Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಿಲ್ಲಿ’ ನಟಿ ರಕುಲ್​ ಪ್ರೀತ್​ ಸಿಂಗ್​ ಮದುವೆ ದಿನಾಂಕ ನಿಗದಿ; ಇಲ್ಲಿದೆ ವರನ ಬಗ್ಗೆ ಮಾಹಿತಿ

ಗೋವಾದಲ್ಲಿ ರಕುಲ್​ ಪ್ರೀತ್​ ಸಿಂಗ್​ ಮತ್ತು ಜಾಕಿ ಭಗ್ನಾನಿ ಮದುವೆ ಆಗಲಿದ್ದಾರೆ. ವಿವಾಹಕ್ಕೆ ಕೆಲವೇ ಕೆಲವು ಅತಿಥಿಗಳನ್ನು ಮಾತ್ರ ಆಹ್ವಾನಿಸಲಾಗುವುದು. ಮದುವೆ ಸಲುವಾಗಿ ಈಗಾಗಲೇ ಅವರಿಬ್ಬರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದುಕೊಂಡಿದ್ದಾರೆ. ಗೆಳೆಯರ ಜೊತೆ ಬ್ಯಾಚುಲರ್​ ಪಾರ್ಟಿ ಮಾಡುತ್ತ ಕಾಲ ಕಳೆಯುತ್ತಿದ್ದಾರೆ.

‘ಗಿಲ್ಲಿ’ ನಟಿ ರಕುಲ್​ ಪ್ರೀತ್​ ಸಿಂಗ್​ ಮದುವೆ ದಿನಾಂಕ ನಿಗದಿ; ಇಲ್ಲಿದೆ ವರನ ಬಗ್ಗೆ ಮಾಹಿತಿ
ರಕುಲ್​ ಪ್ರೀತ್​ ಸಿಂಗ್​​, ಜಾಕಿ ಭಗ್ನಾನಿ
Follow us
ಮದನ್​ ಕುಮಾರ್​
|

Updated on: Jan 01, 2024 | 3:34 PM

ಖ್ಯಾತ ನಟಿ ರಕುಲ್ ಪ್ರೀತ್​ ಸಿಂಗ್​ (Rakul Preet Singh) ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಹೊಸ ವರ್ಷದ ಖುಷಿಯ ನಡುವೆ ನಟಿಯ ಬಗ್ಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಫೆಬ್ರವರಿ 22ರಂದು ಅವರು ಮದುವೆ (Rakul Preet Singh Marriage) ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಕನ್ನಡದ ‘ಗಿಲ್ಲಿ’ ಚಿತ್ರದಿಂದ ರಕುಲ್​ ಪ್ರೀತ್​ ಸಿಂಗ್​ ಅವರು ವೃತ್ತಿಜೀವನ ಆರಂಭಿಸಿದರು. ಆ ಬಳಿಕ ಅವರಿಗೆ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಸೃಷ್ಟಿ ಆಯಿತು. ನಿರ್ಮಾಪಕ ಜಾಕಿ ಭಗ್ನಾನಿ (Jackky Bhagnani) ಜೊತೆ ರಕುಲ್​ ಪ್ರೀತ್​ ಸಿಂಗ್ ವೈವಾಹಿಕ ಜೀವನ ಆರಂಭಿಸಲು ಸಜ್ಜಾಗಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಜಾಕಿ ಭಗ್ನಾನಿ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ಫಾಲ್ತು’, ‘ಅಜಬ್​ ಗಜಬ್​ ಲವ್​’, ‘ವೆಲ್​ಕಮ್​ ಟು ಕರಾಚಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ಸರಬ್ಜಿತ್​’, ‘ಮಿಷನ್​ ರಾಣಿಗಂಜ್​’, ‘ಕೂಲಿ ನಂ.1’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಅವರ ಜೊತೆ ರಕುಲ್​ ಪ್ರೀತ್​ ಸಿಂಗ್​ಗೆ ಪ್ರೀತಿ ಚಿಗುರಿದೆ.

ಹಲವು ತಿಂಗಳಿಂದ ರಕುಲ್​ ಪ್ರೀತ್​ ಸಿಂಗ್​ ಮತ್ತು ಜಾಕಿ ಭಗ್ನಾನಿ ಅವರು ಒಟ್ಟಾಗಿ ತಿರುಗಾಡುತ್ತಿದ್ದಾರೆ. ಆ ಬಳಿಕ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಪ್ರೇಮ್​ ಕಹಾನಿಯ ವಿಚಾರವನ್ನು ಜಗಜ್ಜಾಹೀರು ಮಾಡಿದರು. ಈಗ ಅವರಿಬ್ಬರು ಮದುವೆಗೆ ತಯಾರಾಗಿದ್ದಾರೆ. ಆ ಬಗ್ಗೆ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: ನಟಿ ರಕುಲ್ ಪ್ರೀತ್​ ಸಿಂಗ್​ರ ಬಾಯ್​ಫ್ರೆಂಡ್ ಜಾಕಿ ಬಗ್ನಾನಿ ಬಗ್ಗೆ ನಿಮಗೆಷ್ಟು ಗೊತ್ತು?

ಗೋವಾದಲ್ಲಿ ರಕುಲ್​ ಪ್ರೀತ್​ ಸಿಂಗ್​ ಮತ್ತು ಜಾಕಿ ಭಗ್ನಾನಿ ಮದುವೆ ಆಗಲಿದ್ದಾರೆ. ಈ ಸೆಲೆಬ್ರಿಟಿ ವಿವಾಹಕ್ಕೆ ಕೆಲವೇ ಕೆಲವು ಅತಿಥಿಗಳನ್ನು ಮಾತ್ರ ಆಹ್ವಾನಿಸಲಾಗುವುದು. ಮದುವೆ ಸಲುವಾಗಿ ಈಗಾಗಲೇ ಇವರಿಬ್ಬರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದುಕೊಂಡಿದ್ದಾರೆ. ಗೆಳೆಯರ ಜೊತೆ ಬ್ಯಾಚುಲರ್​ ಪಾರ್ಟಿ ಮಾಡುತ್ತ ಕಾಲ ಕಳೆಯುತ್ತಿದ್ದಾರೆ. ಮದುವೆ ದಿನಾಂಕ ಮತ್ತು ಸ್ಥಳದ ಬಗ್ಗೆ ಅವರಿಂದಲೇ ಅಧಿಕೃತ ಹೇಳಿಕೆ ಹೊರಬೀಳುವುದು ಬಾಕಿ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!