AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲು ವಾಸ ತಪ್ಪಿಸಿಕೊಳ್ಳಲು ರಾಖಿ ಅನಾರೋಗ್ಯ ನಾಟಕ’: ಮಾಜಿ ಗಂಡನ ಆರೋಪ

ವರದಿಗಳ ಪ್ರಕಾರ, ರಾಖಿ ಸಾವಂತ್ ಮೇಲೆ ಹಲವು ದೂರುಗಳು ದಾಖಲಾಗಿವೆ. ಆ ಕೇಸ್​ನಲ್ಲಿ ಪೊಲೀಸರು ವಿಚಾರಣೆ ಆರಂಭಿಸಲಿದ್ದಾರೆ. ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ರಾಖಿ ಸಾವಂತ್​ ಈಗ ಅನಾರೋಗ್ಯದ ನಾಟಕ ಆಡುತ್ತಿದ್ದಾರೆ ಎಂದು ಅವರ ಮಾಜಿ ಗಂಡ ಆದಿಲ್​ ಖಾನ್​ ಆರೋಪ ಮಾಡಿದ್ದಾರೆ.

‘ಜೈಲು ವಾಸ ತಪ್ಪಿಸಿಕೊಳ್ಳಲು ರಾಖಿ ಅನಾರೋಗ್ಯ ನಾಟಕ’: ಮಾಜಿ ಗಂಡನ ಆರೋಪ
ಆದಿಲ್​ ಖಾನ್​, ರಾಖಿ ಸಾವಂತ್​
ಮದನ್​ ಕುಮಾರ್​
|

Updated on: May 16, 2024 | 10:52 PM

Share

ಯಾವಾಗಲೂ ವಿವಾದದ ಮೂಲಕವೇ ಸುದ್ದಿ ಆಗುವ ನಟಿ ರಾಖಿ ಸಾವಂತ್​ (Rakhi Sawant) ಅವರು ಈಗ ಆಸ್ಪತ್ರೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಪ್ರಜ್ಞೆಯೇ ಇಲ್ಲದೇ ಅವರು ಆಸ್ಪತ್ರೆಯ ಬೆಡ್​ ಮೇಲೆ ಮಲಗಿಕೊಂಡಿರುವ ಒಂದು ಫೋಟೋ ವೈರಲ್​ ಆಗಿದೆ. ರಾಖಿ ಸಾವಂತ್​ ಬೇಗ ಗುಣಮುಖರಾಗಲಿ ಎಂದು ಅವರ ಫ್ಯಾನ್ಸ್​ ಪ್ರಾರ್ಥಿಸುತ್ತಿದ್ದಾರೆ. ಆದರೆ ಅವರ ಮಾಜಿ ಪತಿ ಆದಿಲ್​ ಖಾನ್ (Adil Khan)​ ಬೇರೊಂದು ಆರೋಪ ಮಾಡಿದ್ದಾರೆ. ರಾಖಿ ಸಾವಂತ್ ಅನಾರೋಗ್ಯದ ನಾಟಕ ಆಡುತ್ತಿದ್ದಾರೆ ಎಂದು ಆದಿಲ್​ ಖಾನ್​ ಹೇಳಿದ್ದಾರೆ.

ರಾಖಿ ಸಾವಂತ್​ ಮತ್ತು ಆದಿಲ್​ ಖಾನ್​ ಅವರು ಮದುವೆ ಆಗಿದ್ದರು. ಆದರೆ ಕೆಲವೇ ದಿನಗಳ ಬಳಿಕ ಅವರ ಮದುವೆ ಮುರಿದು ಬಿತ್ತು. ಇಬ್ಬರ ನಡುವಿನ ಜಗಳ ಬೀದಿಗೆ ಬಂತು. ಬಳಿಕ ಆದಿಲ್​ ಖಾನ್ ಬೇರೆ ಮದುವೆ ಮಾಡಿಕೊಂಡರು. ಆದರೆ ಈಗ ಅವರು ಕೆಲವು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಜೊತೆಗಿನ ಖಾಸಗಿ ಫೋಟೋ, ವಿಡಿಯೋಗಳನ್ನು ರಾಖಿ ಸಾವಂತ್​ ಲೀಕ್​ ಮಾಡಿದ್ದಾರೆ ಎಂದು ಆದಿಲ್​ ಖಾನ್​ ಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್​ 500, 504, 34ರ ಅಡಿಯಲ್ಲಿ ರಾಖಿ ಸಾವಂತ್​ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಹಾಗಾಗಿ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈ ಕೇಸ್​ನಲ್ಲಿ ರಾಖಿ ಸಾವಂತ್ ಜೈಲಿಗೆ ಹೋಗಬೇಕಾಗಬಹುದು. ಅದರಿಂದ ತಪ್ಪಿಸಿಕೊಳ್ಳಲು ಅವರೀಗ ಅನಾರೋಗ್ಯದ ನಾಟಕ ಆಡುತ್ತಿದ್ದಾರೆ ಎಂದು ಆದಿಲ್​ ಖಾನ್​ ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ರಾಖಿ ಸಾವಂತ್​ಗೆ ಕ್ಯಾನ್ಸರ್? ಮಾಜಿ ಪತಿಯರಿಂದ ಭಿನ್ನ ಭಿನ್ನ ಹೇಳಿಕೆ

ಚಿತ್ರರಂಗದಲ್ಲಿ ರಾಖಿ ಸಾವಂತ್​ ಅವರಿಗೆ ಸರಿಯಾದ ಅವಕಾಶಗಳು ಸಿಗಲಿಲ್ಲ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಅವರು ಒಂದಷ್ಟು ಪ್ರಚಾರ ಪಡೆದುಕೊಂಡರು. ಆ ಬಳಿಕ ಅವರು ಹೆಚ್ಚು ಸುದ್ದಿ ಆಗಿದ್ದೇ ವಿವಾದಗಳ ಕಾರಣದಿಂದ. ಆಗಾಗ ಅವರ ವೈಯಕ್ತಿಕ ಜೀವನದ ಕಿರಿಕ್​ ಬೀದಿಗೆ ಬರುತ್ತದೆ. ಈಗ ಅವರ ಮಾಜಿ ಗಂಡ ಮಾಡಿದ ಆರೋಪಗಳಿಗೆ ಅವರು ಏನು ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?