AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

520 ಗಿಡ ನೆಟ್ಟು ಪುಣ್ಯದ ಕೆಲಸ ಮಾಡಿದ ನಟಿ ರಕುಲ್​ ಪ್ರೀತ್​ ಸಿಂಗ್​

ರಕುಲ್​ ಪ್ರೀತ್​ ಸಿಂಗ್​ ಮತ್ತು ಜಾಕಿ ಭಗ್ನಾನಿ ಅವರು 520 ಗಿಡಗಳನ್ನು ನೆಟ್ಟಿದ್ದಾರೆ. ಆ ಮೂಲಕ ಅವರು ಪರಿಸರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಅವರು ನಿಖರವಾಗಿ 520 ಗಿಡಗಳನ್ನು ನೆಡಲು ಕೂಡ ಒಂದು ಕಾರಣ ಇದೆ. ತಮ್ಮ ಮದುವೆಗೆ ಬಂದ ಪ್ರತಿಯೊಬ್ಬ ಅತಿಥಿಗಳ ಹೆಸರಿನಲ್ಲಿ ತಲಾ ಒಂದು ಗಿಡವನ್ನು ನೆಡಲಾಗಿದೆ. ಅವರ ಈ ಕಾರ್ಯವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

520 ಗಿಡ ನೆಟ್ಟು ಪುಣ್ಯದ ಕೆಲಸ ಮಾಡಿದ ನಟಿ ರಕುಲ್​ ಪ್ರೀತ್​ ಸಿಂಗ್​
ರಕುಲ್​ ಪ್ರೀತ್​ ಸಿಂಗ್​
ಮದನ್​ ಕುಮಾರ್​
|

Updated on: Mar 07, 2024 | 6:26 PM

Share

ಜನಪ್ರಿಯ ನಟಿ ರಕುಲ್​ ಪ್ರೀತ್​ ಸಿಂಗ್​ (Rakul Preet Singh) ಅವರು ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಫೆಬ್ರವರಿ 21ರಂದು ನಟ-ನಿರ್ಮಾಪಕ ಜಾಕಿ ಭಗ್ನಾನಿ (Jackky Bhagnani) ಜೊತೆ ಅವರ ಮದುವೆ ನಡೆಯಿತು. ಗೋವಾದಲ್ಲಿ ನಡೆದ ಈ ವಿವಾಹ ಸಮಾರಂಭಕ್ಕೆ ನೂರಾರು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವಿಶೇಷ ಏನೆಂದರೆ, ತಮ್ಮ ಮದುವೆಗೆ ಬಂದ ಪ್ರತಿ ಅತಿಥಿಯ ಹೆಸರಿನಲ್ಲಿ ರಕುಲ್​ ಪ್ರೀತ್​ ಸಿಂಗ್​ ಹಾಗೂ ಜಾಕಿ ಭಗ್ನಾನಿ ಅವರು ಒಂದೊಂದು ಗಿಡ ನೆಟ್ಟಿದ್ದಾರೆ. ಆ ಮೂಲಕ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ. ಈ ದಂಪತಿ ಮಾಡಿದ ಪುಣ್ಯದ ಕೆಲಸವನ್ನು ಅಭಿಮಾನಿಗಳು ಶ್ಲಾಘಿಸಿದ್ದಾರೆ.

ರಕುಲ್​ ಪ್ರೀತ್​ ಸಿಂಗ್​ ಮತ್ತು ಜಾಕಿ ಭಗ್ನಾನಿ ಅವರು ಬಹುಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಗೋವಾದಲ್ಲಿ ಫೆ.21ರಂದು ಸಪ್ತಪದಿ ತುಳಿಯುವ ಮೂಲಕ ತಮ್ಮ ಪ್ರೀತಿಯನ್ನು ಅವರು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋದರು. ಈ ಜೋಡಿಯ ಮದುವೆಗೆ 520 ಮಂದಿ ಸಾಕ್ಷಿ ಆಗಿದ್ದರು. ಹಾಗಾಗಿ ತಮ್ಮ ಮದುವೆ ಬಂದ 520 ಜನರ ಹೆಸರಿನಲ್ಲಿ ಅವರು ಸಸಿ ನೆಟ್ಟಿದ್ದಾರೆ.

ಅಷ್ಟಕ್ಕೂ ರಕುಲ್​ ಪ್ರೀತ್​ ಸಿಂಗ್​ ಹಾಗೂ ಜಾಕಿ ಭಗ್ನಾನಿ ಅವರು ಈ ರೀತಿ ಮಾಡಿದ್ದು ಯಾಕೆ? ಅದರ ಹಿಂದೆ ಮಹತ್ವವಾದ ಕಾರಣ ಇದೆ. ದೊಡ್ಡ ದೊಡ್ಡ ಸಮಾರಂಭಗಳು ನಡೆದಾಗ ಪರಿಸರಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಹಾನಿ ಆಗುತ್ತದೆ. ಸೆಲೆಬ್ರಿಟಿಗಳ ಮದುವೆ ಎಂದರೆ ಅದು ಅದ್ದೂರಿ ಆಗಿರುತ್ತದೆ. ಈ ಸಮಾರಂಭದಿಂದ ಪರಿಸರಕ್ಕೆ ಆದ ಹಾನಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಕುಲ್​ ಪ್ರೀತ್​ ಸಿಂಗ್​ ಮತ್ತು ಜಾಕಿ ಭಗ್ನಾನಿ ಅವರು 520 ಗಿಡಗಳನ್ನು ನೆಟ್ಟಿದ್ದಾರೆ.

ಇದನ್ನೂ ಓದಿ: ರಕುಲ್ ಪ್ರೀತ್ ಸಿಂಗ್ ಧರಸಿರುವ ಈ ಹೊಳೆಯುವ ಉಡುಪಿನ ಬೆಲೆ ಎಷ್ಟು ಲಕ್ಷ ಅಂದಾಜಿಸಿ

ಗಿಡ ನೆಟ್ಟ ಬಳಿಕ ಅದರ ಪ್ರಮಾಣ ಪತ್ರವನ್ನು ಪ್ರತಿ ಅತಿಥಿಗೂ ಕಳಿಸಿಕೊಡಲಾಗಿದೆ. ಈ ದಂಪತಿಯ ವಿವಾಹಕ್ಕೆ ಬಂದಿದ್ದ ನಟಿ ಪ್ರಗ್ಯಾ ಜೈಸ್ವಾಲ್​ ಅವರಿಗೂ ಈ ಪ್ರಮಾಣ ಪತ್ರ ತಲುಪಿದೆ. ಅದನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡು ರಕುಲ್​ ಪ್ರೀತ್​ ಸಿಂಗ್​ ಹಾಗೂ ಜಾಕಿ ಭಗ್ನಾನಿ ಅವರನ್ನು ಹೊಗಳಿದ್ದಾರೆ. ‘ಎಂಥಾ ಸುಂದರವಾದ ಮತ್ತು ಸ್ಫೂರ್ತಿದಾಯಕ ಕೆಲಸ’ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಪ್ರಮಾಣಪತ್ರ ವೈರಲ್​ ಆಗಿದೆ. ಇದೇ ರೀತಿ ಎಲ್ಲರೂ ಪರಿಸರದ ಕಾಳಜಿ ತೋರಿಸಲಿ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಜೂಹಿ ಚಾವ್ಲಾ ಅವರು ತಮ್ಮ ಮಗಳ ಹುಟ್ಟುಹಬ್ಬದ ದಿನ 1000 ಗಿಡಗಳನ್ನು ನೆಟ್ಟಿದ್ದು ಕೂಡ ಸುದ್ದಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ