AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಿಯಾರಾ ಬಿಕಿನಿ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ರಾಮ್ ಗೋಪಾಲ್ ವರ್ಮಾ

ಯಾವಾಗಲೂ ಫಿಲ್ಟರ್ ಇಲ್ಲದೇ ಮಾತನಾಡುವ ರಾಮ್ ಗೋಪಾಲ್ ವರ್ಮಾ ಅವರು ಈಗ ವಿವಾದ ಮಾಡಿಕೊಂಡಿದ್ದಾರೆ. ‘ವಾರ್ 2’ ಸಿನಿಮಾದ ಟೀಸರ್​ನಲ್ಲಿ ಕಿಯಾರಾ ಅಡ್ವಾಣಿ ಅವರ ಬಿಕಿನಿ ದೃಶ್ಯದ ಬಗ್ಗೆ ಆರ್​ಜಿವಿ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ. ಅವರ ಪೋಸ್ಟ್ ನೋಡಿದ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಳಿಕ ಆರ್​ಜಿವಿ ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ನಟಿ ಕಿಯಾರಾ ಬಿಕಿನಿ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ರಾಮ್ ಗೋಪಾಲ್ ವರ್ಮಾ
Kiara Advani, Ram Gopal Varma
ಮದನ್​ ಕುಮಾರ್​
|

Updated on: May 21, 2025 | 5:08 PM

Share

ನಟಿ ಕಿಯಾರಾ ಅಡ್ವಾಣಿ ಅವರು ‘ವಾರ್ 2’ (War 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್​ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಆಯಿತು. ಟೀಸರ್​ನಲ್ಲಿ ಇರುವ ಅನೇಕ ವಿಷಯಗಳ ಬಗ್ಗೆ ಸಿನಿಪ್ರಿಯರು ಮಾತನಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಕಿಯಾರಾ ಅಡ್ವಾಣಿ (Kiara Advani) ಅವರು ಬಿಕಿನಿ ಧರಿಸಿ ಕಾಣಿಸಿಕೊಂಡಿದ್ದಾರೆ. ಅದರ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್​ ನೋಡಿ ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ರಾಮ್ ಗೋಪಾಲ್ ವರ್ಮಾ ಅವರು ಹಲವು ಸಂದರ್ಭಗಳಲ್ಲಿ ಫಿಲ್ಟರ್ ಇಲ್ಲದೇ ಮಾತನಾಡುತ್ತಾರೆ. ಆದರೆ ಎಲ್ಲದಕ್ಕೂ ಒಂದು ಮಿತಿ ಎಂಬುದು ಇರಬೇಕು. ಈ ಬಾರಿ ರಾಮ್ ಗೋಪಾಲ್ ವರ್ಮಾ ಅವರು ಅಸಭ್ಯವಾಗಿ ಟ್ವೀಟ್ ಮಾಡಿದ್ದಾರೆ. ಅದರ ಜೊತೆ ಕಿಯಾರಾ ಅಡ್ವಾಣಿಯ ಬಿಕಿನಿ ಗೆಟಪ್​ನ ಫೋಟೋವನ್ನು ಹಂಚಿಕೊಂಡಿದ್ದಾರೆ.

‘ಆಕೆಯ ಹಿಂಬದಿಯನ್ನು (ಬ್ಯಾಕ್) ಪಡೆಯಲು ದೇಶಗಳ ಬದಲಿಗೆ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್ ನಡುವೆ ಯುದ್ಧ ನಡೆದರೆ ಇದು ಬ್ಯಾಕ್​ಬಸ್ಟರ್​ ಆಗುತ್ತದೆ’ ಎಂದು ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದರು. ಅದನ್ನು ನೋಡಿದ ಜನರು ತೀವ್ರ ಖಂಡನೆ ವ್ಯಕ್ತಪಡಿಸಿದರು. ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದರು.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಕಮೆಂಟ್​ಗಳ ಮೂಲಕ ರಾಮ್ ಗೋಪಾಲ್ ವರ್ಮಾ ಅವರನ್ನು ಜನರು ಟ್ರೋಲ್ ಮಾಡಿದ್ದಾರೆ. ‘ಈ ವ್ಯಕ್ತಿ ತನ್ನ ಬುದ್ಧಿ ಕಳೆದುಕೊಂಡು ಬಹಳ ವರ್ಷಗಳೇ ಆಗಿವೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ‘ಸಾರ್ವಜನಿಕವಾಗಿ ಇಷ್ಟ ಕೆಟ್ಟದಾಗಿ ಮಾತನಾಡುವ ವ್ಯಕ್ತಿ ಇನ್ನು ಖಾಸಗಿಯಾಗಿ ಎಷ್ಟು ಕೆಟ್ಟವನಿರಬಹುದು’ ಎಂಬ ಕಮೆಂಟ್ ಕೂಡ ಬಂದಿದೆ.

ಹೃತಿಕ್ ರೋಷನ್ ಎದುರು ಮಂಕಾದ ಜೂ. ಎನ್​ಟಿಆರ್​; ‘ವಾರ್ 2’ ಟೀಸರ್ ನೋಡಿ ಫ್ಯಾನ್ಸ್​ಗೆ ಬೇಸರ

‘ವಾರ್ 2’ ಸಿನಿಮಾದ ಟೀಸರ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನಿಯರ್​ ಎನ್​ಟಿಆರ್​ ಅವರ ಅಭಿಮಾನಿಗಳಿಗೆ ಈ ಟೀಸರ್ ಅಷ್ಟೇನೂ ಇಷ್ಟ ಆಗಿಲ್ಲ. ಅಲ್ಲದೇ ಕಿಯಾರಾ ಅಡ್ವಾಣಿ ಅವರ ಬಿಕಿನಿ ದೃಶ್ಯವನ್ನು ಎಐ ಮೂಲಕ ಸೃಷ್ಟಿ ಮಾಡಿರಬಹುದು ಎಂಬ ಅನುಮಾನ ಕೂಡ ಕೆಲವರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು