AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್, ಬಾಲಿವುಡ್ ನಿರ್ದೇಶಕನಿಂದ ಆಕನ್-ಕಟ್

Ram Charan: RRR ಸಿನಿಮಾದ ಭಾರಿ ಯಶಸ್ಸಿನ ಬಳಿಕ ರಾಮ್ ಚರಣ್ ನಟಿಸಿರುವ ಎರಡು ಸಿನಿಮಾಗಳು ಪ್ಲಾಪ್ ಆಗಿವೆ. ಹಾಗಿದ್ದರೂ ಸಹ ರಾಮ್ ಚರಣ್​ಗೆ ಕೆಲ ಒಳ್ಳೆ ಸಿನಿಮಾ ಅವಕಾಶಗಳು ಅರಸಿ ಬರುತ್ತಲೇ ಇವೆ. ಇದೀಗ ರಾಮ್ ಚರಣ್​ಗೆ ಪೌರಾಣಿಕ ಹಿನ್ನೆಲೆಯುಳ್ಳ ಕತೆಯೊಂದನ್ನು ಯುವ ಬಾಲಿವುಡ್ ನಿರ್ದೇಶಕ ಹೇಳಿದ್ದಾರೆ. ಸಿನಿಮಾದ ಕತೆ ರಾಮ್ ಚರಣ್​ಗೆ ಬಹುವಾಗಿ ಮೆಚ್ಚುಗೆಯಾಗಿದ್ದು ಸಿನಿಮಾ ಶೀಘ್ರವೇ ಪ್ರಾರಂಭ ಆಗಲಿದೆ.

ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್, ಬಾಲಿವುಡ್ ನಿರ್ದೇಶಕನಿಂದ ಆಕನ್-ಕಟ್
Ram Charan
ಮಂಜುನಾಥ ಸಿ.
|

Updated on: Feb 13, 2025 | 3:02 PM

Share

‘RRR’ ಸಿನಿಮಾದ ಬಳಿಕ ರಾಮ್ ಚರಣ್ ನಟಿಸಿದ ಎರಡು ಸಿನಿಮಾಗಳು ಫ್ಲಾಪ್ ಆಗಿವೆ. ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಎರಡೂ ಸಿನಿಮಾಗಳು ಮಕಾಡೆ ಮಲಗಿವೆ. ಇದೀಗ ರಾಮ್ ಚರಣ್ ಬುಚ್ಚಿಬಾಬು ಸನಾ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ. ಸತತ ಎರಡು ಫ್ಲಾಪ್ ನೀಡಿದರೂ ಸಹ ರಾಮ್ ಚರಣ್​ಗೆ ಸಿನಿಮಾ ಅವಕಾಶಗಳೇನೂ ಕಡಿಮೆ ಆಗಿಲ್ಲ ಬದಲಿಗೆ ಬಹಳ ಒಳ್ಳೆಯ ಆಫರ್​ಗಳೇ ಬರುತ್ತಿವೆ. ಇದೀಗ ಪೌರಾಣಿಕ ಸಿನಿಮಾದ ಆಫರ್​ ಒಂದು ರಾಮ್ ಚರಣ್ ಅವರನ್ನು ಅರಸಿ ಬಂದಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಬಿಡುಗಡೆ ಆಗಿ ಹವಾ ಎಬ್ಬಿಸಿದ್ದ ಹಿಂದಿಯ ‘ಕಿಲ್’ ಸಿನಿಮಾದ ನಿರ್ದೇಶಕ ನಿಖಿಲ್ ನಾಗೇಶ್ ಭಟ್, ರಾಮ್ ಚರಣ್​ಗೆ ಪೌರಾಣಿಕ ಜಾನರ್​ನ ಕತೆಯೊಂದನ್ನು ಹೇಳಿದ್ದು, ರಾಮ್ ಚರಣ್ ಸಹ ಕತೆ ಒಪ್ಪಿದ್ದಾರಂತೆ. ಇದೊಂದು ಪೌರಾಣಿಕ ಥ್ರಿಲ್ಲರ್ ಕತೆಯಾಗಿದ್ದು, ಒಂದು ಪ್ರಮುಖ ಘಟನೆಯ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ಪೂರ್ಣ ರಾಮಾಯಣ ಅಥವಾ ಮಹಾಭಾರತದ ಕತೆಯ ಬದಲಿಗೆ ಕೇವಲ ಒಂದು ಪ್ರಮುಖ ಘಟನೆಯನ್ನು ಮಾತ್ರವೇ ಸಿನಿಮಾ ಮಾಡುತ್ತಿದ್ದಾರೆ ನಿಖಿಲ್ ನಾಗೇಶ್ ಭಟ್.

ಇದನ್ನೂ ಓದಿ:ತಪ್ಪು ಮಾತಾಡಿದೆ, ಕ್ಷಮಿಸಿ: ರಾಮ್ ಚರಣ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಲ್ಲು ಅರವಿಂದ್

ಈ ಸಿನಿಮಾ ಮಾಡುವುದು ನಿಖಿಲ್ ನಾಗೇಶ್ ಭಟ್​ರ ಬಹುವರ್ಷದ ಕನಸಾಗಿತ್ತಂತೆ. ಸಿನಿಮಾದ ಪ್ರೀ ವಿಶ್ಯುವಲ್ಸ್ ಕೆಲಸಗಳೆಲ್ಲ ಈಗಾಗಲೇ ಮುಗಿದು ಹೋಗಿದ್ದು, ಸಿನಿಮಾದ ಪ್ರೀ ಪ್ರೊಡಕ್ಷನ್ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ನಿಖಿಲ್ ನಾಗೇಶ್ ಭಟ್, ಪ್ರಸ್ತುತ ‘ಅಪೂರ್ವ’ ಹೆಸರಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಆ ಸಿನಿಮಾ ಬಹುತೇಕ ಕೊನೆಯ ಹಂತದಲ್ಲಿದೆ. ಈ ಥ್ರಿಲ್ಲರ್ ಸಿನಿಮಾ ಬಿಡುಗಡೆ ಆದ ಬಳಿಕ ಸಂಪೂರ್ಣವಾಗಿ ತಮ್ಮನ್ನು ತಾವು ಪೌರಾಣಿಕ ಸಿನಿಮಾದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

‘RRR’ ಸಿನಿಮಾದ ಕೆಲ ದೃಶ್ಯಗಳಲ್ಲಿ ಅದಕ್ಕೂ ಮುಂಚೆ ‘ಮಗಧೀರ’ ಸಿನಿಮಾಗಳಲ್ಲಿ ರಾಮ್ ಚರಣ್ ಪೌರಾಣಿಕ ಎನ್ನಬಹುದಾದ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಇದೇ ಮೊದಲ ಬಾರಿಗೆ ಪೂರ್ಣವಾಗಿ ಪೌರಾಣಿಕ ಕತೆ ಹೊಂದಿರುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದೀಗ ಬುಚ್ಚಿಬಾಬು ಸನಾ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್, ಆ ಸಿನಿಮಾದ ಬಳಿಕ ನಿಖಿಲ್ ನಾಗೇಶ್ ಭಟ್ ರ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸುಕುಮಾರ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್