೆ ಕುರಿತಂತೆ ಅವರು ಇತ್ತೀಚೆಗೆ ಕಣ್ಣೀರು ಹಾಕಿದ್ದರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರ ಬಂಧನವಾಗಿದೆ.

ಮೀ ಟೂ ಕೇಸ್​ನಲ್ಲಿ ಶೆರ್ಲಿನ್​ ಚೋಪ್ರಾ-ರಾಖಿ ಸಾವಂತ್​ ಕಿತ್ತಾಟ:

ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ಶೆರ್ಲಿನ್​ ಚೋಪ್ರಾ ಅವರು ತೊಡಗಿಕೊಂಡಿದ್ದರು ಎಂಬ ಆರೋಪ ಇದೆ. ಹಾಗೆಯೇ ಅವರು ಈ ಹಿಂದೆ ನಿರ್ದೇಶಕ ಸಾಜಿದ್​ ಖಾನ್​ ಮೇಲೆ ಮೀ ಟೂ ಆರೋಪ ಹೊರಿಸಿದ್ದರು. ಸಾಜಿದ್​ ಖಾನ್​ ಅವರನ್ನು ಸಲ್ಮಾನ್​ ಖಾನ್​ ರಕ್ಷಿಸುತ್ತಿದ್ದಾರೆ ಎಂದು ಶೆರ್ಲಿನ್​ ಚೋಪ್ರಾ ಹೇಳಿದ್ದರು. ಈ ವಿಚಾರದಲ್ಲಿ ತಲೆ ಹಾಕಿದ್ದ ರಾಖಿ ಸಾವಂತ್​ ಅವರು ಶೆರ್ಲಿನ್​ ವಿರುದ್ಧ ಮಾತನಾಡಿದ್ದರು. ಆಗ ರಾಖಿ ವಿರುದ್ಧ ಶೆರ್ಲಿನಾ ಚೋಪ್ರಾ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ: Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​

ಡಾನ್ಸ್​ ಅಕಾಡೆಮಿ ಶುರು ಮಾಡಲು ಹೊರಟಿದ್ದ ರಾಖಿ ಸಾವಂತ್:

ನಟಿ ರಾಖಿ ಸಾವಂತ್​ ಅವರು ಪ್ರಿಯಕರ ಆದಿಲ್​ ಖಾನ್​ ಜೊತೆ ಮದುವೆ ಆಗಿರುವ ವಿಚಾರ ಇತ್ತೀಚೆಗೆ ಬಹಿರಂಗ ಆಯಿತು. ಲೇಟೆಸ್ಟ್​ ನ್ಯೂಸ್​ ಏನೆಂದರೆ ಪತಿ ಜೊತೆ ಸೇರಿ ಅವರು ಒಂದು ಡ್ಯಾನ್ಸ್​ ಅಕಾಡೆಮಿ ಶುರು ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಜ.19ರ ಮಧ್ಯಾಹ್ನ 3 ಗಂಟೆ ಅದು ಉದ್ಘಾಟನೆಗೊಳ್ಳಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಅವರ ಬಂಧನ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:44 pm, Thu, 19 January 23

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!