AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲು ವಾಸ ತಪ್ಪಿಸಿಕೊಳ್ಳಲು ರಾಖಿ ಅನಾರೋಗ್ಯ ನಾಟಕ’: ಮಾಜಿ ಗಂಡನ ಆರೋಪ

ವರದಿಗಳ ಪ್ರಕಾರ, ರಾಖಿ ಸಾವಂತ್ ಮೇಲೆ ಹಲವು ದೂರುಗಳು ದಾಖಲಾಗಿವೆ. ಆ ಕೇಸ್​ನಲ್ಲಿ ಪೊಲೀಸರು ವಿಚಾರಣೆ ಆರಂಭಿಸಲಿದ್ದಾರೆ. ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ರಾಖಿ ಸಾವಂತ್​ ಈಗ ಅನಾರೋಗ್ಯದ ನಾಟಕ ಆಡುತ್ತಿದ್ದಾರೆ ಎಂದು ಅವರ ಮಾಜಿ ಗಂಡ ಆದಿಲ್​ ಖಾನ್​ ಆರೋಪ ಮಾಡಿದ್ದಾರೆ.

‘ಜೈಲು ವಾಸ ತಪ್ಪಿಸಿಕೊಳ್ಳಲು ರಾಖಿ ಅನಾರೋಗ್ಯ ನಾಟಕ’: ಮಾಜಿ ಗಂಡನ ಆರೋಪ
ಆದಿಲ್​ ಖಾನ್​, ರಾಖಿ ಸಾವಂತ್​
ಮದನ್​ ಕುಮಾರ್​
|

Updated on: May 16, 2024 | 10:52 PM

Share

ಯಾವಾಗಲೂ ವಿವಾದದ ಮೂಲಕವೇ ಸುದ್ದಿ ಆಗುವ ನಟಿ ರಾಖಿ ಸಾವಂತ್​ (Rakhi Sawant) ಅವರು ಈಗ ಆಸ್ಪತ್ರೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಪ್ರಜ್ಞೆಯೇ ಇಲ್ಲದೇ ಅವರು ಆಸ್ಪತ್ರೆಯ ಬೆಡ್​ ಮೇಲೆ ಮಲಗಿಕೊಂಡಿರುವ ಒಂದು ಫೋಟೋ ವೈರಲ್​ ಆಗಿದೆ. ರಾಖಿ ಸಾವಂತ್​ ಬೇಗ ಗುಣಮುಖರಾಗಲಿ ಎಂದು ಅವರ ಫ್ಯಾನ್ಸ್​ ಪ್ರಾರ್ಥಿಸುತ್ತಿದ್ದಾರೆ. ಆದರೆ ಅವರ ಮಾಜಿ ಪತಿ ಆದಿಲ್​ ಖಾನ್ (Adil Khan)​ ಬೇರೊಂದು ಆರೋಪ ಮಾಡಿದ್ದಾರೆ. ರಾಖಿ ಸಾವಂತ್ ಅನಾರೋಗ್ಯದ ನಾಟಕ ಆಡುತ್ತಿದ್ದಾರೆ ಎಂದು ಆದಿಲ್​ ಖಾನ್​ ಹೇಳಿದ್ದಾರೆ.

ರಾಖಿ ಸಾವಂತ್​ ಮತ್ತು ಆದಿಲ್​ ಖಾನ್​ ಅವರು ಮದುವೆ ಆಗಿದ್ದರು. ಆದರೆ ಕೆಲವೇ ದಿನಗಳ ಬಳಿಕ ಅವರ ಮದುವೆ ಮುರಿದು ಬಿತ್ತು. ಇಬ್ಬರ ನಡುವಿನ ಜಗಳ ಬೀದಿಗೆ ಬಂತು. ಬಳಿಕ ಆದಿಲ್​ ಖಾನ್ ಬೇರೆ ಮದುವೆ ಮಾಡಿಕೊಂಡರು. ಆದರೆ ಈಗ ಅವರು ಕೆಲವು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಜೊತೆಗಿನ ಖಾಸಗಿ ಫೋಟೋ, ವಿಡಿಯೋಗಳನ್ನು ರಾಖಿ ಸಾವಂತ್​ ಲೀಕ್​ ಮಾಡಿದ್ದಾರೆ ಎಂದು ಆದಿಲ್​ ಖಾನ್​ ಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್​ 500, 504, 34ರ ಅಡಿಯಲ್ಲಿ ರಾಖಿ ಸಾವಂತ್​ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಹಾಗಾಗಿ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈ ಕೇಸ್​ನಲ್ಲಿ ರಾಖಿ ಸಾವಂತ್ ಜೈಲಿಗೆ ಹೋಗಬೇಕಾಗಬಹುದು. ಅದರಿಂದ ತಪ್ಪಿಸಿಕೊಳ್ಳಲು ಅವರೀಗ ಅನಾರೋಗ್ಯದ ನಾಟಕ ಆಡುತ್ತಿದ್ದಾರೆ ಎಂದು ಆದಿಲ್​ ಖಾನ್​ ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ರಾಖಿ ಸಾವಂತ್​ಗೆ ಕ್ಯಾನ್ಸರ್? ಮಾಜಿ ಪತಿಯರಿಂದ ಭಿನ್ನ ಭಿನ್ನ ಹೇಳಿಕೆ

ಚಿತ್ರರಂಗದಲ್ಲಿ ರಾಖಿ ಸಾವಂತ್​ ಅವರಿಗೆ ಸರಿಯಾದ ಅವಕಾಶಗಳು ಸಿಗಲಿಲ್ಲ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಅವರು ಒಂದಷ್ಟು ಪ್ರಚಾರ ಪಡೆದುಕೊಂಡರು. ಆ ಬಳಿಕ ಅವರು ಹೆಚ್ಚು ಸುದ್ದಿ ಆಗಿದ್ದೇ ವಿವಾದಗಳ ಕಾರಣದಿಂದ. ಆಗಾಗ ಅವರ ವೈಯಕ್ತಿಕ ಜೀವನದ ಕಿರಿಕ್​ ಬೀದಿಗೆ ಬರುತ್ತದೆ. ಈಗ ಅವರ ಮಾಜಿ ಗಂಡ ಮಾಡಿದ ಆರೋಪಗಳಿಗೆ ಅವರು ಏನು ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?