ದೀಪಿಕಾ ಪಡುಕೋಣೆ ಮಗುವಿಗಾಗಿ ದುಬೈನಲ್ಲಿ ಶಾಪಿಂಗ್ ಮಾಡಿ ಟ್ರೋಲ್ ಆದ ರಾಖಿ ಸಾವಂತ್

‘ನಾನು ಆಂಟಿ ಆದೆ’ ಎಂದು ರಾಖಿ ಸಾವಂತ್​ ಖುಷಿಪಟ್ಟಿದ್ದಾರೆ. ದೀಪಿಕಾ ಪಡುಕೋಣೆ ಪುತ್ರಿಗಾಗಿ ದುಬೈನಲ್ಲಿ ರಾಖಿ ಸಾವಂತ್​ ಶಾಪಿಂಗ್​ ಮಾಡಿದ್ದಾರೆ. ಗೊಂಬೆ ಮುಂತಾದ ವಸ್ತುಗಳನ್ನು ಖರೀದಿಸಿ ವಿಡಿಯೋ ಹಂಚಿಕೊಂಡಿದ್ದಾರೆ. ಇದೆಲ್ಲ ಪ್ರಚಾರದ ಗಿಮಿಕ್ ಎಂದು ಕೆಲವು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಒಂದಷ್ಟು ಪಾಸಿಟಿವ್​ ಕಮೆಂಟ್​ಗಳು ಕೂಡ ಬರುತ್ತಿವೆ.

ದೀಪಿಕಾ ಪಡುಕೋಣೆ ಮಗುವಿಗಾಗಿ ದುಬೈನಲ್ಲಿ ಶಾಪಿಂಗ್ ಮಾಡಿ ಟ್ರೋಲ್ ಆದ ರಾಖಿ ಸಾವಂತ್
ರಾಖಿ ಸಾವಂತ್​
Follow us
|

Updated on: Sep 10, 2024 | 7:10 PM

ನಟಿ ದೀಪಿಕಾ ಪಡುಕೋಣೆ ಅವರು ತಾಯಿಯಾದ ಸುದ್ದಿ ತಿಳಿದು ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಖುಷಿ ಆಗಿದೆ. ಸೆಪ್ಟೆಂಬರ್​ 8ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಕೇಶ್ ಅಂಬಾನಿ ಅವರು ಆಸ್ಪತ್ರೆಗೆ ತೆರಳಿ ತಾಯಿ-ಮಗುವನ್ನು ನೋಡಿಬಂದಿದ್ದಾರೆ. ರಣವೀರ್​ ಸಿಂಗ್​ ಮತ್ತು ದೀಪಿಕಾ ಪಡುಕೋಣೆ ದಂಪತಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಟ್ರವರ್ಸಿ ಕ್ವೀನ್​ ರಾಖಿ ಸಾವಂತ್​ ಕೂಡ ಪ್ರಚಾರ ಪಡೆಯಲು ಪ್ರಯತ್ನಿಸಿದ್ದಾರೆ.

ಸದ್ಯಕ್ಕೆ ರಾಖಿ ಸಾವಂತ್​ ಅವರು ದುಬೈನಲ್ಲಿ ಇದ್ದಾರೆ. ದೀಪಿಕಾ ಪಡುಕೋಣೆ ಅವರಿಗೆ ಹೆಣ್ಣು ಮಗು ಜನಿಸಿದ್ದಕ್ಕಾಗಿ ರಾಖಿ ಸಖತ್​ ಖುಷಿಪಟ್ಟಿದ್ದಾರೆ. ದುಬೈನಿಂದಲೇ ಅವರು ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅವರು ಈ ವಿಡಿಯೋ ಅಪ್​ಲೋಡ್ ಮಾಡಿದ್ದಾರೆ. ದುಬೈನ ಮಾಲ್​ವೊಂದಕ್ಕೆ ತೆರಳಿ ರಾಖಿ ಸಾವಂತ್​ ಅವರು ಒಂದಷ್ಟು ಆಟಿಕೆ ವಸ್ತುಗಳನ್ನು ಖರೀದಿಸಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಅಪಘಾತ; ಕ್ಷಣಿಕ ಜೀವನದ ಬಗ್ಗೆ ಮಾತನಾಡಿದ ‘ಪುಷ್ಪ 2’ ನಟಿ

ದೀಪಿಕಾ ಪಡುಕೋಣೆಯ ಮಗುವಿಗಾಗಿ ರಾಖಿ ಸಾವಂತ್​ ಅವರು ಗೊಂಬೆ, ಚೇರ್​ ಮುಂತಾದ ವಸ್ತುಗಳನ್ನು ಖರೀದಿಸಿದ್ದಾರೆ. ‘ದೀಪಿಕಾ, ರಣವೀರ್​ ಸಿಂಗ್​.. ನಾನು ಆಂಟಿ ಆದೆ. ದೀಪಿಕಾ ಪಡುಕೋಣೆ ನಿಮಗೆ ನೆನಪಿದೆಯೇ? ನಾವಿಬ್ಬರೂ ಒಟ್ಟಿಗೆ ಡ್ಯಾನ್ಸ್ ಕ್ಲಾಸ್​ಗೆ ಹೋಗಿದ್ದೆವು. ಇಬ್ಬರೂ ಒಟ್ಟಿಗೆ ವೃತ್ತಿ ಜೀವನ ಶುರು ಮಾಡಿದ್ದೆವು. ನೀವು ದೊಡ್ಡ ಸ್ಟಾರ್​ ಆದ್ರಿ, ಹೆಂಡತಿ ಆದ್ರಿ. ಈಗ ತಾಯಿಯೂ ಆಗಿದ್ದೀರಿ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ.

View this post on Instagram

A post shared by Filmy Ape (@filmyape)

ಈ ವಿಡಿಯೋ ನೋಡಿದ ಕೆಲವು ನೆಟ್ಟಿಗರು ಸಖತ್​ ಟ್ರೋಲ್​ ಮಾಡಿದ್ದಾರೆ. ‘ದೀಪಿಕಾ ಪಡುಕೋಣೆಗೆ ಮಗು ಜನಿಸಿದ್ದಕ್ಕೆ ರಾಖಿ ಸಾವಂತ್​ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ’ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ‘ದಯವಿಟ್ಟು ನೀನು ದೂರದಿಂದಲೇ ವಿಶ್​ ಮಾಡು. ಮನೆಗೆ ಬರಲೇಬೇಡ ಅಂತ ದೀಪಿಕಾ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರಬಹುದು’ ಎಂದು ಕೂಡ ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ಇನ್ನು ಕೆಲವರು ರಾಖಿ ಸಾವಂತ್​ ಪರ ನಿಂತಿದ್ದಾರೆ. ‘ರಾಖಿ ಸಾವಂತ್​ ಮನಸ್ಸು ದೊಡ್ಡದು. ಅವರು ಎಲ್ಲರಿಗೂ ಪ್ರೀತಿ ನೀಡುತ್ತಾರೆ. ಆದರೆ ಅವರಿಗೆ ನಿಜವಾದ ಪ್ರೀತಿ ಸಿಗುತ್ತಿಲ್ಲ. ಅವರನ್ನು ಯಾರೂ ಅರ್ಥ ಮಾಡಿಕೊಳ್ಳುತ್ತಿಲ್ಲ’ ಎಂಬ ಕಮೆಂಟ್​ ಕೂಡ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ