AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಬಂದಿದೆ ಎಂದು ಹೆಲ್ಮೆಟ್ ಧರಿಸಿ ಓಡಾಡಿದ ರಾಖಿ ಸಾವಂತ್​; ನಾಟಕ ನಿಲ್ಲಿಸಿ ಎಂದ ಫ್ಯಾನ್ಸ್

Rakhi Sawant: ಈ ಪ್ರಕರಣಕ್ಕೂ ರಾಖಿ ಸಾವಂತ್​ಗೂ ಯಾವುದೇ ಸಂಬಂಧ ಇಲ್ಲ. ಹೀಗಿದ್ದರೂ ತಮಗೆ ಬೆದರಿಕೆ ಬರುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಕೊಲೆ ಬೆದರಿಕೆ ಬಂದಿದೆ ಎಂದು ಹೆಲ್ಮೆಟ್ ಧರಿಸಿ ಓಡಾಡಿದ ರಾಖಿ ಸಾವಂತ್​; ನಾಟಕ ನಿಲ್ಲಿಸಿ ಎಂದ ಫ್ಯಾನ್ಸ್
ರಾಖಿ ಸಾವಂತ್
ರಾಜೇಶ್ ದುಗ್ಗುಮನೆ
|

Updated on: Apr 21, 2023 | 2:42 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan)​ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಅವರನ್ನು ಹತ್ಯೆ ಮಾಡುವುದಾಗಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ರಾಖಿ ಸಾವಂತ್ ತಮಗೂ ಬೆದರಿಕೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ‘ಸಲ್ಮಾನ್ ಖಾನ್ ಪ್ರಕರಣದಿಂದ ದೂರ ಇರು’ ಎಂದು ಇ-ಮೇಲ್ ಮೂಲಕ ನನಗೆ ಬೆದರಿಸಿದ್ದಾರೆ ಎಂಬುದು ರಾಖಿ ಆರೋಪ. ಈಗ ರಾಖಿ ಸಾವಂತ್ ಹೆಲ್ಮೆಟ್ ಹಾಕಿಕೊಂಡು ತಿರುಗಾಡುತ್ತಿದ್ದಾರೆ. ಅವರ ನಾಟಕ ನೋಡಿ ಅನೇಕರಿಗೆ ಸಿಟ್ಟು ಬಂದಿದೆ.

ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡುತ್ತೇವೆ ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಹೇಳೋಕೆ ಒಂದು ಕಾರಣ ಇದೆ. ಬಿಷ್ಣೋಯ್ ಸಮುದಾದಯವರು ಪೂಜಿಸುವ ಕೃಷ್ಣಮೃಗವನ್ನು ಸಲ್ಮಾನ್​ ಹತ್ಯೆ ಮಾಡಿದರು ಎನ್ನುವ ಸಿಟ್ಟು ಅವರಿಗೆ ಇದೆ. ಆದರೆ, ಈ ಪ್ರಕರಣಕ್ಕೂ ರಾಖಿ ಸಾವಂತ್​ಗೂ ಯಾವುದೇ ಸಂಬಂಧ ಇಲ್ಲ. ಹೀಗಿದ್ದರೂ ತಮಗೆ ಬೆದರಿಕೆ ಬರುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ರಾಖಿ ಸಾವಂತ್ ಹೇಳುವ ಪ್ರಕಾರ ಸಲ್ಮಾನ್ ಖಾನ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇದೆಯಂತೆ. ಅವರ ಪರವಾಗಿ ಮಾತನಾಡಿದ್ದಕ್ಕೆ ತಮಗೆ ಬೆದರಿಕೆ ಬಂದಿದೆ ಅನ್ನೋದು ರಾಖಿ ಹೇಳಿಕೆ. ಇಂದು (ಏಪ್ರಿಲ್ 21) ರಾಖಿ ಹೆಲ್ಮೆಟ್ ಧರಿಸಿ ಬಂದಿದ್ದಾರೆ. ತಮ್ಮ ರಕ್ಷೆಗೆ ಇದನ್ನು ಧರಿಸಿರುವುದಾಗಿ ಅವರು ಹೇಳಿದ್ದಾರೆ.

‘ನಾನು ನನ್ನ ಮುಖವನ್ನು ಮುಚ್ಚಿಟ್ಟುಕೊಳ್ಳಬೇಕು. ಅದಕ್ಕೆ ಹ್ಯಾಮ್ಲೆಟ್ (ಹೆಲ್ಮೆಟ್) ಧರಿಸಿ ಬಂದಿದ್ದೀನಿ’ ಎಂದು ಹುಚ್ಚುಹುಚ್ಚಾಗಿ ಆಡಿದ್ದಾರೆ. ಅವರ ನಾಟಕ ನೋಡಿದ ಅನೇಕರು ಸಿಟ್ಟಿನಿಂದ ಕಮೆಂಟ್ ಹಾಕಿದ್ದಾರೆ. ‘ನಾಟಕ ನಿಲ್ಲಿಸು ತಾಯಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಅದು ಹ್ಯಾಮ್ಲೆಟ್ ಅಲ್ಲ ಹೆಲ್ಮೆಟ್’ ಎಂದು ರಾಖಿಯನ್ನು ತಿದ್ದಿದ್ದಾರೆ.

ಇದನ್ನೂ ಓದಿ: Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು

ರಾಖಿ ಸಾವಂತ್ ಹಾಗೂ ಸಲ್ಮಾನ್ ಖಾನ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಲು ಕಾರಣ ಬಿಗ್ ಬಾಸ್. ಇವರು ಬಿಗ್​ ಬಾಸ್​ಗೆ ಸ್ಪರ್ಧಿ ಆಗಿ ಬಂದಿದ್ದರು. ಈ ವೇಳೆ ಸಲ್ಲು ಜೊತೆ ಅವರಿಗೆ ಫ್ರೆಂಡ್​ಶಿಪ್ ಬೆಳೆದಿದೆ. ರಾಖಿ ಸಾವಂತ್ ತಾಯಿ ಅನಾರೋಗ್ಯಕ್ಕೆ ಒಳಗಾದಾಗ ಸಲ್ಮಾನ್ ಖಾನ್ ಆರ್ಥಿಕವಾಗಿ ಸಹಾಯ ಮಾಡಿದ್ದರು. ರಾಖಿ ಸಾವಂತ್ ಪ್ರಕಾರ ಅವರ ತಾಯಿ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಸಲ್ಮಾನ್ ಖಾನ್ ಅವರು 50 ಲಕ್ಷ ರೂಪಾಯಿ ನೀಡಿದ್ದರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್