AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡಸರು ನನ್ನನ್ನು ಮುಟ್ಟಬೇಡಿ, ನಾನು ಪವಿತ್ರಳಾಗಿದ್ದೇನೆ’: ಮೆಕ್ಕಾದಿಂದ ಬಂದು ಎಚ್ಚರಿಕೆ ನೀಡಿದ ರಾಖಿ ಸಾವಂತ್​

ಇತ್ತೀಚೆಗೆ ರಾಖಿ ಸಾವಂತ್​ ಅವರು ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ‘ನಾನು ಮೆಕ್ಕಾ ಮದೀನಾಗೆ ಹೋಗಿ ಬಂದಿದ್ದೇನೆ. ಗಂಡಸರು ದೂರ ನಿಲ್ಲಿ. ನನ್ನನ್ನು ಮುಟ್ಟಬೇಡಿ. ನಾನು ಪವಿತ್ರಳಾಗಿದ್ದೇನೆ’ ಎಂದು ರಾಖಿ ಸಾವಂತ್​ ಗರಂ ಆಗಿದ್ದಾರೆ. ಅಲ್ಲಿದ್ದ ಕೆಲವು ಅಭಿಮಾನಿಗಳು ರಾಖಿಯ ವೇಷಭೂಷಣಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

‘ಗಂಡಸರು ನನ್ನನ್ನು ಮುಟ್ಟಬೇಡಿ, ನಾನು ಪವಿತ್ರಳಾಗಿದ್ದೇನೆ’: ಮೆಕ್ಕಾದಿಂದ ಬಂದು ಎಚ್ಚರಿಕೆ ನೀಡಿದ ರಾಖಿ ಸಾವಂತ್​
ರಾಖಿ ಸಾವಂತ್​
ಮದನ್​ ಕುಮಾರ್​
|

Updated on: Sep 03, 2023 | 7:18 AM

Share

ನಟಿ ರಾಖಿ ಸಾವಂತ್​ (Rakhi Sawant) ಅವರು ಪ್ರತಿ ದಿನವೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಪತಿ ಆದಿಲ್​ ಖಾನ್​ ದುರಾನಿ ಜೊತೆ ಅವರು ಕಿರಿಕ್​ ಮಾಡಿಕೊಂಡು ಹಲವು ತಿಂಗಳುಗಳು ಕಳೆದಿವೆ. ಆ ನೋವಲ್ಲೇ ಅವರು ಕಣ್ಣೀರು ಹಾಕುತ್ತಾ ಮೆಕ್ಕಾ (Mecca) ಮದೀನಾಗೆ ಭೇಟಿ ನೀಡಿ ಬಂದಿದ್ದಾರೆ. ಯಾತ್ರೆ ಮುಗಿಸಿ ಬಂದ ಬಳಿಕ ಅವರ ಮಾತಿನ ಧಾಟಿ ಬದಲಾಗಿದೆ. ವೇಷ-ಭೂಷಣ ಕೂಡ ಬದಲಾಗಿಹೋಗಿದೆ. ರಾಖಿ ಸಾವಂತ್​ ಈಗ ಮೈ ತುಂಬಾ ಬಟ್ಟೆ ಧರಿಸುತ್ತಿದ್ದಾರೆ. ‘ಗಂಡಸರು ಹತ್ತಿರಕ್ಕೆ ಬಂದರೆ ಹುಷಾರ್​’ ಎಂದು ಅವರು ಎಚ್ಚರಿಕೆ ನೀಡುತ್ತಿದ್ದಾರೆ. ಆ ರೀತಿ ಅವರು ಕೂಗಾಡಿದ ವಿಡಿಯೋ (Rakhi Sawant Viral Video) ವೈರಲ್​ ಆಗಿದೆ. ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ರಾಖಿ ಸಾವಂತ್​ ಎಲ್ಲಿಯೇ ಹೋದರೂ ಅಲ್ಲಿ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಅವರ ವಿಡಿಯೋ ಹಾಗೂ ಫೋಟೋಗೋಸ್ಕರ ನೂಕುನುಗ್ಗಲು ಮಾಡಲಾಗುತ್ತದೆ. ಅದನ್ನು ರಾಖಿ ಸಾವಂತ್​ ಎಂಜಾಯ್​ ಮಾಡುತ್ತಾರೆ ಕೂಡ. ಆದರೆ ಇತ್ತೀಚೆಗೆ ಅವರ ವರ್ತನೆಯಲ್ಲಿ ಬದಲಾವಣೆ ಕಾಣಿಸಿದೆ. ತಮ್ಮ ಫೋಟೋ ಕ್ಲಿಕ್ಕಿಸಲು ಬಂದ ಪಾಪರಾಜಿಗಳು ಮತ್ತು ಪುರುಷ ಅಭಿಮಾನಿಗಳನ್ನು ಕಂಡು ರಾಖಿ ಸಾವಂತ್​ ಕೂಗಾಡಿದ್ದಾರೆ. ಮೆಕ್ಕಾ ಮದೀನಾಗೆ ಹೋಗಿ ಬಂದ ಬಳಿಕ ಅವರಲ್ಲಿ ಆಗಿರುವ ಈ ಬದಲಾವಣೆ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ.

ರಾಖಿ ಸಾವಂತ್ ವೈರಲ್​ ವಿಡಿಯೋ:

ಇತ್ತೀಚೆಗೆ ರಾಖಿ ಸಾವಂತ್​ ಅವರು ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ‘ನಾನು ಮೆಕ್ಕಾ ಮದೀನಾಗೆ ಹೋಗಿ ಬಂದಿದ್ದೇನೆ. ಗಂಡಸರು ದೂರ ನಿಲ್ಲಿ. ನನ್ನನ್ನು ಮುಟ್ಟಬೇಡಿ. ನಾನು ಪವಿತ್ರಳಾಗಿದ್ದೇನೆ’ ಎಂದು ರಾಖಿ ಸಾವಂತ್​ ಗರಂ ಆಗಿದ್ದಾರೆ. ಅಲ್ಲಿದ್ದ ಕೆಲವು ಅಭಿಮಾನಿಗಳು ರಾಖಿಯ ವೇಷಭೂಷಣಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ‘ನಾನು ಸೌದಿಯವಳ ರೀತಿ ಕಾಣ್ತೀನಾ’ ಎಂದು ರಾಖಿ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಉತ್ತರಿಸಿದ ಅಭಿಮಾನಿಯೊಬ್ಬರು, ‘ಇಲ್ಲ.. ದುಬೈ ಮಹಿಳೆ ರೀತಿ ಕಾಣುತ್ತಿದ್ದೀರಿ’ ಎಂದಿದ್ದಾರೆ. ‘ರೇಖಾ ರೀತಿ ಅಲ್ಲ.. ಶೇಖಾ ರೀತಿ ಕಾಣುತ್ತಿದ್ದೇನೆ’ ಎಂದು ರಾಖಿ ಸಾವಂತ್​ ಅವರು ತಮ್ಮನ್ನು ತಾವು ಹೊಗಳಿಕೊಂಡಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಇವರು ರಾಖಿ ಸಾವಂತ್​ ಅಲ್ಲ, ಫಾತಿಮಾ: ದಿಢೀರನೇ ಹೆಸರು ಬದಲಾಯಿಸಿಕೊಂಡ ನಟಿ

ಚಿತ್ರರಂಗದಲ್ಲಿ ರಾಖಿ ಸಾವಂತ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ವೈಯಕ್ತಿಕ ಜೀವನದ ಕಾರಣಕ್ಕೆ ಅವರು ಆಗಾಗ ಸುದ್ದಿ ಆಗುತ್ತಾರೆ. ಮೈಸೂರು ಮೂಲದ ಆದಿಲ್​ ಖಾನ್​ ದುರಾನಿ ಜೊತೆ ನಡೆದಿದ್ದ ಅವರ ಮದುವೆಯು ಈಗ ಮುರಿದು ಬಿದ್ದಿದೆ. ಶೀಘ್ರದಲ್ಲೇ ಅವರು ವಿಚ್ಛೇದನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಪತಿಯಿಂದ ದೂರಾಗಿದ್ದರೂ ಕೂಡ ರಾಖಿ ಸಾವಂತ್​ ಅವರು ಸದ್ಯಕ್ಕೆ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು