AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಮಲ್ಟಿಸ್ಟಾರರ್​ನಲ್ಲಿ ರಾಮ್ ಚರಣ್, ಈ ಬಾರಿ ಬಾಲಿವುಡ್ ನಟನೊಟ್ಟಿಗೆ ‘ನಾಟು-ನಾಟು’

Ram Charan: ಆರ್​ಆರ್​ಆರ್ ಮಲ್ಟಿಸ್ಟಾರರ್ ಸಿನಿಮಾದಲ್ಲಿ ನಟಿಸಿ ಗ್ಲೋಬಲ್ ಸ್ಟಾರ್ ಆದ ರಾಮ್ ಚರಣ್ ಈಗ ಮತ್ತೊಂದು ಮಲ್ಟಿಸ್ಟಾರರ್​​ಗೆ ಕೈ ಹಾಕಿದ್ದಾರೆ. ಸಿನಿಮಾದಲ್ಲಿ ಅವರು ಬಾಲಿವುಡ್ ನಟ-ನಟಿಯರ ಜೊತೆ ಕೈ ಜೋಡಿಸಿದ್ದಾರೆ.

ಮತ್ತೊಂದು ಮಲ್ಟಿಸ್ಟಾರರ್​ನಲ್ಲಿ ರಾಮ್ ಚರಣ್, ಈ ಬಾರಿ ಬಾಲಿವುಡ್ ನಟನೊಟ್ಟಿಗೆ 'ನಾಟು-ನಾಟು'
ರಾಮ್ ಚರಣ್
ಮಂಜುನಾಥ ಸಿ.
|

Updated on: Jul 02, 2023 | 10:05 PM

Share

ಆರ್​ಆರ್​ಆರ್ (RRR) ಸಿನಿಮಾ ಮೂಲಕ ರಾಮ್ ಚರಣ್ ತೇಜ (Ram Charan Teja) ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಆರ್​ಆರ್​ಆರ್ ಸಿನಿಮಾದಲ್ಲಿ ರಾಮ್ ಚರಣ್ ಹಾಗೂ ಜೂ ಎನ್​ಟಿಆರ್ (Jr NTR) ಅವರ ಜೋಡಿಯನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಆರ್​ಆರ್​ಆರ್​ ಸಿನಿಮಾ ಮೂಲಕ ರಾಮ್ ಚರಣ್ ಹಾಗೂ ಜೂ ಎನ್​ಟಿಆರ್ ಅಂಥಹಾ ದೊಡ್ಡ ಸ್ಟಾರ್​ ನಟರನ್ನು ಒಟ್ಟಿಗೆ ಕರೆತಂದು ಯಾರೊಬ್ಬರ ಅಭಿಮಾನಿಗಳಿಗೂ ನೋವಾಗದಂತೆ ಸಿನಿಮಾ ಮಾಡಬಹುದು ಎಂದು ರಾಜಮೌಳಿ ತೋರಿಸಿಕೊಟ್ಟಿದ್ದು, ಇದೀಗ ಹಲವು ಚಿತ್ರರಂಗಗಳಲ್ಲಿ ಮಲ್ಟಿಸ್ಟಾರರ್ (Multistarrer) ಸಿನಿಮಾಗಳು ತೆರೆಗೆ ಏರುತ್ತಿವೆ. ಇದರ ನಡುವೆ ಸ್ವತಃ ರಾಮ್​ ಚರಣ್ ಹೊಸ ಮಲ್ಟಿಸ್ಟಾರರ್ ಸಿನಿಮಾಕ್ಕೆ ಕೈ ಹಾಕಿದ್ದು ಈ ಬಾರಿ ಅವರಿಗೆ ಬಾಲಿವುಡ್​ ನಟರೊಬ್ಬರು ಸಾಥ್ ನೀಡಿದ್ದಾರೆ.

ಗ್ಲೋಬಲ್ ಸ್ಟಾರ್ ಆಗಿರುವ ರಾಮ್ ಚರಣ್ ಇದೀಗ ಮತ್ತೊಮ್ಮೆ ಬಾಲಿವುಡ್​ಗೆ ಹೋಗುತ್ತಿದ್ದು, ಬಾಲಿವುಡ್​ನ ಸ್ಟಾರ್ ನಟನೊಟ್ಟಿಗೆ ಮಲ್ಟಿಸ್ಟಾರರ್ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ನಟ ರಣ್ವೀರ್ ಸಿಂಗ್ ಹಾಗೂ ರಾಮ್ ಚರಣ್ ಒಟ್ಟಿಗೆ ಹಿಂದಿ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಭಾರಿ ಬಜೆಟ್​ನ ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ನಿರ್ಮಿಸಲಾಗುತ್ತಿದೆ. ಈ ಸಿನಿಮಾದಲ್ಲಿ ರಣ್ವೀರ್ ಸಿಂಗ್ ಪತ್ನಿ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ. ಅವರ ಜೊತೆಗೆ ನಟಿ ತ್ರಿಶಾ ಸಹ ಸಿನಿಮಾದ ನಾಯಕಿಯಾಗಿರಲಿದ್ದಾರೆ ಎನ್ನಲಾಗುತ್ತಿದೆ.

ಈ ಸಿನಿಮಾದ ಕುರಿತಾಗಿ ಸಣ್ಣ ವಿಡಿಯೋ ಸಹ ಈಗಾಗಲೇ ಬಿಡುಗಡೆ ಆಗಿದೆ. ವಿಡಿಯೋದಲ್ಲಿ ದೀಪಿಕಾ ಪಡುಕೋನೆ, ಪೊಲೀಸರ ಬಳಿ ಪತಿ ಕಳೆದು ಹೋಗಿರುವ ಬಗ್ಗೆ ದೂರು ನೀಡುತ್ತಿರುತ್ತಾಳೆ. ರಣ್ವೀರ್ ಸಿಂಗ್ ಯಾರೋ ದುಷ್ಟನನ್ನು ಫಾಲೋ ಮಾಡುತ್ತಾ ಹೋಗುತ್ತಿದ್ದಾರೆ. ಫ್ಯಾಮಿಲಿ ಮ್ಯಾನ್ ಸರಣಿಯ ಚೆಲ್ಲಮ್ ಸರ್, ಕಂಟ್ರೋಲ್ ರೂಂನಲ್ಲಿದ್ದು ಏಜೆಂಟ್​ ಅನ್ನು ಮಿಷನ್​ಗೆ ಕಳಿಸುತ್ತಿದ್ದಾರೆ. ರಾಮ್ ಚರಣ್ ಹಳದಿ ಬಣ್ಣದ ಶರ್ಟ್ ತೊಟ್ಟು ಯಾವುದೋ ಸಣ್ಣ ಗಲ್ಲಿಯೊಳಗೆ ಜನರ ಮಧ್ಯೆ ಯಾರನ್ನೋ ಹಿಡಿಯಲು ಓಡುತ್ತಿದ್ದಾರೆ. ನಟಿ ತ್ರಿಷಾ, ಪೊಲೀಸ್ ಠಾಣೆಗೆ ಬಂದಿದ್ದು ಪೊಲೀಸರ ಮಧ್ಯೆ ದಿಕ್ಕೇ ತೋಚದಂತಾಗಿದ್ದಾರೆ. ಕೊನೆಯಲ್ಲಿ ರಣ್ವೀರ್ ವ್ಯಕ್ತಿಯೊಬ್ಬನ ಕೊರಳು ಪಟ್ಟಿ ಹಿಡಿದು ಸತ್ಯ ಹೇಳುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ:ಮಗಳಿಗೆ ಕ್ಲಿನ್ ಕಾರಾ ಎಂದು ಹೆಸರಿಟ್ಟ ರಾಮ್ ಚರಣ್-ಉಪಾಸನಾ: ಹೆಸರಿನ ಅರ್ಥವೇನು?

ಈ ನಾಲ್ಕು ಸ್ಟಾರ್ ನಟ-ನಟಿಯರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಕ್ಕಾಗಿ ಒಂದಾಗಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಹೆಸರು ಶೋ ಮೀ ದಿ ಸೀಕ್ರೆಟ್ ಎಂದಾಗಿದೆ. ಆದರೆ ಇನ್ನು ಕೆಲವರು ಇದು ಸಿನಿಮಾ ಅಲ್ಲ ಬದಲಿಗೆ ಜಾಹೀರಾತು ಮಾತ್ರವೇ ಎಂದು ಸಹ ಹೇಳುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟೆ ಮಾಹಿತಿ ಹೊರಬೀಳಬೇಕಿದೆ. ಪ್ರಸ್ತುತ ವಿಡಿಯೋವನ್ನು ರಣ್ವೀರ್ ಸಿಂಗ್ ಸೇರಿದಂತೆ ಇನ್ನು ಕೆಲವರು ಹಂಚಿಕೊಂಡಿದ್ದಾರೆ.

ರಣ್ವೀರ್ ಸಿಂಗ್ ನಟಿಸಿರುವ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾವನ್ನು ಕರಣ್ ನಿರ್ದೇಶಿಸಿ ನಿರ್ಮಾಣ ಮಾಡಿದ್ದಾರೆ. ಆಲಿಯಾ ಭಟ್ ಈ ಸಿನಿಮಾದ ನಾಯಕಿ. ಇನ್ನು ರಾಮ್ ಚರಣ್ ಪ್ರಸ್ತುತ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಬಳಿಕ ಹಾಲಿವುಡ್ ಸಿನಿಮಾ ಒಂದರಲ್ಲಿ ರಾಮ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ದೀಪಿಕಾ ಪಡುಕೋಣೆ, ಹೃತಿಕ್ ಜೊತೆ ಫೈಟರ್, ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತ್ರಿಷಾ, ವಿಜಯ್ ಜೊತೆ ಲಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕೆಲವು ತೆಲುಗು ಹಾಗೂ ತಮಿಳು ಸಿನಿಮಗಳಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?