AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆ ಮಾಡಿದ್ದು ಸರಿ ಎಂದು ಬೆಂಬಲಕ್ಕೆ ನಿಂತ ರಾಮ್​ ಗೋಪಾಲ್​ ವರ್ಮಾ

ತಮ್ಮದೇ ಸಾವಿನ ಬಗ್ಗೆ ಫೇಕ್​ ನ್ಯೂಸ್​ ಹರಡಿಸಿದ್ದ ನಟಿ ಪೂನಂ ಪಾಂಡೆ ವಿರುದ್ಧ ಕೋಟ್ಯಂತರ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಿರ್ದೇಶಕ ರಾಮ್ ಗೋಪಾಲ್​ ವರ್ಮಾ ಅವರು ಪೂನಂ ಪಾಂಡೆ ಪರವಾಗಿ ಬ್ಯಾಟ್​ ಬೀಸಿದ್ದಾರೆ. ಈ ನಟಿ ಮಾಡಿದ್ದು ಸರಿ ಎಂದು ಅವರು ಬೆನ್ನು ತಟ್ಟಿದ್ದಾರೆ. ಅಲ್ಲದೇ ಪೂನಂ ಪಾಂಡೆಗೆ ಅವರು ದೀರ್ಘ ಆಯಸ್ಸು ಸಿಗಲಿ ಎಂದು ಶುಭ ಕೋರಿದ್ದಾರೆ.

ಪೂನಂ ಪಾಂಡೆ ಮಾಡಿದ್ದು ಸರಿ ಎಂದು ಬೆಂಬಲಕ್ಕೆ ನಿಂತ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ, ಪೂನಂ ಪಾಂಡೆ
ಮದನ್​ ಕುಮಾರ್​
|

Updated on: Feb 04, 2024 | 9:10 AM

Share

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಯಾವಾಗಲೂ ಡಿಫರೆಂಟ್​ ಆಗಿ ಆಲೋಚನೆ ಮಾಡುತ್ತಾರೆ. ಸದ್ಯಕ್ಕೆ ಎಲ್ಲರೂ ಪೂನಂ ಪಾಂಡೆಗೆ (Poonam Pandey) ಹಿಡಿಶಾಪ ಹಾಕುತ್ತಿದ್ದಾರೆ. ಆದರೆ ರಾಮ್​ ಗೋಪಾಲ್​ ವರ್ಮಾ ಮಾತ್ರ ಪೂನಂ ಪಾಂಡೆಗೆ ಬೆಂಬಲ ಸೂಚಿಸುತ್ತಿದ್ದಾರೆ. ಗರ್ಭಕಂಠದ ಕ್ಯಾನ್ಸರ್​ (Cervical Cancer) ಬಗ್ಗೆ ಜಾಗೃತಿ ಮೂಡಿಸಲು ಸುಳ್ಳು ಸುದ್ದಿ ಹಬ್ಬಿಸಿದ ನಟಿಯ ಹುಚ್ಚು ಸಾಹಸವನ್ನು ಆರ್​ಜಿವಿ ಶ್ಲಾಘಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿ, ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಜೊತೆಗೆ ಪೂನಂ ಪಾಂಡೆಯ ಇನ್​ಸ್ಟಾಗ್ರಾಮ್​ ಪೋಸ್ಟ್​ ಅನ್ನು ಕೂಡ ರಾಮ್​ ಗೋಪಾಲ್​ ವರ್ಮಾ ಹಂಚಿಕೊಂಡಿದ್ದಾರೆ. ಇದಕ್ಕೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಹೇ ಪೂನಂ ಪಾಂಡೆ… ಈ ಒಂದು ಕಾರಣಕ್ಕಾಗಿ ನೀವು ಇಟ್ಟಿರುವ ಹೆಜ್ಜೆಗೆ ಎಲ್ಲರಿಂದ ಕೆಲವು ಟೀಕೆಗಳು ಬರಬಹುದು. ಆದರೆ, ಸಾವಿನ ಸುಳ್ಳು ಸುದ್ದಿ ಮೂಲಕ ನೀವು ಮೂಡಿಸಿದ ಜಾಗೃತಿ ಮತ್ತು ಮಾಡಿದ ಸಾಧನೆಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಎಲ್ಲ ಕಡೆಗಳಲ್ಲೂ ಈಗ ಗರ್ಭಕಂಠದ ಕ್ಯಾನ್ಸರ್​ ಬಗ್ಗೆ ಚರ್ಚೆ ಹೆಚ್ಚಾಗಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರವಾಗಿದೆ. ನಿಮಗೆ ಖುಷಿಯ ಜೊತೆ ದೀರ್ಘ ಆಯಸ್ಸು ಸಿಗಲಿ’ ಎಂದು ರಾಮ್​ ಗೋಪಾಲ್​ ವರ್ಮಾ ಹಾರೈಸಿದ್ದಾರೆ.

ಘಟನೆಯ ಹಿನ್ನೆಲೆ:

ಗರ್ಭಕಂಠದ ಕ್ಯಾನ್ಸರ್​ನಿಂದ ಪೂನಂ ಪಾಂಡೆ ಅವರು ಫೆಬ್ರವರಿ 2ರಂದು ನಿಧನರಾದರು ಎಂದು ಫೇಕ್​ ನ್ಯೂಸ್​ ಹರಡಿತು. ಸ್ವತಃ ಪೂನಂ ಪಾಂಡೆ ಅವರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಸುದ್ದಿ ಪ್ರಕಟ ಮಾಡಿದ್ದರಿಂದ ಎಲ್ಲರೂ ಇದನ್ನು ನಿಜವೆಂದು ನಂಬಿದ್ದರು. ಅದರ ನಡುವೆ ಅನೇಕ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಮೂರು ದಿನಗಳ ಹಿಂದೆ ಆರಾಮಾಗಿ ಓಡಾಡಿಕೊಂಡಿದ್ದ ಪೂನಂ ಪಾಂಡೆ ಅಚಾನಕ್​ ಆಗಿ ಸತ್ತರು ಎಂದರೆ ಅದರಲ್ಲಿ ಏನೋ ಅನುಮಾನ ಇದೆ ಎಂದು ಹಲವು ಕಮೆಂಟ್​ ಮಾಡಿದರು.

ಇದನ್ನೂ ಓದಿ: ಸುಳ್ಳು ಸುದ್ದಿಯಲ್ಲೂ ದಾಖಲೆ ಬರೆದ ಪೂನಂ ಪಾಂಡೆ; ಇಲ್ಲಿದೆ ವಿವರ..

‘ನಾನು ಬದುಕಿದ್ದೇನೆ’:

ಸುಳ್ಳು ಸುದ್ದಿ ಹರಡಿಸಿ 24 ಗಂಟೆ ಕಳೆದ ಬಳಿಕ ಸ್ವತಃ ಪೂನಂ ಪಾಂಡೆ ಅವರು ವಿಡಿಯೋ ಮೂಲಕ ಪ್ರತ್ಯಕ್ಷ ಆದರು. ‘ನಾನು ಬದುಕಿದ್ದೇನೆ’ ಎಂದು ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದರು. ಗರ್ಭಕಂಠದ ಕ್ಯಾನ್ಸರ್​ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ತಾವು ಫೇಕ್​ ನ್ಯೂಸ್​ ಹರಡಿದ್ದಾಗಿ ಅವರು ಹೇಳಿದ್ದಾರೆ. ಅಲ್ಲದೇ, ತಮ್ಮ ಕೆಲಸವನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ನಟಿಯ ಈ ನಡೆಗೆ ಅನೇಕರಿಂದ ಟೀಕೆ ವ್ಯಕ್ತವಾಗಿದೆ. ಕೆಲವು ಕಡೆಗಳಲ್ಲಿ ಕೇಸ್​ ಕೂಡ ದಾಖಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ