AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಬಂದಿದೆ ಎಂದು ಹೆಲ್ಮೆಟ್ ಧರಿಸಿ ಓಡಾಡಿದ ರಾಖಿ ಸಾವಂತ್​; ನಾಟಕ ನಿಲ್ಲಿಸಿ ಎಂದ ಫ್ಯಾನ್ಸ್

Rakhi Sawant: ಈ ಪ್ರಕರಣಕ್ಕೂ ರಾಖಿ ಸಾವಂತ್​ಗೂ ಯಾವುದೇ ಸಂಬಂಧ ಇಲ್ಲ. ಹೀಗಿದ್ದರೂ ತಮಗೆ ಬೆದರಿಕೆ ಬರುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಕೊಲೆ ಬೆದರಿಕೆ ಬಂದಿದೆ ಎಂದು ಹೆಲ್ಮೆಟ್ ಧರಿಸಿ ಓಡಾಡಿದ ರಾಖಿ ಸಾವಂತ್​; ನಾಟಕ ನಿಲ್ಲಿಸಿ ಎಂದ ಫ್ಯಾನ್ಸ್
ರಾಖಿ ಸಾವಂತ್
Follow us
ರಾಜೇಶ್ ದುಗ್ಗುಮನೆ
|

Updated on: Apr 21, 2023 | 2:42 PM

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan)​ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಅವರನ್ನು ಹತ್ಯೆ ಮಾಡುವುದಾಗಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ರಾಖಿ ಸಾವಂತ್ ತಮಗೂ ಬೆದರಿಕೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ‘ಸಲ್ಮಾನ್ ಖಾನ್ ಪ್ರಕರಣದಿಂದ ದೂರ ಇರು’ ಎಂದು ಇ-ಮೇಲ್ ಮೂಲಕ ನನಗೆ ಬೆದರಿಸಿದ್ದಾರೆ ಎಂಬುದು ರಾಖಿ ಆರೋಪ. ಈಗ ರಾಖಿ ಸಾವಂತ್ ಹೆಲ್ಮೆಟ್ ಹಾಕಿಕೊಂಡು ತಿರುಗಾಡುತ್ತಿದ್ದಾರೆ. ಅವರ ನಾಟಕ ನೋಡಿ ಅನೇಕರಿಗೆ ಸಿಟ್ಟು ಬಂದಿದೆ.

ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡುತ್ತೇವೆ ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಹೇಳೋಕೆ ಒಂದು ಕಾರಣ ಇದೆ. ಬಿಷ್ಣೋಯ್ ಸಮುದಾದಯವರು ಪೂಜಿಸುವ ಕೃಷ್ಣಮೃಗವನ್ನು ಸಲ್ಮಾನ್​ ಹತ್ಯೆ ಮಾಡಿದರು ಎನ್ನುವ ಸಿಟ್ಟು ಅವರಿಗೆ ಇದೆ. ಆದರೆ, ಈ ಪ್ರಕರಣಕ್ಕೂ ರಾಖಿ ಸಾವಂತ್​ಗೂ ಯಾವುದೇ ಸಂಬಂಧ ಇಲ್ಲ. ಹೀಗಿದ್ದರೂ ತಮಗೆ ಬೆದರಿಕೆ ಬರುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ರಾಖಿ ಸಾವಂತ್ ಹೇಳುವ ಪ್ರಕಾರ ಸಲ್ಮಾನ್ ಖಾನ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇದೆಯಂತೆ. ಅವರ ಪರವಾಗಿ ಮಾತನಾಡಿದ್ದಕ್ಕೆ ತಮಗೆ ಬೆದರಿಕೆ ಬಂದಿದೆ ಅನ್ನೋದು ರಾಖಿ ಹೇಳಿಕೆ. ಇಂದು (ಏಪ್ರಿಲ್ 21) ರಾಖಿ ಹೆಲ್ಮೆಟ್ ಧರಿಸಿ ಬಂದಿದ್ದಾರೆ. ತಮ್ಮ ರಕ್ಷೆಗೆ ಇದನ್ನು ಧರಿಸಿರುವುದಾಗಿ ಅವರು ಹೇಳಿದ್ದಾರೆ.

‘ನಾನು ನನ್ನ ಮುಖವನ್ನು ಮುಚ್ಚಿಟ್ಟುಕೊಳ್ಳಬೇಕು. ಅದಕ್ಕೆ ಹ್ಯಾಮ್ಲೆಟ್ (ಹೆಲ್ಮೆಟ್) ಧರಿಸಿ ಬಂದಿದ್ದೀನಿ’ ಎಂದು ಹುಚ್ಚುಹುಚ್ಚಾಗಿ ಆಡಿದ್ದಾರೆ. ಅವರ ನಾಟಕ ನೋಡಿದ ಅನೇಕರು ಸಿಟ್ಟಿನಿಂದ ಕಮೆಂಟ್ ಹಾಕಿದ್ದಾರೆ. ‘ನಾಟಕ ನಿಲ್ಲಿಸು ತಾಯಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಅದು ಹ್ಯಾಮ್ಲೆಟ್ ಅಲ್ಲ ಹೆಲ್ಮೆಟ್’ ಎಂದು ರಾಖಿಯನ್ನು ತಿದ್ದಿದ್ದಾರೆ.

ಇದನ್ನೂ ಓದಿ: Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು

ರಾಖಿ ಸಾವಂತ್ ಹಾಗೂ ಸಲ್ಮಾನ್ ಖಾನ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಲು ಕಾರಣ ಬಿಗ್ ಬಾಸ್. ಇವರು ಬಿಗ್​ ಬಾಸ್​ಗೆ ಸ್ಪರ್ಧಿ ಆಗಿ ಬಂದಿದ್ದರು. ಈ ವೇಳೆ ಸಲ್ಲು ಜೊತೆ ಅವರಿಗೆ ಫ್ರೆಂಡ್​ಶಿಪ್ ಬೆಳೆದಿದೆ. ರಾಖಿ ಸಾವಂತ್ ತಾಯಿ ಅನಾರೋಗ್ಯಕ್ಕೆ ಒಳಗಾದಾಗ ಸಲ್ಮಾನ್ ಖಾನ್ ಆರ್ಥಿಕವಾಗಿ ಸಹಾಯ ಮಾಡಿದ್ದರು. ರಾಖಿ ಸಾವಂತ್ ಪ್ರಕಾರ ಅವರ ತಾಯಿ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಸಲ್ಮಾನ್ ಖಾನ್ ಅವರು 50 ಲಕ್ಷ ರೂಪಾಯಿ ನೀಡಿದ್ದರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್