AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant: ಸಲ್ಮಾನ್ ಖಾನ್ ಬೆಂಬಲಿಸಿದ ರಾಖಿ ಸಾವಂತ್​​ಗೂ ಸಂಕಷ್ಟ; ಬಿಷ್ಣೋಯ್ ಗ್ಯಾಂಗ್​ನಿಂದ ಬಂತು ಎಚ್ಚರಿಕೆ

ಸಲ್ಮಾನ್ ಖಾನ್​ಗೆ ಬೆದರಿಕೆ ಬಂದಿತ್ತು. ಎಲ್ಲರ ಎದುರು ಸಲ್ಲು ಕ್ಷಮೆ ಕೇಳಿದರೆ ಬಿಟ್ಟು ಬಿಡುವುದಾಗಿ ಬೆದರಿಕೆ ಪತ್ರದಲ್ಲಿತ್ತು. ಸಲ್ಮಾನ್ ಖಾನ್ ಪರ ರಾಖಿ ಮಾತನಾಡಿದ್ದರು. ಇದರಿಂದ ಅವರಿಗೆ ತೊಂದರೆ ಎದುರಾಗಿದೆ.

Rakhi Sawant: ಸಲ್ಮಾನ್ ಖಾನ್ ಬೆಂಬಲಿಸಿದ ರಾಖಿ ಸಾವಂತ್​​ಗೂ ಸಂಕಷ್ಟ; ಬಿಷ್ಣೋಯ್ ಗ್ಯಾಂಗ್​ನಿಂದ ಬಂತು ಎಚ್ಚರಿಕೆ
ಸಲ್ಮಾನ್​-ರಾಖಿ
ರಾಜೇಶ್ ದುಗ್ಗುಮನೆ
|

Updated on: Apr 20, 2023 | 7:00 AM

Share

ನಟ ಸಲ್ಮಾನ್ ಖಾನ್ (Salman Khan)  ಅವರಿಗೆ ಇತ್ತೀಚೆಗೆ ಸಾಕಷ್ಟು ಕೊಲೆ ಬೆದರಿಕೆ ಬರುತ್ತಿದೆ. ದೂರವಾಣಿ ಕರೆ, ಇ-ಮೇಲ್​, ಪತ್ರಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಈ ಕಾರಣಕ್ಕೆ ಸಲ್ಲುಗೆ ಭದ್ರತೆ ಹೆಚ್ಚಿಸಲಾಗಿದೆ. ಈಗ ಸಲ್ಮಾನ್ ಖಾನ್ ಬೆಂಬಲಿಸಿದ ನಟಿ ರಾಖಿ ಸಾವಂತ್​​ಗೂ ಸಂಕಷ್ಟ ಎದುರಾಗಿದೆ. ಈ ವಿಚಾರದಿಂದ ದೂರ ಇರುವಂತೆ ಅವರಿಗೆ ಎಚ್ಚರಿಸಲಾಗಿದೆ. ಇದನ್ನು ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್​ನವರೇ ಮಾಡಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಸಲ್ಮಾನ್ ಖಾನ್​ ಅವರನ್ನು ಬೆಂಬಲಿಸಲು ಹೋಗಿ ರಾಖಿ ತೊಂದರೆಗೆ ಸಿಲುಕಿದ್ದಾರೆ.

ಸಲ್ಮಾನ್ ಖಾನ್ ಅವರು ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ ಆಡಿದ್ದರು. ಈ ಪ್ರಾಣಿಯನ್ನು ಬಿಷ್ಣೋಯ್ ಗ್ಯಾಂಗ್​ನವರು ಪೂಜಿಸುತ್ತಾರೆ. ಹೀಗಾಗಿ ಸಲ್ಲು ಕೃಷ್ಣಮೃಗ ಸಾಯಿಸಿದ ಬಗ್ಗೆ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ಗೆ ಸೇಡಿದೆ. ಸಲ್ಮಾನ್ ಖಾನ್ ಹತ್ಯೆ ಮಾಡಿ ಈ ಸೇಡನ್ನು ತೀರಿಸಿಕೊಳ್ಳಬೇಕು ಎಂಬುದು ಬಿಷ್ಣೋಯ್ ಗ್ಯಾಂಗ್ ನಿರ್ಧಾರ. ಈ ಮೊದಲು ಸಲ್ಲುನ ಹತ್ಯೆ ಮಾಡಲು ಅನೇಕ ಪ್ರಯತ್ನಗಳು ನಡೆದಿದ್ದವು. ಆದರೆ, ಸಾಧ್ಯವಾಗಿರಲಿಲ್ಲ. ಈಗ ಈ ಗ್ಯಾಂಗ್ ಮತ್ತೆ ಸಿಟ್ಟಿಗೆದ್ದಿದೆ. ಸಲ್ಮಾನ್ ಖಾನ್​ನ ಸಾಯಿಸಿಯೇ ತೀರುತ್ತೇವೆ ಎನ್ನುವ ನಿರ್ಧಾರಕ್ಕೆ ಬಂದಿದೆ.

ಸಲ್ಮಾನ್ ಖಾನ್​ಗೆ ಬೆದರಿಕೆ ಬಂದಿತ್ತು. ಎಲ್ಲರ ಎದುರು ಸಲ್ಲು ಕ್ಷಮೆ ಕೇಳಿದರೆ ಬಿಟ್ಟು ಬಿಡುವುದಾಗಿ ಬೆದರಿಕೆ ಪತ್ರದಲ್ಲಿತ್ತು. ‘ಬಿಷ್ಣೋಯ್ ಸಮಾಜದವರ ಬಳಿ ಸಲ್ಮಾನ್ ಖಾನ್ ಪರವಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ. ದಯವಿಟ್ಟು ಅವರ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ’ ಎಂದು ರಾಖಿ ಸಾವಂತ್​ ತಿಂಗಳ ಹಿಂದೆ ಹೇಳಿಕೆ ನೀಡಿದ್ದರು. ಈಗ ಸಲ್ಲುಗೆ ಬಂದ ಹೊಸ ಬೆದರಿಕೆ ಪತ್ರದಲ್ಲಿ ರಾಖಿ ಸಾವಂತ್​ಗೂ ಎಚ್ಚರಿಕೆ ಬಂದಿದೆ.

ಇದನ್ನೂ ಓದಿ:  ‘ಏಪ್ರಿಲ್ 30ಕ್ಕೆ ಸಲ್ಮಾನ್ ಖಾನ್​ನ ಮುಗಿಸ್ತೀವಿ’; ಸಲ್ಲುಗೆ ಬಂತು ಮತ್ತೊಂದು ಬೆದರಿಕೆ ಕರೆ

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾ ಏಪ್ರಿಲ್ 21ರಂದು ರಿಲೀಸ್ ಆಗುತ್ತಿದೆ. ಇದಕ್ಕೂ ಎರಡು ದಿನ ಮೊದಲು (ಏಪ್ರಿಲ್ 19) ಸಲ್ಲುಗೆ ಇ-ಮೇಲ್ ಮೂಲಕ ಬೆದರಿಕೆ ಪತ್ರ ಬಂದಿದೆ. ಅವರನ್ನು ಸಾಯಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಇದರ ಜೊತೆಗೆ ‘ಈ ವಿಚಾರದಿಂದ ಅವರಿಗೆ (ರಾಖಿ ಸಾವಂತ್​​) ಹೊರಗೆ ಉಳಿಯೋಕೆ ಹೇಳಿ’ ಎನ್ನುವ ಎಚ್ಚರಿಕೆಯನ್ನೂ ರವಾನಿಸಲಾಗಿದೆ.

ಇದನ್ನೂ ಓದಿ: ಬೆದರಿಕೆ ಹೆಚ್ಚಾದ ಬೆನ್ನಲ್ಲೇ ಬುಲೆಟ್​ಪ್ರೂಫ್​ ಕಾರು ಖರೀದಿಸಿದ ಸಲ್ಮಾನ್​ ಖಾನ್; ಇದರ ಬೆಲೆ ಎಷ್ಟು?

ಈ ಮೊದಲು ರಾಖಿ ಸಾವಂತ್​ ಬಿಗ್ ಬಾಸ್​ಗೆ ಬಂದಿದ್ದರು. ಅದನ್ನು ನಿರೂಪಿಸಿದ ಸಲ್ಮಾನ್ ಖಾನ್ ಜೊತೆ ಅವರಿಗೆ ವಿಶೇಷ ಗೌರವ ಬಂದಿತ್ತು. ರಾಖಿ ಸಾವಂತ್ ತಾಯಿಗೆ ಅನಾರೋಗ್ಯ ಆದಾಗ ಸಲ್ಮಾನ್ ಖಾನ್ ಆರ್ಥಿಕ ಸಹಾಯ ಮಾಡಿದ್ದರು. ಈ ಕಾರಣದಿಂದಲೂ ಸಲ್ಲು ಮೇಲೆ ರಾಖಿಗೆ ವಿಶೇಷ ಪ್ರೀತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್