AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಹಾ ಹೆಸರಲ್ಲಿ ಆನೆ ದತ್ತು ಪಡೆದು ಆಲಿಯಾ ಮನೆಗೇ ಕಳುಹಿಸಿದ್ದ ರಾಮ್ ಚರಣ್

‘ನಾನು, ತಾರಕ್ (ಜೂನಿಯರ್ ಎನ್​ಟಿಆರ್​) ಹಾಗೂ ರಾಮ್ ಚರಣ್ ಸೆಟ್​ನಲ್ಲಿ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಬೇರೆ ಬೇರೆ ರೀತಿಯ ಶೆಡ್ಯೂಲ್ ಇರುತ್ತಿತ್ತು. ಆದರೆ, ಪ್ರಮೋಷನ್ ವೇಳೆ ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು’ ಎಂದು ‘ಆರ್​ಆರ್​ಆರ್’ ಸಿನಿಮಾದ ಘಟನೆ ಬಗ್ಗೆ ಮಾತನಾಡಿದ್ದಾರೆ ಆಲಿಯಾ ಭಟ್.

ರಹಾ ಹೆಸರಲ್ಲಿ ಆನೆ ದತ್ತು ಪಡೆದು ಆಲಿಯಾ ಮನೆಗೇ ಕಳುಹಿಸಿದ್ದ ರಾಮ್ ಚರಣ್
ರಹಾ ಹೆಸರಲ್ಲಿ ಆನೆ ದತ್ತು ಪಡೆದು ಆಲಿಯಾ ಮನೆಗೇ ಕಳುಹಿಸಿದ್ದ ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Oct 12, 2024 | 9:05 AM

Share

ಆಲಿಯಾ ಭಟ್ ಅವರು ‘ಆರ್​​ಆರ್​ಆರ್’ ಚಿತ್ರದಲ್ಲಿ ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್ ಜೊತೆ ತೆರೆಹಂಚಿಕೊಂಡಿದ್ದರು. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ರಹಾ ಹೆಸರಲ್ಲಿ ಒಂದು ಆನೆಯನ್ನು ರಾಮ್ ಚರಣ್ ದತ್ತು ಪಡೆದಿದ್ದಾರೆ. ಈ ವಿಚಾರ ಕೇಳಿ ಅನೇಕರು ಖುಷಿಪಟ್ಟಿದ್ದಾರೆ. ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾಗೆ ಅನೇಕ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಖುಷಿಯಲ್ಲಿ ಆಲಿಯಾ ಈ ವಿಚಾರ ರಿವೀಲ್ ಮಾಡಿದ್ದಾರೆ.

‘ನಾನು, ತಾರಕ್ (ಜೂನಿಯರ್ ಎನ್​ಟಿಆರ್​) ಹಾಗೂ ರಾಮ್ ಚರಣ್ ಸೆಟ್​ನಲ್ಲಿ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಬೇರೆ ಬೇರೆ ರೀತಿಯ ಶೆಡ್ಯೂಲ್ ಇರುತ್ತಿತ್ತು. ಆದರೆ, ಪ್ರಮೋಷನ್ ವೇಳೆ ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು’ ಎಂದು ‘ಆರ್​ಆರ್​ಆರ್’ ಸಿನಿಮಾದ ಘಟನೆ ಬಗ್ಗೆ ಮಾತನಾಡಿದ್ದಾರೆ ಆಲಿಯಾ ಭಟ್.

‘ಇದೊಂದು ಫನ್​ ಸ್ಟೋರಿ. ರಹಾ ಜನಿಸಿ ತಿಂಗಳಾಗಿತ್ತು. ನಾನು ವಾಕ್ ಮಾಡೋಣ ಎಂದು ಹೋದೆ. ಆಗ ಒಬ್ಬರು ಬಂದು ರಾಮ್ ಚರಣ್ ಆನೆ ಕಳುಹಿಸಿದ್ದಾರೆ ಎಂದರು. ನಾನು ಶಾಕ್ ಆದೆ. ಆನೆ ನಮ್ಮ ಮನೆಯ ಹತ್ತಿರ ಬರುತ್ತಿದೆ. ಅಂದರೆ ಏನು ಬೇಕಾದರೂ ಆಗಬಹುದು ಎಂದು ಯೋಚಿಸಿದೆ’ ಎಂಬುದಾಗಿ ವಿವರಿಸಿದ್ದಾರೆ ಆಲಿಯಾ ಭಟ್.

ರಾಮ್ ಚರಣ್ ಕಳುಹಿಸಿದ್ದು ನಿಜವಾದ ಆನೆ ಅಲ್ಲ. ರಹಾ ಹೆಸರಲ್ಲಿ ಆನೆಯನ್ನು ಅಡಾಪ್ಟ್ ಮಾಡಿಕೊಂಡ ಬಳಿಕ ಮರದ ಆನೆಯನ್ನು ಆಲಿಯಾ ಭಟ್ ಮನೆಗೆ ಕಳುಹಿಸಿದ್ದರು. ಇದಕ್ಕೆ ಎಲಿ ಎಂದು ಹೆಸರು ಕೊಡಲಾಗಿದೆ. ಈ ಆನೆ ಆಲಿಯಾ ಭಟ್ ಅವರ ಮನೆಯ ಊಟದ ಟೇಬಲ್​ ಹತ್ತಿರವೇ ಇಡಲಾಗಿದೆ. ಈ ಆನೆಯನ್ನು ರಹಾ ಸಾಕಷ್ಟು ಇಟಷ್ಟಪಟ್ಟಿದ್ದಾರಂತೆ.

ಇದನ್ನೂ ಓದಿ: ಮತ್ತೊಂದು ತೆಲುಗು ಸಿನಿಮಾದಲ್ಲಿ ಆಲಿಯಾ ಭಟ್? ನಿರ್ದೇಶಕ ಯಾರು?

ರಹಾಗೆ ಇನ್ನೂ ಎರಡು ವರ್ಷ ತುಂಬಿಲ್ಲ. ಆಗಲೇ ಆಕೆಗೆ ಸಾಕಷ್ಟು ಪ್ರೀತಿ ಸಿಗುತ್ತಿದೆ. ರಹಾ ಅವರ ಫೋಟೋ ಹಾಗೂ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಾ ಇರುತ್ತವೆ. ಆಲಿಯಾ ಹಲವು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ
ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ