AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಹಾ ಹೆಸರಲ್ಲಿ ಆನೆ ದತ್ತು ಪಡೆದು ಆಲಿಯಾ ಮನೆಗೇ ಕಳುಹಿಸಿದ್ದ ರಾಮ್ ಚರಣ್

‘ನಾನು, ತಾರಕ್ (ಜೂನಿಯರ್ ಎನ್​ಟಿಆರ್​) ಹಾಗೂ ರಾಮ್ ಚರಣ್ ಸೆಟ್​ನಲ್ಲಿ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಬೇರೆ ಬೇರೆ ರೀತಿಯ ಶೆಡ್ಯೂಲ್ ಇರುತ್ತಿತ್ತು. ಆದರೆ, ಪ್ರಮೋಷನ್ ವೇಳೆ ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು’ ಎಂದು ‘ಆರ್​ಆರ್​ಆರ್’ ಸಿನಿಮಾದ ಘಟನೆ ಬಗ್ಗೆ ಮಾತನಾಡಿದ್ದಾರೆ ಆಲಿಯಾ ಭಟ್.

ರಹಾ ಹೆಸರಲ್ಲಿ ಆನೆ ದತ್ತು ಪಡೆದು ಆಲಿಯಾ ಮನೆಗೇ ಕಳುಹಿಸಿದ್ದ ರಾಮ್ ಚರಣ್
ರಹಾ ಹೆಸರಲ್ಲಿ ಆನೆ ದತ್ತು ಪಡೆದು ಆಲಿಯಾ ಮನೆಗೇ ಕಳುಹಿಸಿದ್ದ ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Oct 12, 2024 | 9:05 AM

Share

ಆಲಿಯಾ ಭಟ್ ಅವರು ‘ಆರ್​​ಆರ್​ಆರ್’ ಚಿತ್ರದಲ್ಲಿ ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್ ಜೊತೆ ತೆರೆಹಂಚಿಕೊಂಡಿದ್ದರು. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ರಹಾ ಹೆಸರಲ್ಲಿ ಒಂದು ಆನೆಯನ್ನು ರಾಮ್ ಚರಣ್ ದತ್ತು ಪಡೆದಿದ್ದಾರೆ. ಈ ವಿಚಾರ ಕೇಳಿ ಅನೇಕರು ಖುಷಿಪಟ್ಟಿದ್ದಾರೆ. ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾಗೆ ಅನೇಕ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಖುಷಿಯಲ್ಲಿ ಆಲಿಯಾ ಈ ವಿಚಾರ ರಿವೀಲ್ ಮಾಡಿದ್ದಾರೆ.

‘ನಾನು, ತಾರಕ್ (ಜೂನಿಯರ್ ಎನ್​ಟಿಆರ್​) ಹಾಗೂ ರಾಮ್ ಚರಣ್ ಸೆಟ್​ನಲ್ಲಿ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಬೇರೆ ಬೇರೆ ರೀತಿಯ ಶೆಡ್ಯೂಲ್ ಇರುತ್ತಿತ್ತು. ಆದರೆ, ಪ್ರಮೋಷನ್ ವೇಳೆ ನಮ್ಮ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು’ ಎಂದು ‘ಆರ್​ಆರ್​ಆರ್’ ಸಿನಿಮಾದ ಘಟನೆ ಬಗ್ಗೆ ಮಾತನಾಡಿದ್ದಾರೆ ಆಲಿಯಾ ಭಟ್.

‘ಇದೊಂದು ಫನ್​ ಸ್ಟೋರಿ. ರಹಾ ಜನಿಸಿ ತಿಂಗಳಾಗಿತ್ತು. ನಾನು ವಾಕ್ ಮಾಡೋಣ ಎಂದು ಹೋದೆ. ಆಗ ಒಬ್ಬರು ಬಂದು ರಾಮ್ ಚರಣ್ ಆನೆ ಕಳುಹಿಸಿದ್ದಾರೆ ಎಂದರು. ನಾನು ಶಾಕ್ ಆದೆ. ಆನೆ ನಮ್ಮ ಮನೆಯ ಹತ್ತಿರ ಬರುತ್ತಿದೆ. ಅಂದರೆ ಏನು ಬೇಕಾದರೂ ಆಗಬಹುದು ಎಂದು ಯೋಚಿಸಿದೆ’ ಎಂಬುದಾಗಿ ವಿವರಿಸಿದ್ದಾರೆ ಆಲಿಯಾ ಭಟ್.

ರಾಮ್ ಚರಣ್ ಕಳುಹಿಸಿದ್ದು ನಿಜವಾದ ಆನೆ ಅಲ್ಲ. ರಹಾ ಹೆಸರಲ್ಲಿ ಆನೆಯನ್ನು ಅಡಾಪ್ಟ್ ಮಾಡಿಕೊಂಡ ಬಳಿಕ ಮರದ ಆನೆಯನ್ನು ಆಲಿಯಾ ಭಟ್ ಮನೆಗೆ ಕಳುಹಿಸಿದ್ದರು. ಇದಕ್ಕೆ ಎಲಿ ಎಂದು ಹೆಸರು ಕೊಡಲಾಗಿದೆ. ಈ ಆನೆ ಆಲಿಯಾ ಭಟ್ ಅವರ ಮನೆಯ ಊಟದ ಟೇಬಲ್​ ಹತ್ತಿರವೇ ಇಡಲಾಗಿದೆ. ಈ ಆನೆಯನ್ನು ರಹಾ ಸಾಕಷ್ಟು ಇಟಷ್ಟಪಟ್ಟಿದ್ದಾರಂತೆ.

ಇದನ್ನೂ ಓದಿ: ಮತ್ತೊಂದು ತೆಲುಗು ಸಿನಿಮಾದಲ್ಲಿ ಆಲಿಯಾ ಭಟ್? ನಿರ್ದೇಶಕ ಯಾರು?

ರಹಾಗೆ ಇನ್ನೂ ಎರಡು ವರ್ಷ ತುಂಬಿಲ್ಲ. ಆಗಲೇ ಆಕೆಗೆ ಸಾಕಷ್ಟು ಪ್ರೀತಿ ಸಿಗುತ್ತಿದೆ. ರಹಾ ಅವರ ಫೋಟೋ ಹಾಗೂ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಾ ಇರುತ್ತವೆ. ಆಲಿಯಾ ಹಲವು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?