AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್, ಬಾಲಿವುಡ್ ನಿರ್ದೇಶಕನಿಂದ ಆಕನ್-ಕಟ್

Ram Charan: RRR ಸಿನಿಮಾದ ಭಾರಿ ಯಶಸ್ಸಿನ ಬಳಿಕ ರಾಮ್ ಚರಣ್ ನಟಿಸಿರುವ ಎರಡು ಸಿನಿಮಾಗಳು ಪ್ಲಾಪ್ ಆಗಿವೆ. ಹಾಗಿದ್ದರೂ ಸಹ ರಾಮ್ ಚರಣ್​ಗೆ ಕೆಲ ಒಳ್ಳೆ ಸಿನಿಮಾ ಅವಕಾಶಗಳು ಅರಸಿ ಬರುತ್ತಲೇ ಇವೆ. ಇದೀಗ ರಾಮ್ ಚರಣ್​ಗೆ ಪೌರಾಣಿಕ ಹಿನ್ನೆಲೆಯುಳ್ಳ ಕತೆಯೊಂದನ್ನು ಯುವ ಬಾಲಿವುಡ್ ನಿರ್ದೇಶಕ ಹೇಳಿದ್ದಾರೆ. ಸಿನಿಮಾದ ಕತೆ ರಾಮ್ ಚರಣ್​ಗೆ ಬಹುವಾಗಿ ಮೆಚ್ಚುಗೆಯಾಗಿದ್ದು ಸಿನಿಮಾ ಶೀಘ್ರವೇ ಪ್ರಾರಂಭ ಆಗಲಿದೆ.

ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್, ಬಾಲಿವುಡ್ ನಿರ್ದೇಶಕನಿಂದ ಆಕನ್-ಕಟ್
Ram Charan
Follow us
ಮಂಜುನಾಥ ಸಿ.
|

Updated on: Feb 13, 2025 | 3:02 PM

‘RRR’ ಸಿನಿಮಾದ ಬಳಿಕ ರಾಮ್ ಚರಣ್ ನಟಿಸಿದ ಎರಡು ಸಿನಿಮಾಗಳು ಫ್ಲಾಪ್ ಆಗಿವೆ. ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಎರಡೂ ಸಿನಿಮಾಗಳು ಮಕಾಡೆ ಮಲಗಿವೆ. ಇದೀಗ ರಾಮ್ ಚರಣ್ ಬುಚ್ಚಿಬಾಬು ಸನಾ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ. ಸತತ ಎರಡು ಫ್ಲಾಪ್ ನೀಡಿದರೂ ಸಹ ರಾಮ್ ಚರಣ್​ಗೆ ಸಿನಿಮಾ ಅವಕಾಶಗಳೇನೂ ಕಡಿಮೆ ಆಗಿಲ್ಲ ಬದಲಿಗೆ ಬಹಳ ಒಳ್ಳೆಯ ಆಫರ್​ಗಳೇ ಬರುತ್ತಿವೆ. ಇದೀಗ ಪೌರಾಣಿಕ ಸಿನಿಮಾದ ಆಫರ್​ ಒಂದು ರಾಮ್ ಚರಣ್ ಅವರನ್ನು ಅರಸಿ ಬಂದಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಬಿಡುಗಡೆ ಆಗಿ ಹವಾ ಎಬ್ಬಿಸಿದ್ದ ಹಿಂದಿಯ ‘ಕಿಲ್’ ಸಿನಿಮಾದ ನಿರ್ದೇಶಕ ನಿಖಿಲ್ ನಾಗೇಶ್ ಭಟ್, ರಾಮ್ ಚರಣ್​ಗೆ ಪೌರಾಣಿಕ ಜಾನರ್​ನ ಕತೆಯೊಂದನ್ನು ಹೇಳಿದ್ದು, ರಾಮ್ ಚರಣ್ ಸಹ ಕತೆ ಒಪ್ಪಿದ್ದಾರಂತೆ. ಇದೊಂದು ಪೌರಾಣಿಕ ಥ್ರಿಲ್ಲರ್ ಕತೆಯಾಗಿದ್ದು, ಒಂದು ಪ್ರಮುಖ ಘಟನೆಯ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ಪೂರ್ಣ ರಾಮಾಯಣ ಅಥವಾ ಮಹಾಭಾರತದ ಕತೆಯ ಬದಲಿಗೆ ಕೇವಲ ಒಂದು ಪ್ರಮುಖ ಘಟನೆಯನ್ನು ಮಾತ್ರವೇ ಸಿನಿಮಾ ಮಾಡುತ್ತಿದ್ದಾರೆ ನಿಖಿಲ್ ನಾಗೇಶ್ ಭಟ್.

ಇದನ್ನೂ ಓದಿ:ತಪ್ಪು ಮಾತಾಡಿದೆ, ಕ್ಷಮಿಸಿ: ರಾಮ್ ಚರಣ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಲ್ಲು ಅರವಿಂದ್

ಈ ಸಿನಿಮಾ ಮಾಡುವುದು ನಿಖಿಲ್ ನಾಗೇಶ್ ಭಟ್​ರ ಬಹುವರ್ಷದ ಕನಸಾಗಿತ್ತಂತೆ. ಸಿನಿಮಾದ ಪ್ರೀ ವಿಶ್ಯುವಲ್ಸ್ ಕೆಲಸಗಳೆಲ್ಲ ಈಗಾಗಲೇ ಮುಗಿದು ಹೋಗಿದ್ದು, ಸಿನಿಮಾದ ಪ್ರೀ ಪ್ರೊಡಕ್ಷನ್ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ನಿಖಿಲ್ ನಾಗೇಶ್ ಭಟ್, ಪ್ರಸ್ತುತ ‘ಅಪೂರ್ವ’ ಹೆಸರಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಆ ಸಿನಿಮಾ ಬಹುತೇಕ ಕೊನೆಯ ಹಂತದಲ್ಲಿದೆ. ಈ ಥ್ರಿಲ್ಲರ್ ಸಿನಿಮಾ ಬಿಡುಗಡೆ ಆದ ಬಳಿಕ ಸಂಪೂರ್ಣವಾಗಿ ತಮ್ಮನ್ನು ತಾವು ಪೌರಾಣಿಕ ಸಿನಿಮಾದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

‘RRR’ ಸಿನಿಮಾದ ಕೆಲ ದೃಶ್ಯಗಳಲ್ಲಿ ಅದಕ್ಕೂ ಮುಂಚೆ ‘ಮಗಧೀರ’ ಸಿನಿಮಾಗಳಲ್ಲಿ ರಾಮ್ ಚರಣ್ ಪೌರಾಣಿಕ ಎನ್ನಬಹುದಾದ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಇದೇ ಮೊದಲ ಬಾರಿಗೆ ಪೂರ್ಣವಾಗಿ ಪೌರಾಣಿಕ ಕತೆ ಹೊಂದಿರುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದೀಗ ಬುಚ್ಚಿಬಾಬು ಸನಾ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್, ಆ ಸಿನಿಮಾದ ಬಳಿಕ ನಿಖಿಲ್ ನಾಗೇಶ್ ಭಟ್ ರ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸುಕುಮಾರ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್