AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಂಟ ನೋವು ಮಾಡಿಕೊಂಡ ರಕುಲ್ ಪ್ರೀತ್ ಸಿಂಗ್; ಪರಿಸ್ಥಿತಿ ಗಂಭೀರ: ಕಾರಣ ಏನು?

ರಕುಲ್ ಪ್ರೀತ್ ಸಿಂಗ್ ಅವರು ಅತಿಯಾದ ಭಾರ ಎತ್ತಲು ಪ್ರಯತ್ನಿಸಿ ಸೊಂಟದ ನೋವು ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ರಕುಲ್ ಅವರು ಹಾಸಿಗೆ ಹಿಡಿದಿದ್ದಾರೆ. ಸದ್ಯಕ್ಕಂತೂ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಕೇಳಿಬಂದಿದೆ. ನೋವು ಕಾಣಿಸಿಕೊಂಡ ನಂತರವೂ ಅವರು ನಿರ್ಲಕ್ಷ್ಯ ಮಾಡಿದ್ದರಿಂದ ಸಮಸ್ಯೆ ಉಲ್ಬಣ ಆಗಿದೆ.

ಸೊಂಟ ನೋವು ಮಾಡಿಕೊಂಡ ರಕುಲ್ ಪ್ರೀತ್ ಸಿಂಗ್; ಪರಿಸ್ಥಿತಿ ಗಂಭೀರ: ಕಾರಣ ಏನು?
ರಕುಲ್ ಪ್ರೀತ್ ಸಿಂಗ್
ಮದನ್​ ಕುಮಾರ್​
|

Updated on: Oct 16, 2024 | 4:56 PM

Share

ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ಒಂದು ಬ್ಯಾಡ್​ ನ್ಯೂಸ್​ ಕೇಳಿಬಂದಿದೆ. ಸಿನಿಮಾಗಳಲ್ಲಿ ನಟಿಸುತ್ತಾ, ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಾ, ಸೋಶಿಯಲ್ ಮೀಡಿಯಾದಲ್ಲಿ ಮಿರಿಮಿರಿ ಮಿಂಚುತ್ತಿದ್ದ ಅವರು ಈಗ ಹಾಸಿಗೆ ಹಿಡಿಯುವಂತಾಗಿದೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಸೊಂಟ ನೋವು ಶುರುವಾಗಿದೆ. ಅದಕ್ಕೆ ಕಾರಣ ಆಗಿರುವುದು ಅವರೇ ಮಾಡಿಕೊಂಡ ಒಂದು ಎಡವಟ್ಟು. ಹೌದು, ಅತಿಯಾದ ಭಾರ ಎತ್ತಲು ಹೋಗಿ ರಕುಲ್ ಪ್ರೀತ್ ಸಿಂಗ್​ ಅವರು ಸೊಂಟ ನೋವು ಮಾಡಿಕೊಂಡಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ವರದಿಗಳ ಪ್ರಕಾರ, ರಕುಲ್ ಪ್ರೀತ್ ಸಿಂಗ್ ಅವರು ಹಾಸಿಗೆ ಹಿಡಿದು ಕೆಲವು ದಿನಗಳು ಕಳೆದಿವೆ. ಅಕ್ಟೋಬರ್​ 5ರಂದು ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿದ್ದರು. ಡೆಡ್​ಲಿಫ್ಟ್ ಮಾಡುವಾಗ ಅವರು 80 ಕೆಜಿ ಭಾರ ಎತ್ತಲು ಹೋಗಿದ್ದಾರೆ. ಆ ಸಂದರ್ಭದಲ್ಲಿ ಅವರು ಸೊಂಟಕ್ಕೆ ಬೆಲ್ಡ್ ಹಾಕಿರಲಿಲ್ಲ. ಈ ಎಡವಟ್ಟಿನಿಂದಾಗಿ ಅವರಿಗೆ ತೊಂದರೆ ಆಗಿದೆ. ಇದು ಅವರೇ ಮಾಡಿಕೊಂಡ ಎಡವಟ್ಟು.

80 ಕೆಜಿ ಭಾರ ಎತ್ತಲು ಹೋದಾಗ ರಕುಲ್ ಪ್ರೀತ್ ಸಿಂಗ್ ಅವರಿಗೆ ನೋವು ಕಾಣಿಸಿಕೊಂಡಿತು. ಆಗಲಾದರೂ ಅವರು ಎಚ್ಚೆತ್ತುಕೊಳ್ಳಬಹುದಿತ್ತು. ಆದರೆ ಅವರು ಅತಿ ಉತ್ಸಾಹದಲ್ಲಿ ವರ್ಕೌಟ್​ ಮುಂದುವರಿಸಿದರು. ಸೊಂಟದ ನೋವಿನ ನಡುವೆಯೇ ಅವರು ಕಸರತ್ತು ಮುಂದುವರಿಸಿದ್ದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಡ್ರಗ್ಸ್​ ಕೇಸ್​ನಲ್ಲಿ ನಟಿ ರಕುಲ್​ ಸಹೋದರ ಅಮನ್​ ಪ್ರೀತ್​ ಸಿಂಗ್​ ಬಂಧನ

ಸೊಂಟದ ನೋವು ಕಾಣಿಸಿಕೊಂಡಿದ್ದರೂ ಕೂಡ ರಕುಲ್ ಪ್ರೀತ್ ಸಿಂಗ್ ಅವರು ಎರಡು ದಿನ ಶೂಟಿಂಗ್​ಗೆ ಹೋದರು. ಇದರಿಂದಾಗಿ ಅವರಿಗೆ ನೋವು ಜಾಸ್ತಿ ಆಯಿತು. ಅಕ್ಟೋಬರ್​ 10ರಂದು ರಕುಲ್ ಪ್ರೀತ್ ಸಿಂಗ್ ಜನ್ಮದಿನ. ಅಂದಿನ ಪಾರ್ಟಿಯಲ್ಲಿ ಕೂಡ ಅವರು ಭಾಗಿ ಆಗಿದ್ದರು. ಆಗ ಅವರಿಗೆ ಸೊಂಟ ನೋವು ಜಾಸ್ತಿ ಆಯಿತು. ಅವರ ಬಿಪಿ ಕಡಿಮೆ ಆಯಿತು. ಅತಿಯಾಗಿ ಬೆವರಲು ಆರಂಭಿಸಿದರು.

ಕೂಡಲೇ ವೈದ್ಯರನ್ನು ಸಂಪರ್ಕಿಸಿದಾಗ ದೊಡ್ಡ ಮಟ್ಟದಲ್ಲಿ ಸಮಸ್ಯೆ ಎದುರಾಗಿರುವುದು ತಿಳಿಯಿತು. ಸದ್ಯಕ್ಕೆ ಅವರ ಸೊಂಟದ ನೋವಿನ ಸಮಸ್ಯೆ ಬಹಳ ಗಂಭೀರವಾಗಿದೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಕಡೆಯಿಂದಲೇ ಹೆಲ್ತ್ ಅಪ್​ಡೇಟ್ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ