AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ

Rakhi Sawant | Sherlyn Chopra: 2022ರ ನವೆಂಬರ್​ನಲ್ಲಿ ರಾಖಿ ಸಾವಂತ್​ ವಿರುದ್ಧ ಶೆರ್ಲಿನ್​ ಚೋಪ್ರಾ ದೂರು ದಾಖಲಿಸಿದ್ದರು. ಆ ಸಂಬಂಧ ಮುಂಬೈ ಪೊಲೀಸರು ಈಗ ರಾಖಿ ಸಾವಂತ್​ ಅವರನ್ನು ವಶಕ್ಕೆ ಪಡೆದಿದ್ದಾರೆ.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ
ರಾಖಿ ಸಾವಂತ್, ಶೆರ್ಲಿನ್ ಚೋಪ್ರಾ
Follow us
TV9 Web
| Updated By: ಮದನ್​ ಕುಮಾರ್​

Updated on:Jan 19, 2023 | 3:02 PM

ಬಾಲಿವುಡ್​ ನಟಿ ರಾಖಿ ಸಾವಂತ್​ (Rakhi Sawant) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಮುಂಬೈ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಶೆರ್ಲಿನ್​ ಚೋಪ್ರಾ (Sherlyn Chopra) ಅವರು ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್​ ಅವರ ಬಂಧನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರವನ್ನು ಶೆರ್ಲಿನ್​ ಚೋಪ್ರಾ ಅವರು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ರಾಖಿ ಸಾವಂತ್​ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಕೂಡ ಶೆರ್ಲಿನ್​ ಚೋಪ್ರಾ ಟ್ವೀಟ್​ ಮಾಡಿದ್ದಾರೆ. ರಾಖಿ ಸಾವಂತ್ ಅವರ ವೈಯಕ್ತಿಕ ಬದುಕಿನಲ್ಲಿ ಅನೇಕ ವಿವಾದಗಳು ಎದುರಾಗುತ್ತಿವೆ. ಆದಿಲ್​ ಖಾನ್​ ಜೊತೆಗಿನ ಮದುವೆ ಕುರಿತಂತೆ ಅವರು ಇತ್ತೀಚೆಗೆ ಕಣ್ಣೀರು ಹಾಕಿದ್ದರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರ ಬಂಧನವಾಗಿದೆ.

ಮೀ ಟೂ ಕೇಸ್​ನಲ್ಲಿ ಶೆರ್ಲಿನ್​ ಚೋಪ್ರಾ-ರಾಖಿ ಸಾವಂತ್​ ಕಿತ್ತಾಟ:

ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ಶೆರ್ಲಿನ್​ ಚೋಪ್ರಾ ಅವರು ತೊಡಗಿಕೊಂಡಿದ್ದರು ಎಂಬ ಆರೋಪ ಇದೆ. ಹಾಗೆಯೇ ಅವರು ಈ ಹಿಂದೆ ನಿರ್ದೇಶಕ ಸಾಜಿದ್​ ಖಾನ್​ ಮೇಲೆ ಮೀ ಟೂ ಆರೋಪ ಹೊರಿಸಿದ್ದರು. ಸಾಜಿದ್​ ಖಾನ್​ ಅವರನ್ನು ಸಲ್ಮಾನ್​ ಖಾನ್​ ರಕ್ಷಿಸುತ್ತಿದ್ದಾರೆ ಎಂದು ಶೆರ್ಲಿನ್​ ಚೋಪ್ರಾ ಹೇಳಿದ್ದರು. ಈ ವಿಚಾರದಲ್ಲಿ ತಲೆ ಹಾಕಿದ್ದ ರಾಖಿ ಸಾವಂತ್​ ಅವರು ಶೆರ್ಲಿನ್​ ವಿರುದ್ಧ ಮಾತನಾಡಿದ್ದರು. ಆಗ ರಾಖಿ ವಿರುದ್ಧ ಶೆರ್ಲಿನಾ ಚೋಪ್ರಾ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ: Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​

ಡಾನ್ಸ್​ ಅಕಾಡೆಮಿ ಶುರು ಮಾಡಲು ಹೊರಟಿದ್ದ ರಾಖಿ ಸಾವಂತ್:

ನಟಿ ರಾಖಿ ಸಾವಂತ್​ ಅವರು ಪ್ರಿಯಕರ ಆದಿಲ್​ ಖಾನ್​ ಜೊತೆ ಮದುವೆ ಆಗಿರುವ ವಿಚಾರ ಇತ್ತೀಚೆಗೆ ಬಹಿರಂಗ ಆಯಿತು. ಲೇಟೆಸ್ಟ್​ ನ್ಯೂಸ್​ ಏನೆಂದರೆ ಪತಿ ಜೊತೆ ಸೇರಿ ಅವರು ಒಂದು ಡ್ಯಾನ್ಸ್​ ಅಕಾಡೆಮಿ ಶುರು ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಜ.19ರ ಮಧ್ಯಾಹ್ನ 3 ಗಂಟೆ ಅದು ಉದ್ಘಾಟನೆಗೊಳ್ಳಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಅವರ ಬಂಧನ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:44 pm, Thu, 19 January 23

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ