AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ನಿರ್ದೇಶಕನ ಜೊತೆ ರಣವೀರ್​ ಸಿಂಗ್​ ಸಿನಿಮಾ ಮಾಡಲ್ಲ; ಸಿಕ್ತು ಸ್ಪಷ್ಟನೆ

‘ಹನುಮಾನ್​’ ಚಿತ್ರದ ನಿರ್ದೇಶಕ ಪ್ರಶಾಂತ್​ ವರ್ಮಾ ಮತ್ತು ಬಾಲಿವುಡ್​ ನಟ ರಣವೀರ್​ ಸಿಂಗ್​ ಅವರು ಜೊತೆಯಾಗಿ ‘ರಾಕ್ಷಸ್​’ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಈ ಬಗ್ಗೆ ಪ್ರಶಾಂತ್​ ವರ್ಮಾ ಮತ್ತು ರಣವೀರ್​ ಸಿಂಗ್​ ಕಡೆಯಿಂದಲೇ ಅಧಿಕೃತವಾಗಿ ಸ್ಪಷ್ಟನೆ ಸಿಕ್ಕಿದೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆ.

‘ಹನುಮಾನ್​’ ನಿರ್ದೇಶಕನ ಜೊತೆ ರಣವೀರ್​ ಸಿಂಗ್​ ಸಿನಿಮಾ ಮಾಡಲ್ಲ; ಸಿಕ್ತು ಸ್ಪಷ್ಟನೆ
ಪ್ರಶಾಂತ್​ ವರ್ಮಾ, ರಣವೀರ್​ ಸಿಂಗ್​
ಮದನ್​ ಕುಮಾರ್​
|

Updated on: May 30, 2024 | 10:34 PM

Share

ಈ ವರ್ಷ ಸೂಪರ್​ ಹಿಟ್​ ಆದ ‘ಹನುಮಾನ್​’ ಸಿನಿಮಾದ ಮೂಲಕ ನಿರ್ದೇಶಕ ಪ್ರಶಾಂತ್​ ವರ್ಮಾ (Prasanth Varma) ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿತು. ಅಲ್ಲದೇ ಬೇರೆ ಬೇರೆ ಭಾಷೆಯಲ್ಲೂ ಅವರಿಗೆ ಡಿಮ್ಯಾಂಡ್​ ಹೆಚ್ಚಾಯಿತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಬಾಲಿವುಡ್​ ನಟ ರಣವೀರ್​ ಸಿಂಗ್​ ಜೊತೆ ಪ್ರಶಾಂತ್​ ವರ್ಮಾ ಸಿನಿಮಾ ಮಾಡಬೇಕಿತ್ತು. ‘ರಾಕ್ಷಸ್​’ (Rakshas) ಎಂಬ ಹೊಸ ಸಿನಿಮಾ ಸಲುವಾಗಿ ಅವರಿಬ್ಬರು ಹಲವು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂದು ಕೂಡ ಸುದ್ದಿ ಆಗಿತ್ತು. ಆದರೆ ಈಗ ಆ ಸಿನಿಮಾ ನಿಂತುಹೋಗಿದೆ. ಆ ಬಗ್ಗೆ ಸ್ವತಃ ಪ್ರಶಾಂತ್​ ವರ್ಮಾ ಮತ್ತು ರಣವೀರ್​ ಸಿಂಗ್​ (Ranveer Singh) ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಬೆಂಕಿ ಇಲ್ಲದೇ ಹೊಗೆ ಆಡಲ್ಲ ಎಂಬ ಮಾತನ್ನು ಗಾಸಿಪ್​ ಮಂದಿ ಬಲವಾಗಿ ನಂಬುತ್ತಾರೆ. ರಣವೀರ್​ ಸಿಂಗ್​ ಮತ್ತು ಪ್ರಶಾಂತ್​ ವರ್ಮಾ ಅವರು ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ ಹಾಗೂ ಆ ಸಿನಿಮಾಗೆ ‘ರಾಕ್ಷಸ್​’ ಎಂದು ಹೆಸರು ಇಡಲಾಗಿದೆ ಎಂದು ಗಾಸಿಪ್​ ಹರಡಿತ್ತು. ನಂತರ ಪ್ರಶಾಂತ್​ ವರ್ಮಾ ಮತ್ತು ರಣವೀರ್​ ಸಿಂಗ್​ ನಡುವೆ ಕಿರಿಕ್​ ಆಗಿದ್ದರಿಂದ ಆ ಸಿನಿಮಾ ನಿಂತು ಹೋಯಿತು ಎಂಬ ಗುಸುಗುಸು ಕೂಡ ಕೇಳಿಬಂದಿತ್ತು. ಆ ಸುದ್ದಿ ನಿಜವಾಗಿದೆ.

ಈ ಬಗ್ಗೆ ರಣವೀರ್​ ಸಿಂಗ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ಪ್ರಶಾಂತ್​ ವರ್ಮಾ ಅವರು ವಿಶೇಷವಾದ ಪ್ರತಿಭಾವಂತ. ನಾವು ಭೇಟಿಯಾಗಿ ಸಿನಿಮಾ ಬಗ್ಗೆ ಮಾತನಾಡಿದ್ದೆವು. ಭವಿಷ್ಯದಲ್ಲಿ ನಾವು ಜೊತೆಯಾಗಿ ಸಿನಿಮಾ ಮಾಡುತ್ತೇವೆ ಎಂಬ ನಂಬಿಕೆ ಇದೆ’ ಎಂದು ರಣವೀರ್​ ಸಿಂಗ್​ ಹೇಳಿದ್ದಾರೆ. ಆ ಮೂಲಕ ಸದ್ಯಕ್ಕೆ ‘ರಾಕ್ಷಸ್​’ ಸಿನಿಮಾ ಸೆಟ್ಟೇರುವುದಿಲ್ಲ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: 3 ಪ್ರತ್ಯೇಕ ಒಟಿಟಿಯಲ್ಲಿ ‘ಹನುಮಾನ್​’ ಸಿನಿಮಾ; ಯಾವುದರಲ್ಲಿದೆ ಕನ್ನಡ ವರ್ಷನ್​?

ಅದೇ ರೀತಿ, ಪ್ರಶಾಂತ್​ ವರ್ಮಾ ಕೂಡ ಪ್ರತಿಕ್ರಿಯಿಸಿದ್ದಾರೆ. ‘ರಣವೀರ್ ಸಿಂಗ್​ ಅವರ ಎನರ್ಜಿ ಮತ್ತು ಪ್ರತಿಭೆ ತುಂಬ ಅಪರೂಪದ್ದು. ಮುಂದಿನ ದಿನಗಳಲ್ಲಿ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ’ ಎಂದು ಪ್ರಶಾಂತ್ ವರ್ಮಾ ಹೇಳಿದ್ದಾರೆ. ‘ರಾಕ್ಷಸ್’ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಬೇಕಿತ್ತು. ‘ಕೆಲವೊಂದು ವಿಚಾರಗಳಿಗೆ ಈಗ ಸಮಯ ಕೂಡಿಬಂದಿರುವುದಿಲ್ಲ’ ಎನ್ನುವ ಮೂಲಕ ಈ ಸಂಸ್ಥೆ ಕೂಡ ಸ್ಪಷ್ಟನೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ