AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​

Rakhi Sawant | Adil Khan: ನಟಿ ರಾಖಿ ಸಾವಂತ್​ ಜೊತೆಗಿನ ಮದುವೆ ವಿಷಯವನ್ನು ಆದಿಲ್​ ಖಾನ್​ ಇಷ್ಟು ದಿನಗಳ ಕಾಲ ಮುಚ್ಚಿಟ್ಟಿದ್ದರು. ಆದರೆ ಈಗ ಅವರು ಎಲ್ಲವನ್ನೂ ಒಪ್ಪಿಕೊಂಡಿದ್ದಾರೆ.

Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​
ರಾಖಿ ಸಾವಂತ್, ಆದಿಲ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Jan 16, 2023 | 4:24 PM

Share

ನಟಿ ರಾಖಿ ಸಾವಂತ್​ (Rakhi Sawant) ಅವರು ವೈಯಕ್ತಿಕ ಜೀವನದಲ್ಲಿ ಮಾಡಿಕೊಂಡ ಎಡವಟ್ಟುಗಳು ಒಂದೆರಡಲ್ಲ. ಈ ಹಿಂದೆ ಅವರು ರಿತೇಶ್​ ಎಂಬುವವರ ಜೊತೆ ಮದುವೆ ಆಗಿದ್ದರು. ಆದರೆ ಮೊದಲನೇ ಪತ್ನಿಗೆ ರಿತೇಶ್​ ವಿಚ್ಛೇದನ ನೀಡಿಲ್ಲದ ಕಾರಣ ರಾಖಿ ಜೊತೆಗಿನ ಅವರ ವಿವಾಹ (Rakhi Sawant Wedding) ಮಾನ್ಯವಾಗಲಿಲ್ಲ. ಕಳೆದ ವರ್ಷ ಆದಿಲ್​ ಖಾನ್​ ಜೊತೆ ರಾಖಿ ಸಾವಂತ್​ ಅವರು ಸೀಕ್ರೆಟ್​ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆ ವಿಚಾರ ಇತ್ತೀಚೆಗೆ ಬಯಲಾಗಿತ್ತು. ಆದರೆ ಮದುವೆ ಆಗಿದ್ದನ್ನು ಒಪ್ಪಿಕೊಳ್ಳಲು ಆದಿಲ್​ ಖಾನ್​ (Adil Khan) ಹಿಂದೇಟು ಹಾಕಿದ್ದರು. ಅದು ರಾಖಿಗೆ ಸಾಕಷ್ಟು ನೋವುಂಟು ಮಾಡಿತ್ತು. ಲೇಟಸ್ಟ್​ ನ್ಯೂಸ್​ ಏನೆಂದರೆ ಆದಿಲ್​ ಖಾನ್​ ಅವರು ರಾಖಿ ಜೊತೆಗೆ ಮದುವೆ ಆಗಿರುವುದಾಗಿ ಈಗ ಒಪ್ಪಿಕೊಂಡಿದ್ದಾರೆ. ಆ ಕುರಿತು ಅವರು ಮಾಡಿರುವ ಸೋಶಿಯಲ್​ ಮೀಡಿಯಾ ಪೋಸ್ಟ್​ ವೈರಲ್​ ಆಗಿದೆ.

ಎಲ್ಲವನ್ನೂ ಒಪ್ಪಿಕೊಂಡ ಆದಿಲ್​ ಖಾನ್​:

‘ಕೊನೆಗೂ ಇಲ್ಲೊಂದು ಅನೌನ್ಸ್​ಮೆಂಟ್​ ಇದೆ. ರಾಖಿಯನ್ನು ಮದುವೆ ಆಗಿಲ್ಲ ಅಂತ ನಾನು ಎಂದಿಗೂ ಹೇಳಿಲ್ಲ. ಕೆಲವು ವಿಷಯಗಳನ್ನು ನಿಭಾಯಿಸಬೇಕಿತ್ತು. ಹಾಗಾಗಿ ಮೌನವಾಗಿದ್ದೆ. ಮದುವೆಯ ಶುಭಾಶಯಗಳು ರಾಖಿ’ ಎಂದು ಆದಿಲ್​ ಖಾನ್​ ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಕಮೆಂಟ್​ ಮಾಡಿರುವ ರಾಖಿ ಸಾವಂತ್​ ಅವರು, ‘ಧನ್ಯವಾದಗಳು ಜಾನ್​.. ಲಾಟ್ಸ್​ ಆಫ್​ ಲವ್​’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಗಂಡ ನನ್ನನ್ನು ಉಪಯೋಗಿಸಿಕೊಂಡ’; ಕಣ್ಣೀರು ಹಾಕಿ ಎಲ್ಲರ ಎದುರು ದುಃಖ ತೋಡಿಕೊಂಡ ರಾಖಿ ಸಾವಂತ್​

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ಕಣ್ಣೀರು ಹಾಕಿದ್ದ ರಾಖಿ ಸಾವಂತ್​:

ರಾಖಿ ಸಾವಂತ್​ ಅವರ ಮದುವೆಯ ಫೋಟೋಗಳು ವೈರಲ್​ ಆಗಿದ್ದರೂ ಕೂಡ ಆದಿಲ್​ ಮೌನವಾಗಿದ್ದರು. ಇದು ರಾಖಿಯ ಆತಂಕಕ್ಕೆ ಕಾರಣ ಆಗಿತ್ತು. ಈ ಮದುವೆಯೂ ದಾರಿ ತಪ್ಪಿ ಹೋಗುತ್ತದೆ ಎಂಬ ಭಯದಲ್ಲಿ ಅವರು ಕಣ್ಣೀರು ಹಾಕಿದ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು. ಆದರೆ ಈಗ ಅವರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: Rakhi Sawant: ರಾಖಿ ಸಾವಂತ್​ ಜೀವನ ಹಾಳು ಮಾಡಲು ಮಾಜಿ ಗಂಡನ ಪ್ಲ್ಯಾನ್​; ಪೊಲೀಸ್​ ಠಾಣೆ ಎದುರು ಬಿಕ್ಕಿ ಬಿಕ್ಕಿ ಅತ್ತ ನಟಿ

ಇಸ್ಲಾಂ ಧರ್ಮಕ್ಕೆ ಮತಾಂತರ ಆದ್ರಾ ರಾಕಿ ಸಾವಂತ್​?

ಪ್ರಿಯಕರ ಆದಿಲ್​ ಖಾನ್​ ಅವರ ಜೊತೆ 2022ರಲ್ಲಿ ತಮ್ಮ ಮದುವೆ ನೆರವೇರಿತ್ತು ಎಂಬ ವಿಷಯವನ್ನು ರಾಖಿ ಸಾವಂತ್​ ಇತ್ತೀಚೆಗೆ ಬಾಯಿಬಿಟ್ಟರು. ಅದಕ್ಕೆ ಸಾಕ್ಷಿ ಎಂಬಂತೆ ಕೆಲವು ಫೋಟೋಗಳನ್ನು ಅವರು ಹಂಚಿಕೊಂಡರು. ರಾಖಿ ಸಾವಂತ್​ ಮತ್ತು ಆದಿಲ್​ ಖಾನ್​ ಅವರ ಮದುವೆ ನೋಂದಣಿ ಪತ್ರ ವೈರಲ್​ ಆಗಿದೆ. ಅದರಲ್ಲಿ ‘ರಾಖಿ ಸಾವಂತ್​ ಫಾತಿಮಾ’ ಎಂದು ರಾಖಿ ಸಹಿ ಮಾಡಿರುವುದು ಎಲ್ಲರ ಕಣ್ಣು ಕುಕ್ಕುತ್ತಿದೆ. ಮದುವೆ ನೋಂದಣಿ ಪತ್ರದಲ್ಲಿ ಹೆಸರು ಬದಲಾಗಿರುವುದರಿಂದ ರಾಖಿ ಸಾವಂತ್​ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!