AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುರಂಧರ್ ನೋಡಿ ಕಲಿಯಿರಿ: ಮೌನ ತಾಳಿದ ಬಾಲಿವುಡ್ ಮಂದಿಗೆ ಆರ್​ಜಿವಿ ಖಡಕ್ ಮಾತು

ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾದ ಗೆಲುವನ್ನು ಸಂಭ್ರಮಿಸುತ್ತಿಲ್ಲ. ಅವರೆಲ್ಲ ಮೌನಕ್ಕೆ ಜಾರಿರುವುದಕ್ಕೆ ರಾಮ್ ಗೋಪಾಲ್ ವರ್ಮಾ ಅವರು ಗರಂ ಆಗಿದ್ದಾರೆ. ಯಾರ ಹೆಸರನ್ನೂ ಅವರು ಪ್ರಸ್ತಾಪಿಸದೇ ಬಾಲಿವುಡ್ ಮಂದಿಗೆ ಮಾತಿನ ಚಾಟಿ ಬೀಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಧುರಂಧರ್ ನೋಡಿ ಕಲಿಯಿರಿ: ಮೌನ ತಾಳಿದ ಬಾಲಿವುಡ್ ಮಂದಿಗೆ ಆರ್​ಜಿವಿ ಖಡಕ್ ಮಾತು
Ram Gopal Varma, Ranveer Singh
ಮದನ್​ ಕುಮಾರ್​
|

Updated on: Mar 30, 2026 | 7:26 PM

Share

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾದ ದಿನದಿಂದಲೂ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ, ಈಗಾಗಲೇ ಜಾಗತಿಕವಾಗಿ 1,300 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡುವ ಮೂಲಕ ಹಳೇ ದಾಖಲೆಗಳನ್ನೆಲ್ಲ ಮುರಿದಿದೆ. ಆದರೆ, ಈ ಯಶಸ್ಸಿನ ನಡುವೆಯೂ ಬಾಲಿವುಡ್ ಮಂದಿ ತೋರುತ್ತಿರುವ ಮೌನ ಈಗ ಚರ್ಚೆಗೆ ಕಾರಣವಾಗಿದೆ. ಸದಾ ವಿವಾದಿತ ಹೇಳಿಕೆಗಳಿಂದ ಸುದ್ದಿ ಆಗುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಅವರು ಬಾಲಿವುಡ್ ಮಂದಿಯ ಈ ಮೌನದ ವಿರುದ್ಧ ಕಿಡಿಕಾರಿದ್ದಾರೆ.

ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ವರ್ಮಾ, ‘ಆದಿತ್ಯ ಧರ್ ಈಗಾಗಲೇ ಚಿತ್ರರಂಗದ ಅಡಿಯಲ್ಲಿ ಪರಮಾಣು ಬಾಂಬ್ ಸಿಡಿಸಿದ್ದಾರೆ. ಆದರೆ ಇಡೀ ಇಂಡಸ್ಟ್ರಿ ಈ ಬಗ್ಗೆ ವಹಿಸಿರುವ ಭಯಾನಕ ಮೌನ ನನಗೆ ಆಘಾತ ತಂದಿದೆ’ ಎಂದು ಬರೆದುಕೊಂಡಿದ್ದಾರೆ. ‘ಈ ಸಿನಿಮಾವನ್ನು ನೋಡಿ ಕಲಿಯಿರಿ’ ಎಂದು ಅವರು ಕಿವಿಮಾತು ಹೇಳಿದ್ದಾರೆ.

‘ಧುರಂಧರ್ 2 ಸಿನಿಮಾದ ಸ್ಫೋಟಕ್ಕೆ ಚಿತ್ರರಂಗದವರೆಲ್ಲರೂ ಬಾಹ್ಯಾಕಾಶಕ್ಕೆ ಹಾರಿ ಹೋಗಿದ್ದಾರಾ? ಅದಕ್ಕಾಗಿಯೇ ಅವರ ಚಪ್ಪಾಳೆ ನಮಗೆ ಕೇಳಿಸುತ್ತಿಲ್ಲವೇ? ಅಥವಾ ಇದೊಂದು ಕೇವಲ ಪ್ರೊಪಗಾಂಡ ಎಂದು ಭ್ರಮೆಯಲ್ಲಿದ್ದಾರಾ? ಅಥವಾ ಈ ಚಿತ್ರದ ಅದ್ಭುತ ಮೇಕಿಂಗ್ ನೋಡಿ ತಾವಿನ್ನು ಮುಂದೆ ಇಂತಹ ಸಿನಿಮಾ ಮಾಡಲು ಸಾಧ್ಯವಿಲ್ಲ ಎಂದು ಪಾರ್ಶ್ವವಾಯು ಪೀಡಿತರಾಗಿದ್ದಾರಾ’ ಎಂದು ಆರ್‌.ಜಿ.ವಿ. ವ್ಯಂಗ್ಯವಾಡಿದ್ದಾರೆ.

ಈ ಚಿತ್ರದ ಯಶಸ್ಸನ್ನು ಕಡೆಗಣಿಸುವುದು ಮೂರ್ಖತನ ಎಂದು ರಾಮ್ ಗೋಪಾಲ್ ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ‘ನಿಮ್ಮ ಕಣ್ಣೆದುರೇ ಬೆಂಕಿ ಉಗುಳುತ್ತಿರುವ ಡೈನೋಸಾರ್‌ನಂತಹ ಈ ಸಿನಿಮಾವನ್ನು ಕಡೆಗಣಿಸಲು ಹೇಗೆ ಸಾಧ್ಯ? ಈ ಸಿನಿಮಾದ ಬಾಕ್ಸ್ ಆಫೀಸ್ ಸದ್ದು ನಿಮ್ಮ ಕಾಲ ಕೆಳಗಿನ ನೆಲವನ್ನೇ ನಡುಗಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ

‘ನನ್ನ ಎಲ್ಲಾ ಸಿನಿಮಾ ಮಿತ್ರರಿಗೆ ಒಂದು ಸಲಹೆ. ಇದು ಸಿನಿಮಾ ಮೇಕಿಂಗ್‌ನ ಹೊಸ ಕೋರ್ಸ್ ಇದ್ದಂತೆ. ದಯವಿಟ್ಟು ಧುರಂಧರ್ 2 ಸಿನಿಮಾವನ್ನು ಗಂಭೀರವಾಗಿ ಅಧ್ಯಯನ ಮಾಡಿ. ಇಲ್ಲವಾದರೆ 2026ರ ಮಾರ್ಚ್ 19ರ ನಂತರದ ಸಿನಿಮಾದ ಸ್ಮಶಾನದಲ್ಲಿ ನೀವು ಹೂತುಹೋಗುತ್ತೀರಿ’ ಎಂದು ಖಡಕ್ ಆಗಿ ಹೇಳಿದ್ದಾರೆ. ಎಸ್.ಎಸ್. ರಾಜಮೌಳಿ, ಕರಣ್ ಜೋಹರ್, ಆಲಿಯಾ ಭಟ್ ಮುಂತಾದವರು ಈ ಸಿನಿಮಾಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಚಕ್ರದ ಅಡಿಯಲ್ಲಿ ಸಿಲುಕಿದ ಕರು
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಮಂಟಪವನ್ನೇ ಹಾರದಂತೆ ತಡೆದವನು ಎಂದಾದರೂ ಪತ್ನಿ ಕೈ ಬಿಡುವುದುಂಟೇ!
ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ!
ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ!
ಜೈಲಿನಿಂದಲೇ ವಿಡಿಯೋ ಕರೆ ಮಾಡಿ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ!
ಜೈಲಿನಿಂದಲೇ ವಿಡಿಯೋ ಕರೆ ಮಾಡಿ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ!
ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್
ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್