AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಹಿಂದೆ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಸಲ್ಮಾನ್​ ಖಾನ್​ಗೆ ಬಾಬಾ ಸಿದ್ಧಿಕಿ ಆಪ್ತವಾಗಿದ್ದರು. ಆ ಕಾರಣದಿಂದಲೇ ಹತ್ಯೆ ನಡೆಯಿತು ಎಂಬ ಮಾತು ಕೇಳಿಬಂದಿದೆ. ಈ ಎಲ್ಲ ವಿಚಾರಗಳ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಲು ಶುರು ಮಾಡಿದ್ದಾರೆ.

‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ
ರಾಮ್​ ಗೋಪಾಲ್ ವರ್ಮಾ, ಸಲ್ಮಾನ್​ ಖಾನ್​, ಲಾರೆನ್ಸ್​ ಬಿಷ್ಣೋಯ್
ಮದನ್​ ಕುಮಾರ್​
|

Updated on: Oct 16, 2024 | 10:09 PM

Share

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮಗೆ ಸಂಬಂಧ ಇಲ್ಲದ ವಿಚಾರಗಳಿಗೂ ತಲೆ ಹಾಕುತ್ತಾರೆ. ಈಗ ಅವರು ಸಲ್ಮಾನ್​ ಖಾನ್​ ಮತ್ತು ಲಾರೆನ್ಸ್​ ಬಿಷ್ಣೋಯ್ ವಿಚಾರದಲ್ಲಿ ಬಗ್ಗೆ ತಮ್ಮ ಮೂಗು ತೂರಿಸಿದ್ದಾರೆ. ಸಿನಿಮಾದಲ್ಲಿ ಅಂಡರ್​ವರ್ಲ್ಡ್​ ಕಥೆಯನ್ನು ತೋರಿಸಿದ್ದ ರಾಮ್​ ಗೋಪಾಲ್​ ವರ್ಮಾ ಅವರು ಈಗ ರಿಯಲ್ ಅಂಡರ್​ವರ್ಲ್ಡ್​ ಮಂದಿಯ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕೋಪಗೊಳ್ಳುವ ಸಾಧ್ಯತೆ ಕೂಡ. ಆದರೆ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಆರ್​ಜಿವಿ ಬಾಯಿಗೆ ಬಂದಂತೆ ‘ಎಕ್ಸ್​’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ಬಾಬಾ ಸಿದ್ಧಿಕಿ ಅವರ ಹತ್ಯೆ ನಡೆಯಿತು. ಸಲ್ಮಾನ್​ ಖಾನ್​ ಜೊತೆ ಬಾಬಾ ಸಿದ್ಧಿಕಿ ಅವರಿಗೆ ಆಪ್ತ ಒಡನಾಟ ಇತ್ತು. ಆ ಕಾರಣದಿಂದಲೇ ಬಾಬಾ ಸಿದ್ಧಿಕಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕಡೆಯವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಸಲ್ಮಾನ್ ಖಾನ್​ಗೆ ಯಾರೆಲ್ಲ ಸಹಾಯ ಮಾಡುತ್ತಾರೋ ಅವರನ್ನು ಕೂಡ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ರಾಮ್​ ಗೋಪಾಲ್ ವರ್ಮಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಬಿಷ್ಣೋಯ್​ಗೆ ಸಲ್ಮಾನ್​ ಖಾನ್​ ಅವರು ತಿರುಗೇಟು ನೀಡಬೇಕು. ಇಲ್ಲದಿದ್ದರೆ ಇದು ಸ್ಟಾರ್​ ನಟನ ಹೇಡಿತನದ ರೀತಿ ಕಾಣುತ್ತದೆ. ಬಿಷ್ಣೋಯ್​ಗೆ ಹೋಲಿಸಿದರೆ ತಾವು ದೊಡ್ಡ ಸೂಪರ್​ ಹೀರೋ ಎಂಬುದನ್ನು ಸಲ್ಮಾನ್​ ಖಾನ್ ಅವರು ತಮ್ಮ ಅಭಿಮಾನಿಗಳಿಗಾಗಿ ಎದ್ದು ನಿಲ್ಲಬೇಕು’ ಎಂದು ರಾಮ್​ ಗೋಪಾಲ್ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಅಷ್ಟೇ ಅಲ್ಲದೇ ಲಾರೆನ್ಸ್ ಬಿಷ್ಣೋಯ್​ನ ವ್ಯಕ್ತಿತ್ವವನ್ನು ವಿಶ್ಲೇಷಣೆ ಮಾಡುವಂತಹ ಪೋಸ್ಟ್​ಗಳನ್ನು ಕೂಡ ರಾಮ್​ ಗೋಪಾಲ್ ವರ್ಮಾ ಮಾಡಿದ್ದಾರೆ. ಆತನ ರೂಪ ಚೆನ್ನಾಗಿದೆ ಎಂದು ಹೊಗಳಿದ್ದಾರೆ. ಅಲ್ಲದೇ ಆತನನ್ನು ಹಿಂದೂ ಡಾನ್ ಎಂದು ಕೂಡ ಕರೆದಿದ್ದಾರೆ. ರಣಬೀರ್ ಕಪೂರ್ ನಟನೆಯ ಅನಿಮಲ್​ಗಿಂತಲೂ ಕ್ರೂರಿ ಆತ ಎಂದು ಆರ್​ಜಿವಿ ಹೇಳಿದ್ದಾರೆ. ಅವರ ಪೋಸ್ಟ್​ಗೆ ಅನೇಕರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ