AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

250 ಕೋಟಿ ರೂ. ಸಾಲದ ಸುಳಿಯಲ್ಲಿ ರಕುಲ್ ಪ್ರೀತ್ ಸಿಂಗ್ ಗಂಡ; ಆಸ್ತಿ ಮಾರಾಟ

ದೊಡ್ಡ ದೊಡ್ಡ ನಿರ್ಮಾಪಕರನ್ನು ಮದುವೆಯಾಗಿ ಖುಷಿಯಿಂದ ಸಂಸಾರ ಮಾಡುತ್ತಿರುವ ಅನೇಕ ನಟಿಯರು ಇದ್ದಾರೆ. ನಟಿ ರಕುಲ್​ ಪ್ರೀತ್​ ಸಿಂಗ್​ ಕೂಡ ಅದೇ ರೀತಿ ಲೆಕ್ಕಾಚಾರ ಆಗಿದ್ದರು ಎನಿಸುತ್ತದೆ. ಆದರೆ ಅವರನ್ನು ಮದುವೆ ಆಗಿರುವ ನಿರ್ಮಾಪಕ ಜಾಕಿ ಭಗ್ನಾನಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. 250 ಕೋಟಿ ರೂಪಾಯಿ ಸಾಲ ಆಗಿರುವುದರಿಂದ ಆಸ್ತಿ ಮಾರಿಕೊಂಡಿದ್ದಾರೆ!

250 ಕೋಟಿ ರೂ. ಸಾಲದ ಸುಳಿಯಲ್ಲಿ ರಕುಲ್ ಪ್ರೀತ್ ಸಿಂಗ್ ಗಂಡ; ಆಸ್ತಿ ಮಾರಾಟ
ಜಾಕಿ ಭಗ್ನಾನಿ, ರಕುಲ್​ ಪ್ರೀತ್​ ಸಿಂಗ್​
ಮದನ್​ ಕುಮಾರ್​
|

Updated on: Jun 23, 2024 | 10:50 PM

Share

ನಟಿ ರಕುಲ್ ಪ್ರೀತ್​ ಸಿಂಗ್​ (Rakul Preet Singh) ಅವರು ಈ ವರ್ಷ ಫೆಬ್ರವರಿಯಲ್ಲಿ ಬಾಲಿವುಡ್​ (Bollywood) ನಿರ್ಮಾಪಕ, ನಟ ಜಾಕಿ ಭಗ್ನಾನಿ ಅವರನ್ನು ಮದುವೆ ಆದರು. ಹಿಂದಿ ಚಿತ್ರರಂಗದಲ್ಲಿ ದೊಡ್ಡ ನಿರ್ಮಾಪಕ ಎನಿಸಿಕೊಂಡಿರುವ ಜಾಕಿ ಭಗ್ನಾನಿ ಅವರನ್ನು ಕೈ ಹಿಡಿದ ಬಳಿಕ ರಕುಲ್​ ಪ್ರೀತ್​ ಸಿಂಗ್​ ಜೀವನ ಸೆಟ್ಲ್​ ಆಯಿತು ಎಂದು ಎಲ್ಲರೂ ಮಾತನಾಡಿಕೊಂಡರು. ಆದರೆ ಈಗ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಬರೋಬ್ಬರಿ 250 ಕೋಟಿ ರೂಪಾಯಿ ಸಾಲದ ಸುಳಿಗೆ ಅವರು ಸಿಲುಕಿದ್ದಾರೆ. ಇದರಿಂದಾಗಿ ಜಾಕಿ ಭಗ್ನಾನಿ (Jackky Bhagnani) ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿ ಬಂದಿದೆ.

ಜಾಕಿ ಭಗ್ನಾನಿ ಅವರು ‘ಪೂಜಾ ಎಂಟರ್​ಟೇನ್ಮೆಂಟ್​’ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಈ ಸಂಸ್ಥೆಯಿಂದ ಇತ್ತೀಚಿನ ವರ್ಷಗಳಲ್ಲಿ ನಿರ್ಮಾಣವಾದ ಸಿನಿಮಾಗಳೆಲ್ಲವೂ ಹೀನಾಯವಾಗಿ ಸೋತಿವೆ. ಈ ವರ್ಷ ತೆರೆಕಂಡ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ಬಂಡವಾಳ ಹೂಡಿದ್ದು ಕೂಡ ಇದೇ ಸಂಸ್ಥೆ. ಅಂದಾಜು 350 ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣವಾದ ಆ ಸಿನಿಮಾ ಫ್ಲಾಪ್​ ಆಯಿತು. ಹಾಗಾಗಿ ನಿರ್ಮಾಪಕರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು.

ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಅನೇಕ ಉದ್ಯೋಗಿಗಳಿಗೆ ಜಾಕಿ ಭಗ್ನಾನಿ ಅವರು ಹಲವು ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ಅವರ ಒಟ್ಟು ಸಾಲು 250 ಕೋಟಿ ರೂಪಾಯಿ ತಲುಪಿದೆ ಎನ್ನಲಾಗಿದೆ. ಹಾಗಾಗಿ ಅವರು ‘ಪೂಜಾ ಎಂಟರ್​ಟೇನ್ಮೆಂಟ್​’ ಆಫೀಸ್​ ಇದ್ದ ಕಟ್ಟಡವನ್ನು ಮಾರಾಟ ಮಾಡಿದ್ದಾರೆ. 7 ಮಹಡಿಗಳನ್ನು ಹೊಂದಿದ್ದ ಕಟ್ಟಡ ಮಾರಾಟ ಆಗಿದೆ. ಅದನ್ನು ಯಾರು ಖರೀದಿಸಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗ ಆಗಿಲ್ಲ. ಆ ಕಟ್ಟಡವನ್ನು ನೆಲಸಮ ಮಾಡಿ, ಅದೇ ಜಾಗದಲ್ಲಿ ಅಪಾರ್ಟ್​ಮೆಂಟ್​ ಕಟ್ಟಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಮದುವೆ ಬಳಿಕ ರಕುಲ್​ ಪ್ರೀತ್​ ಸಿಂಗ್ ಗ್ಲಾಮರಸ್​ ಫೋಟೋಶೂಟ್​

‘ಪೂಜಾ ಎಂಟರ್​ಟೇನ್ಮೆಂಟ್​’ ಸಂಸ್ಥೆಯು ಭಾರಿ ನಷ್ಟ ಅನುಭವಿಸಿದ್ದು, ಶೇಕಡ 80ರಷ್ಟು ಕೆಲಸಗಾರರನ್ನು ಮನೆಗೆ ಕಳಿಸಲಾಗಿದೆ. ಬಹುತೇಕ ಯಾರಿಗೂ ಸಂಬಳ ನೀಡಿಲ್ಲ ಎನ್ನಲಾಗಿದೆ. ಹಾಗಾಗಿ ಕೋಪಗೊಂಡ ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಈ ಕಂಪನಿ ಬಗ್ಗೆ, ನಿರ್ಮಾಪಕರಾದ ಜಾಕಿ ಭಗ್ನಾನಿ ಹಾಗೂ ವಶು ಭಗ್ನಾನಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ನಟಿ ರಕುಲ್​ ಪ್ರೀತ್​ ಸಿಂಗ್​ ಅವರ ಜೀವನದಲ್ಲಿ ಆರ್ಧಿಕ ಸಂಕಷ್ಟ ಉಂಟಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ