AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant: ತಪ್ಪಾಗಿ ನಮಾಜ್​ ಮಾಡಿದ ರಾಖಿ ಸಾವಂತ್​; ವಿಡಿಯೋ ವೈರಲ್​ ಆದ ಬಳಿಕ ಹಿಗ್ಗಾಮುಗ್ಗಾ ಟ್ರೋಲ್​

Rakhi Sawant Namaz Video: ರಾಖಿ ಸಾವಂತ್​ ಅವರು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ನಮಾಜ್​ ಮಾಡಿದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಆದರೆ ಅದಕ್ಕೆ ವಿರೋಧ ವ್ಯಕ್ತವಾಗಿದೆ.

Rakhi Sawant: ತಪ್ಪಾಗಿ ನಮಾಜ್​ ಮಾಡಿದ ರಾಖಿ ಸಾವಂತ್​; ವಿಡಿಯೋ ವೈರಲ್​ ಆದ ಬಳಿಕ ಹಿಗ್ಗಾಮುಗ್ಗಾ ಟ್ರೋಲ್​
ರಾಖಿ ಸಾವಂತ್
ಮದನ್​ ಕುಮಾರ್​
|

Updated on:Feb 22, 2023 | 4:38 PM

Share

ನಟಿ ರಾಖಿ ಸಾವಂತ್​ (Rakhi Sawant) ಅವರು ತಮ್ಮ ಸಂಸಾರದ ಗಲಾಟೆಯ ಕಾರಣದಿಂದ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಫೇಮಸ್​ ಆಗಿದ್ದ ಅವರ ಸುತ್ತ ಈಗ ವಿವಾದಗಳು ಹೆಚ್ಚಾಗಿವೆ. ಮೈಸೂರು ಮೂಲದ ಆದಿಲ್​ ಖಾನ್​ (Adil Khan) ಜೊತೆ ರಾಖಿ ಸಾವಂತ್​ ಮದುವೆ ಆಗಿದೆ. ಆ ಬಳಿಕ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ. ಫಾತೀಮಾ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ನಮಾಜ್ ಕೂಡ ಮಾಡುತ್ತಿದ್ದಾರೆ. ಆದರೆ ಸರಿಯಾಗಿ ನಮಾಜ್​ (Namaz) ಮಾಡಿಲ್ಲ ಎಂಬ ಕಾರಣಕ್ಕೆ ಅವರನ್ನು ಟ್ರೋಲ್​ ಮಾಡಲಾಗಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಆದಿಲ್​ ಖಾನ್​ ಮತ್ತು ರಾಖಿ ಸಾವಂತ್​ ಅವರು ಮದುವೆ ಆದ ವಿಚಾರ ಒಂದಷ್ಟು ದಿನಗಳ ಕಾಲ ಗೌಪ್ಯವಾಗಿತ್ತು. ಆದರೆ ನಂತರ ರಾಖಿ ಸಾವಂತ್ ಅವರೇ ಸುದ್ದಿ ಬ್ರೇಕ್​ ಮಾಡಿದರು. ತಮ್ಮ ಮದುವೆ ನೋಂದಣಿಯ ಪ್ರಮಾಣಪತ್ರವನ್ನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡರು. ಅದರಲ್ಲಿ ಫಾತೀಮಾ ಎಂದು ರಾಖಿ ಸಾವಂತ್​ ಸಹಿ ಮಾಡಿರುವುದು ಬೆಳಕಿಗೆ ಬಂದಿತ್ತು. ನಂತರ ಮಾಧ್ಯಮಗಳ ಮುಂದೆ ಮಾತನಾಡಿದ್ದ ಅವರು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Rakhi Sawant: ‘ನಾನು ಹಿಂದೂ ಅಂತ ಆದಿಲ್​ ಖಾನ್​ ಮನೆಯವರು ನನ್ನ ಸೇರಿಸಿಕೊಳ್ತಿಲ್ಲ’; ಮೈಸೂರಲ್ಲಿ ರಾಖಿ ಸಾವಂತ್​ ಕಣ್ಣೀರು

ಇದನ್ನೂ ಓದಿ
Image
Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ
Image
Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​
Image
Rakhi Sawant: ಫಾತಿಮಾ ಅಂತ ಹೆಸರು ಬದಲಿಸಿಕೊಂಡ ರಾಖಿ ಸಾವಂತ್​; ಆದಿಲ್​​ ಜತೆಗಿನ ಶಾದಿ ರಹಸ್ಯ ಬಹಿರಂಗ
Image
Rakhi Sawant: ಮತ್ತೊಂದು ವಿವಾಹ ಆದ ರಾಖಿ ಸಾವಂತ್; ಆದಿಲ್ ಜತೆಗಿನ ಮದುವೆ ಫೋಟೋ ವೈರಲ್

ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದರಿಂದ ರಾಖಿ ಸಾವಂತ್​ ಅವರು ನಮಾಜ್​ ಮಾಡಿ, ಅದರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಅವರು ನೈಲ್​ ಪಾಲಿಶ್​ ಹಚ್ಚಿಕೊಂಡು ನಮಾಜ್​ ಮಾಡಿದ್ದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ‘ನೀವು ನಿಜವಾಗಿ ಪ್ರಾರ್ಥನೆ ಮಾಡುವುದೇ ಹೌದಾದರೆ ಅದಕ್ಕೆ ಗೌರವ ನೀಡಿ. ಜಗತ್ತಿಗೆ ತೋರಿಸುವ ಸಲುವಾಗಿ ವಿಡಿಯೋ ಮಾಡಬೇಡಿ. ಅದು ನಾಟಕದ ರೀತಿ ಕಾಣುತ್ತದೆ. ನೀವು ನಿಮ್ಮ ನೋವುಗಳನ್ನು ಹಂಚಿಕೊಳ್ಳಬೇಕಾಗಿರುವುದು ದೇವರ ಜೊತೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ  ರಾಖಿ ಸಾವಂತ್ ಪತಿ ವಿರುದ್ಧ ಮತ್ತೊಂದು FIR ದಾಖಲು: ಅತ್ಯಾಚಾರ ಕೇಸ್​ ದಾಖಲಿಸಿದ ಇರಾನಿ ಮೂಲದ ಯುವತಿ

ನೆಟ್ಟಿಗರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಖಿ ಸಾವಂತ್​ ಅವರು ನಮಾಜ್​ ವಿಡಿಯೋವನ್ನು ಡಿಲೀಟ್​ ಮಾಡಿದ್ದಾರೆ. ಪ್ರಸ್ತುತ ಅವರು ಮೈಸೂರಿಗೆ ಬಂದು ನ್ಯಾಯಾಲಯದ ಮೆಟ್ಟಲು ಹತ್ತಿದ್ದಾರೆ. ಅದಕ್ಕೂ ಮುನ್ನ ಆದಿಲ್ ಖಾನ್​ ಕುಟುಂಬದವರನ್ನು ರಾಖಿ ಭೇಟಿ ಆಗಿದ್ದಾರೆ. ಆದರೆ ಹಿಂದೂ ಎಂಬ ಕಾರಣಕ್ಕೆ ಆದಿಲ್​ ಮನೆಯವರು ತಮ್ಮನ್ನು ಸೇರಿಸಿಕೊಳ್ಳುತ್ತಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳ ಎದುರು ರಾಖಿ ಸಾವಂತ್ ಕಣ್ಣೀರು ಸುರಿಸಿದ್ದಾರೆ.

ಆದಿಲ್​ ಖಾನ್​ಗೆ ಬೇರೆ ಯುವತಿಯ ಜೊತೆ ಅಫೇರ್​ ಇದೆ ಎಂಬ ಕಾರಣದಿಂದ ರಾಖಿ ಸಾವಂತ್​ ಗರಂ ಆಗಿದ್ದಾರೆ. ಅಲ್ಲದೇ ತಮ್ಮ ಬಳಿಕ ಇದ್ದ ಕೋಟ್ಯಂತರ ರೂಪಾಯಿ ಹಣವನ್ನೂ ಆದಿಲ್​ ಖಾನ್​ ತೆಗೆದುಕೊಂಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:16 pm, Wed, 22 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್